ಸುತ್ತೂರು ಮಠದ ಕಾರ್ಯ ಸ್ತುತ್ಯಾರ್ಹ


Team Udayavani, Jan 15, 2018, 6:25 AM IST

14JANUARY-MYS-MASS-MARRIAGE.jpg

ಮೈಸೂರು: ಭಾರತದಲ್ಲಿ ಮದುವೆಗೆ ಅನಗತ್ಯ ಖರ್ಚು ಮಾಡಿ, ಅದಕ್ಕಾಗಿ ಸಾಲ ಮಾಡಿಕೊಂಡು,ಜೀವನಪೂರ್ತಿ ಹೆಣಗುತ್ತಾರೆಂಬ ಮಾತು ಕೇಳಿದ್ದೇನೆ.

ಆದರೆ, ಸುತ್ತೂರು ಮಠ ಸಾಮೂಹಿಕ ವಿವಾಹದ ಮೂಲಕ ಖರ್ಚಿಲ್ಲದೆ ಮದುವೆ ಮಾಡಿಸುತ್ತಿರುವುದು ಸ್ತುತ್ಯಾರ್ಹ ಎಂದು ಮಾರಿಷಸ್‌ ಗಣರಾಜ್ಯದ ಉಪ ರಾಷ್ಟ್ರಪತಿ ಪರಮಶಿವುಂ ಪಿಳ್ಳೆ„ ವ್ಯಾಪೂರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ಸುತ್ತೂರು ಕ್ಷೇತ್ರದಲ್ಲಿ ಭಾನುವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಏಕಕಾಲಕ್ಕೆ 145 ಜೋಡಿಗಳ ಸಾಮೂಹಿಕ ವಿವಾಹವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ತಮಗೆ ಸಂತಸ ತಂದಿದೆ. ಸಾಮೂಹಿಕ ವಿವಾಹದ ಮೂಲಕ ಸಾಮಾಜಿಕ ಪ್ರಜ್ಞೆ ಇರುವ ಪ್ರಜೆಗಳನ್ನು ಸಮಾಜಕ್ಕೆ ಕೊಡುತ್ತಿರುವ ಸುತ್ತೂರು ಮಠದ ಈ ಸೇವೆ ಅತಿದೊಡ್ಡ ಸಾಮಾಜಿಕ ಕಾರ್ಯ. ಮಠದ ವತಿಯಿಂದಲೆ ಚಿನ್ನದ ತಾಳಿ, ಬೆಳ್ಳಿ ಕಾಲುಂಗುರ, ಬಟ್ಟೆಯನ್ನು ಕೊಟ್ಟು ಮದುವೆ ಮಾಡಿಕೊಡುತ್ತಿರುವುದರಿಂದ ಮದುವೆಗಾಗಿ ಕೂಡಿಟ್ಟ ಹಣವನ್ನು ನಿಮ್ಮ ಮುಂದಿನ ಜೀವನವನ್ನು ಕಟ್ಟಿಕೊಳ್ಳಲು ಬಳಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್‌ ಅವರು ಸಾಮೂಹಿಕ ವಿವಾಹದಲ್ಲಿ ಗಂಡು-ಹೆಣ್ಣಿಗೆ ಪ್ರತಿಜಾnವಿಧಿ ಬೋಧಿಸಿದರು. ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸುಕ್ಷೇತ್ರ ಹಾರಕೂಡ
ಚನ್ನಬಸವೇಶ್ವರ ಮಠದ ಚನ್ನವೀರ ಶಿವಾಚಾರ್ಯ ಸ್ವಾಮಿಗಳು, ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮಿಗಳು ಆಶೀರ್ವಚನ ನೀಡಿದರು.

