ತಹಶೀಲ್ದಾರ್ ಕಚೇರಿಗೆ ಮುತ್ತಿಗೆ
Team Udayavani, Jan 13, 2018, 11:13 AM IST
ಅಫಜಲಪುರ: ತಾಲೂಕಿನ ಅನೇಕ ಕಡೆಗಳಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಆದರೆ ಪಟ್ಟಣದಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಿಲ್ಲ. ಇದರಿಂದ ಪಟ್ಟಣದ ರೈತರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಹೀಗಾಗಿ ಪಟ್ಟಣದಲ್ಲೊಂದು ತೊಗರಿ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ ಪಟ್ಟಣದ ರೈತರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಮುಖಂಡರಾದ ಸೂರ್ಯಕಾಂತ ನಾಕೇದಾರ, ಸಿದ್ರಾಮಪ್ಪ ಮನಮಿ, ಚಂದ್ರಶೇಖರ ಕರ್ಜಗಿ,
ಜಿ.ಪಂ ಸದಸ್ಯ ಅರುಣಕುಮಾರ ಪಾಟೀಲ್, ಮಾಜಿ ಸದಸ್ಯರಾದ ಮತೀನ್ ಪಟೇಲ್, ಸಿದ್ದಾರ್ಥ ಬಸರಿಗಿಡ
ಮಾತನಾಡಿದರು.
ಪಟ್ಟಣದಲ್ಲಿ ತೊಗರಿ ಖರೀದಿ ಕೇಂದ್ರ ತೆರೆಯದೆ ಇರುವುದರಿಂದ ಇಲ್ಲಿನ ರೈತರಿಗೆ ಅನಾನೂಕೂಲ ಆಗುತ್ತಿದೆ.
ಖರೀದಿ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಎರಡೂಮೂರು ಬಾರಿ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಸರ್ಕಾರ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಇನ್ನು ಮೂರು ದಿನಗಳ ಕಾಲ ಗಡುವು ನೀಡಲಾಗುವುದು. ಖರೀದಿ ಕೇಂದ್ರ ತೆರೆಯದಿದ್ದರೆ ರೈತರು ಬೆಳೆದ ತೊಗರಿಯನ್ನು ತಂದು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿಟ್ಟು ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಸ್ಥಳಕ್ಕೆ ಆಗಮಿಸಿದ ಪ್ರೊಬೇಷನರಿ ಕೆಎಎಸ್ ಅಧಿಕಾರಿ ವರ್ಷಾ ಬೇಗಾರ್, ಕೃಷಿ ಅಧಿಕಾರಿ ಶರಣಗೌಡ ಪಾಟೀಲ,
ತೊಗರಿ ಖರೀದಿ ಕೇಂದ್ರದ ತಾಲೂಕು ನೋಡಲ್ ಅಧಿಕಾರಿ ಶರಣಗೌಡ ಬಿರಾದಾರ ಮಾತನಾಡಿ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮೂರುದಿನಗಳ ಒಳಗಾಗಿ ಪಟ್ಟಣದಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದು ಭರವಸೆ ನೀಡಿದರು. ನಂತರ ರೈತರು ಪ್ರತಿಭಟನೆ ಹಿಂದಕ್ಕೆ ಪಡೆದರು.
ಮುಖಂಡರಾದ ಶಿವಪುತ್ರಪ್ಪ ಸಂಗೋಳಗಿ, ಸದಾಶಿವ ಮೇತ್ರಿ, ಸಿದ್ರಾಮಪ್ಪ ಮನಮಿ, ಶಂಕರ ಸೋಬಾನಿ,
ಭೀಮಾಶಂಕರ ದಾನಮಗುಡಿ, ಮದಾದೇವಪ್ಪ ಕಲಕೇರಿ, ಚಂದ್ರಾಮಪ್ಪ ಬಳಗುಂಡಿ, ಶಿವಾನಂದ ಗಾಡಿಸಾಹುಕಾರ,
ಗಂಗಾಧರ ಶ್ರೀಗಿರಿ, ಚಿದಾನಂದ ಮಠ, ಸಂಜು ನಿಂಬಾಳ, ಸುಭಾಷ ರಾಠೊಡ, ಸತೀಶ ಮಾಳಗೆ, ಅಮರನಾಥ ಮೇತ್ರಿ, ಜಕ್ಕಪ್ಪ ಪೂಜಾರಿ, ಮಂಜುನಾಥ ಕಲಕೇರಿ, ನಾಗು ಮಾಡ್ಯಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!