ರಂಜನಿ ರಾಗವನ್ನು…


Team Udayavani, Jan 14, 2018, 5:41 PM IST

hqdefault.jpg

ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಗೌರಿಯಾಗಿ ಮನೆಮಂದಿಯ ಮನಗೆದ್ದಿರುವ ರಂಜನಿ ರಾಘವನ್‌ ಈಗ ಹಿರಿತೆರೆಗೂ ಕಾಲಿಟ್ಟು, ಈಗಾಗಲೇ ರಾಜ-ಹಂಸ ಹಾಗೂ ಸುಬ್ಬ-ಸುಬ್ಬಿ ಎಂಬ ಎರಡು ಸಿನೆಮಾಗಳಲ್ಲಿ ನಾಯಕಿಯಾಗಿ ನಟಿಸಿರುವ ಸುದ್ದಿ ಗೊತ್ತೇ ಇದೆ. ಈ ಪೈಕಿ ಸುಬ್ಬ-ಸುಬ್ಬಿ ಬಿಡುಗಡೆಯಾಗಲಿಲ್ಲ. ಬಿಡುಗಡೆಯಾದ ರಾಜ-ಹಂಸ ರಂಜನಿಗೆ ಒಳ್ಳೆಯ ಹೆಸರು ತಂದುಕೊಟ್ಟಿಲ್ಲ. ಈಗ ಆ ಚಿತ್ರದ ನಂತರ ರಂಜನಿ ಸದ್ದಿಲ್ಲದೆ ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಅದೇ ಸೂಫಿ. 

ಸೂಫಿ ಎಂಬ ಹೆಸರೇ ಹೇಳುವಂತೆ ಇದೊಂದು ಸಂಗೀತಕ್ಕೆ ಸಂಬಂಧಿಸಿದ ಪದ. ಇಲ್ಲಿ ರಂಜನಿ ಅವರು ಟೈಟಲ್‌ ಪಾತ್ರ ನಿರ್ವಹಿಸುತ್ತಿದ್ದಾರೆ ಎಂಬುದು ವಿಶೇಷ. ಇಡೀ ಚಿತ್ರದ ಕಥೆ ಕೂಡ ಅವರ ಸುತ್ತವೇ ಸಾಗಲಿದೆ. ಇನ್ನು, ಈ ಚಿತ್ರಕ್ಕೆ ಶಿವು ಜಮಖಂಡಿ ನಿರ್ದೇಶಕರು. ವಿಜಯ್‌ ರಾಘವೇಂದ್ರ ಅಭಿನಯದ ನನ್ನ ನಿನ್ನ ಪ್ರೇಮಕಥೆ ಬಳಿಕ ಶಿವು ಜಮಖಂಡಿ ನಿರ್ದೇಶಿಸುತ್ತಿರುವ ಚಿತ್ರವಿದು. ಈ ಚಿತ್ರಕ್ಕೆ  ವಿನೋದ್‌ ಪಾಟೀಲ್‌ ಹೀರೋ. ಜಸ್ಟ್‌ ಆಕಸ್ಮಿಕ ಚಿತ್ರ ಮಾಡಿದ್ದ ವಿನೋದ್‌ ಪಾಟೀಲ್‌ಗೆ ಸೂಫಿ ಎರಡನೆಯ ಚಿತ್ರ.

ಇದೊಂದು ಮ್ಯೂಸಿಕಲ್‌ ಜರ್ನಿ ಸಿನೆಮಾ ಎನ್ನುವ ರಂಜನಿ, “ಇಡೀ ಚಿತ್ರ ಸೂಫಿ ಸಂಗೀತದ ಹಿನ್ನೆಲೆಯಲ್ಲೇ ಸಾಗಲಿದೆ. ನನ್ನ ಪಾತ್ರಕ್ಕೆ ತುಂಬಾ ಪ್ರಾಮುಖ್ಯ ಕೊಡಲಾಗಿದೆ. ಅದೊಂದು ರೀತಿ ಬಜಾರಿಯಂತಹ ಪಾತ್ರವದು. ರಾಜಹಂಸ ಚಿತ್ರದ ಬಳಿಕ ಕೇಳಿದ ಕಥೆಗಳ ಸಂಖ್ಯೆ ಎಂಟು. ಆ ಪೈಕಿ ಮಿಸ್‌ ಆಗಿದ್ದು ಎರಡು. ಬಿಟ್ಟಿದ್ದು ಆರು. ಮಿಸ್‌ ಆಗೋಕೆ ಕಾರಣ, ಡೇಟ್ಸ್‌. ಕೈಬಿಡಲು ಕಾರಣ ಕಥೆ, ಪಾತ್ರ ಹೊಂದಿಕೆಯಾಗಲ್ಲ ಎಂಬುದಕ್ಕೆ. ಸುಮ್ಮನೆ ಬಂದುಹೋಗುವ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ನನಗೆ ಇಷ್ಟವಿರಲಿಲ್ಲ. ಹಾಗಾಗಿ, ಒಂದಷ್ಟು ಚಿತ್ರಗಳನ್ನು ಕೈ ಬಿಟ್ಟದ್ದು ನಿಜ. ರಾಜಹಂಸ ನನಗೊಂದು ಒಳ್ಳೆಯ ಇಮೇಜ್‌ ತಂದುಕೊಡು¤. ಆ ಚಿತ್ರ ನೋಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು. ಅದರಿಂದ ಒಂದಷ್ಟು ಅವಕಾಶಗಳೂ ಬಂದಿದ್ದುಂಟು. ಹಾಗೆ ಬಂದ ಅವಕಾಶಗಳಲ್ಲಿ ಸೂಫಿ ಚಿತ್ರವೂ ಒಂದು’ ಎಂದು ಹೇಳಿಕೊಳ್ಳುತ್ತಾರೆ ರಂಜನಿ.

ಫೆಬ್ರವರಿಯಲ್ಲಿ ಚಿತ್ರೀಕರಣ ಶುರುವಾಗಲಿದ್ದು, ಸುಮಾರು 50 ದಿನಗಳ ಚಿತ್ರೀಕರಣ ನಡೆಯಲಿದೆ. ಕಿರುತೆರೆ ನಟಿಯರು ಬೆಳ್ಳಿತೆರೆಗೆ ಬರುತ್ತಿರುವುದು ಹೊಸದೇನಲ್ಲ. ಹಾಗೆ ಬಂದವರು ಅನೇಕರು. ಆದರೆ, ಉಳಿದದ್ದು ಬೆರಳೆಣಿಕೆಯಷ್ಟು ನಟಿಯರು. ಆ ಸಾಲಿಗೆ ರಂಜನಿ ರಾಘವನ್‌ ಕೂಡ ಸೇರಿದ್ದಾರೆ. ಕಿರುತೆರೆಯಲ್ಲಿ ಸಖತ್‌ ಜನಪ್ರಿಯರಾಗಿರುವ ರಂಜನಿ, ಹಿರಿತೆರೆಯಲ್ಲೂ ಅದೇ ರೀತಿ ಮಿಂಚುತ್ತಾರಾ ಎಂಬುದನ್ನು ಮುಂದಿನ ದಿನಗಳಲ್ಲಿ ನೋಡಬೇಕಿದೆ.

ಟಾಪ್ ನ್ಯೂಸ್

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.