ಇಸ್ರೇಲ್ ಪ್ರಧಾನಿಗೆ ರಾಷ್ಟ್ರಪತಿ ಭವನದಲ್ಲಿ ಭವ್ಯ ಸ್ವಾಗತ
Team Udayavani, Jan 15, 2018, 11:22 AM IST
ಹೊಸದಿಲ್ಲಿ : ”ಭಾರತ-ಇಸ್ರೇಲ್ ನಡುವಿನ ಸ್ನೇಹ ಮತ್ತು ಬಾಂಧವ್ಯದ ಹೊಸ ಯುಗಾರಂಭಕ್ಕೆ ಈ ಮಹೋನ್ನತ ಕ್ಷಣಗಳು ಸಾಕ್ಷಿಯಾಗಿವೆ” ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇಂದು ಸೋಮವಾರ ರಾಷ್ಟ್ರಪತಿ ಭವನದಲ್ಲಿ ರತ್ನಗಂಬಳಿಯ ಅದ್ದೂರಿ ಸ್ವಾಗತವನ್ನು ಪಡೆದ ಬಳಿಕ ಸಭಿಕರನ್ನು ಉದ್ದೇಶಿಸಿ ಹೇಳಿದರು.
“ಇದು ಆರಂಭವಾದದ್ದು ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ಇಸ್ರೇಲ್ ಭೇಟಿಯೊಂದಿಗೆ. ಆ ಭೇಟಿ ಅದ್ಭುತವಾದ ಹುಮ್ಮಸ್ಸು, ಹುರುಪನ್ನು ಉಭಯ ದೇಶಗಳ ಸ್ನೇಹ ಸಂಬಂಧದಲ್ಲಿ ತುಂಬಿದವು; ಈ ಕ್ಷಣಗಳು ನನಗೆ, ನನ್ನ ಪತ್ನಿಗೆ ಮತ್ತು ಇಸ್ರೇಲ್ ನ ಸಮಗ್ರ ಜನತೆಗೆ ಅತ್ಯಂತ ಸಂತಸದಾಯಕವಾಗಿವೆ’ ಎಂದು ನೆತನ್ಯಾಹು ಹೇಳಿದರು.
ನಿನ್ನೆ ಭಾನುವಾರ ಪ್ರಧಾನಿ ಮೋದಿ ಅವರು ಶಿಷ್ಟಾಚಾರಗಳನ್ನೆಲ್ಲ ಬದಿಗೊತ್ತಿ ಇಸ್ರೇಲ್ ಪ್ರಧಾನಿಯನ್ನು ದಿಲ್ಲಿ ವಿಮಾನ ನಿಲ್ದಾಣದಲ್ಲಿ ವೈಯಕ್ತಿಕವಾಗಿ ಆತ್ಮೀಯ ಅಪ್ಪುಗೆಯೊಂದಿಗೆ ಸ್ವಾಗತಿಸಿದ್ದರು.
ಈ ಆತ್ಮೀಯ ಅಪ್ಪುಗೆಯ ಸ್ವಾಗತಕ್ಕೆ ಅಚ್ಚರಿ ವ್ಯಕ್ತಪಡಿಸುತ್ತಾ ನೆತನ್ಯಾಹು ಅವರು ತಮ್ಮ ಟ್ವೀಟ್ ನಲ್ಲಿ “ವಿಮಾನ ನಿಲ್ದಾಣಕ್ಕೆ ಖುದ್ದು ಆಗಮಿಸಿದ ಅಪ್ಪುಗೆಯ ಸ್ವಾಗಡ ನೀಡಿದ ನನ್ನ ಉತ್ತಮ ಸ್ನೇಹಿತ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ; ನಾವಿಬ್ಬರೂ ಜತೆಗೂಡಿ ಉಭಯ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ಹೊಸ ಎತ್ತರಕ್ಕೆ ಒಯ್ಯೋಣ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