ದಾಂಪತ್ಯಕ್ಕೆ ಕಾಲಿಟ್ಟ 145 ಜೋಡಿ: ಸುತ್ತೂರು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕಳೆದ 18 ವರ್ಷಗಳಿಂದ ಸಾಮೂಹಿಕ ವಿವಾಹ ನಡೆಸಿಕೊಂಡು ಬರಲಾಗುತ್ತಿದೆ. ಈವರೆಗೆ 2,464ಕ್ಕೂ ಹೆಚ್ಚು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಧರ್ಮ ಮತ್ತು ಜಾತಿಭೇದವಿಲ್ಲದೆ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ. ವಿವಾಹದ ಸಂದರ್ಭದಲ್ಲಿ ವರನಿಗೆ ಪಂಚೆ, ಶರ್ಟು, ವಲ್ಲಿ ಹಾಗೂ ವಧುವಿಗೆ ಸೀರೆ, ರವಿಕೆ, ಮಾಂಗಲ್ಯ, ಬೆಳ್ಳಿ ಕಾಲುಂಗುರಗಳನ್ನು ನೀಡಲಾಗುತ್ತದೆ. ಭಾನುವಾರ ನಡೆದ ಸಾಮೂಹಿಕ ವಿವಾಹದಲ್ಲಿ ವೀರಶೈವ/ಲಿಂಗಾಯತ-06, ಹಿಂದುಳಿದ ವರ್ಗ-29, ಪರಿಶಿಷ್ಟ ಜಾತಿ-84, ಪರಿಶಿಷ್ಟ 08, ಅಂತರ ಜಾತಿ-12, ಅಂಗವಿಕಲರು-03, ವಿಧುರ-ವಿಧವೆ-03 ಹಾಗೂ ತಮಿಳುನಾಡಿನ ಐದು ಜೋಡಿಗಳು ಸೇರಿ ಒಟ್ಟಾರೆ 145 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಇಂದು ರಥೋತ್ಸವ, ನೂತನ ರಥ ಸಿದಟಛಿ: ಸೋಮವಾರ ನಡೆಯಲಿರುವ ಜಾತ್ರಾ ಮಹೋತ್ಸವದಲ್ಲಿ ಆದಿ ಜಗದ್ಗುರುಗಳ ರಥಾರೋಹಣಕ್ಕೆ ನೂತನ ರಥ ಸಿದ್ಧವಾಗಿದೆ. 55 ಅಡಿ ಎತ್ತರ, 40 ಟನ್‌ ಭಾರದ ಈ ನೂತನ ರಥದಲ್ಲಿ ಆದಿ ಜಗದ್ಗುರುಗಳ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಲಿದೆ. ಸಾವಿರಾರು ಸಂಖ್ಯೆಯ ಭಕ್ತರು ಭಾಗಿಯಾಗುವ ನಿರೀಕ್ಷೆಯಿದೆ.

ಹುಲಿ ಸಫಾರಿಯಲ್ಲಿ ಭಾಗಿ
ಗುಂಡ್ಲುಪೇಟೆ:
ಭಾನುವಾರ ಸಂಜೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಮಾರಿಷಸ್‌
ಗಣರಾಜ್ಯದ ಉಪ ರಾಷ್ಟ್ರಪತಿ ಭೇಟಿ ನೀಡಿ ಸಫಾರಿಯಲ್ಲಿ ಪಾಲ್ಗೊಂಡರು. ಹುಲಿ ಯೋಜನೆ ನಿರ್ದೇಶಕರ ಕಚೇರಿಗೆ 
ಭೇಟಿ ನೀಡಿ, ನಂತರ ಸಫಾರಿ ಜೀಪ್‌ನಲ್ಲಿ ಪರಮಶಿವುಂ ಪಿಳ್ಳೆ„ ಮತ್ತು ಅವರ ಕಚೇರಿಯ ಸಿಬ್ಬಂದಿಗಳು ಸಫಾರಿಯಲ್ಲಿ ಪಾಲ್ಗೊಂಡರು. ಬಳಿಕ, ಊಟಿಗೆ ಪ್ರಯಾಣ ಬೆಳೆಸಿದರು.

ಟಾಪ್ ನ್ಯೂಸ್

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

hubli

Hubli:ಬಸ್‌ ಸೋರದಿದ್ದರೂ ಕೊಡೆ ಹಿಡಿದು ಚಾಲನೆ; ಮೋಜಿಗಾಗಿ ಮಾಡಿದ ತಪ್ಪಿಗೆ ಅಮಾನತು ಶಿಕ್ಷೆ

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗರಿ ಜಲಪಾತ

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗಿರಿ ಜಲಪಾತ

moorane krishnappa review

Moorane Krishnappa Review; ಕಾಮಿಡಿ ಡೋಸ್‌ನಲ್ಲಿ ಕೃಷ್ಣಪ್ಪ ಕಮಾಲ್‌!

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗರಿ ಜಲಪಾತ

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗಿರಿ ಜಲಪಾತ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

HD Kumaraswamy ನಿಮ್ಮ ಪುತ್ರನನ್ನು ವಿದೇಶಕ್ಕೆ ಪಾರ್ಟಿಗೆ ಕಳುಹಿಸಿದ್ದ ನೀವೇನಾ?

HD Kumaraswamy ನಿಮ್ಮ ಪುತ್ರನನ್ನು ವಿದೇಶಕ್ಕೆ ಮೋಜು ಮಾಡಲು ಕಳುಹಿಸಿದ್ದು ನೀವೇನಾ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

K Annamalai

K Annamalai; ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಅಣ್ಣಾಮಲೈ

Koppala; ಇಂದಿನಿಂದ ಎರಡು ದಿನ ಮೇ ಸಾಹಿತ್ಯ ಮೇಳ

Koppala; ಇಂದಿನಿಂದ ಎರಡು ದಿನ ಮೇ ಸಾಹಿತ್ಯ ಮೇಳ

3-uv-fusion

UV Fusion: ಆಗುತ್ತಿದೆಯೇ ಭಾವನೆಗಳ ಯುಗಾಂತ್ಯ….?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.