ಕನ್ನಡ ಚಿತ್ರಗಳಿಗೆ ಸಖತ್‌ ಸ್ಪರ್ಧೆ; ಪರೀಕ್ಷೆ, ಚುನಾವಣೆ ಬಿಸಿ


Team Udayavani, Jan 15, 2018, 4:50 PM IST

Tagaru-(1).jpg

ಮುಂದಿನ ಮೂರು ತಿಂಗಳುಗಳಲ್ಲಿ ಚಿತ್ರ ಬಿಡುಗಡೆ ಮಾಡಬಾರದು, ಮಾಡಿದರೆ ಜನ ಬರುವುದಿಲ್ಲ ಮತ್ತು ಇದರಿಂದ ಸಾಕಷ್ಟು ನಷ್ಟವಾಗುತ್ತದೆ ಎನ್ನುವುದೆಲ್ಲಾ ಸುಳ್ಳು. ಆದರೆ, ಈ ಮೂರೂ ತಿಂಗಳು ಕನ್ನಡ ಚಿತ್ರರಂಗಕ್ಕೆ ದೊಡ್ಡ ಸವಾಲೆನ್ನುವುದು ಹೌದು. ಪರೀಕ್ಷೆಗಳಿರಲಿ, ಚುನಾವಣೆಯಾಗಲಿ ಅಥವಾ ಕ್ರಿಕೆಟ್‌ ಬರಲಿ … ಅದರಿಂದ ಜನ ಚಿತ್ರ ನೋಡುವುದೇ ಇಲ್ಲ ಅಥವಾ ಚಿತ್ರಮಂದಿರಗಳಿಂದ ದೂರಾಗಿಬಿಡುತ್ತಾರೆ ಎನ್ನುವುದು ತಪ್ಪಾಗುತ್ತದೆ. ಆದರೆ, ಇದೆಲ್ಲದರಿಂದ ಚಿತ್ರಗಳ ಪ್ರರ್ದಶನಕ್ಕೆ ಸ್ವಲ್ಪ ಮಟ್ಟಿಗೆ ಏಟು ಬೀಳುವುದು ಖಂಡಿತ.

ಕನ್ನಡದಲ್ಲಿ ಸಾಲುಸಾಲು ಚಿತ್ರಗಳು ಬಿಡುಗಡೆಗೆ ನಿಂತಿರುವುದು ಎಲ್ಲರಿಗೂ ಗೊತ್ತೇ ಇದೆ. ಈ 15 ದಿನಗಳಲ್ಲಿ ಬಿಡುಗಡೆಯಾಗಿರುವುದು ಕೇವಲ ಆರು ಚಿತ್ರಗಳಾದರೂ, ಮುಂದಿನ ದಿನಗಳಲ್ಲಿ ಸಾಕಷ್ಟು ಚಿತ್ರಗಳು ಬಿಡುಗಡೆಯಾಗುವುದಕ್ಕೆ ಕ್ಯೂನಲ್ಲಿ ನಿಂತಿವೆ. ಅದರಲ್ಲೂ ಮಾರ್ಚ್‌ ಒಳಗೆ ಚಿತ್ರಗಳನ್ನು ಬಿಡುಗಡೆ ಮಾಡಿಬಿಡಬೇಕೆಂದು ಹಲವು ನಿರ್ಮಾಪಕರು ತುದಿಗಾಲಲ್ಲಿ ನಿಂತಿದ್ದಾರೆ. 

ಅದೇನಾದರೂ ತಪ್ಪಿದರೆ, ಮುಂದಿನ ಮೂರು ತಿಂಗಳುಗಳ ಕಾಲ ಪ್ರೇಕ್ಷಕರ ಅಭಾವ ಕಾಡಬಹುದು ಎಂಬ ಭಯ ಹಲವು ನಿರ್ಮಾಪಕರಲ್ಲಿದೆ.  ಮಾರ್ಚ್‌, ಏಪ್ರಿಲ್‌, ಮೇ ತಿಂಗಳುಗಳು ಬಂದರೆ ಎಲ್ಲಾ ಭಾಷೆಯ ಚಿತ್ರರಂಗಗಳಲ್ಲೂ ಸಣ್ಣ ನಡುಕ ಇದ್ದಿದ್ದೇ. ಅದಕ್ಕೆ ಕಾರಣ ಪರೀಕ್ಷೆಗಳು ಮತ್ತು ಕ್ರಿಕೆಟ್‌. ಈ ಬಾರಿ ಕನ್ನಡ ಚಿತ್ರರಂಗಕ್ಕೆ ಅವೆರಡೂ ಭಯಗಳ ಜೊತೆಗೆ ಇನ್ನೊಂದು ಭಯ ಕೂಡಾ ಸೇರಿದೆ. ಅದೇ ಅಸೆಂಬ್ಲಿ ಚುನಾವಣೆ. 

ಮೇ ತಿಂಗಳಲ್ಲಿ ಕರ್ನಾಟಕದ ಅಸೆಂಬ್ಲಿ ಚುನಾವಣೆಗಳು ನಡೆಯುವುದು ಖಾತ್ರಿಯಾಗಿದೆ. ಹಾಗಾಗಿ ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳುಗಳಲ್ಲಿ ಚಿತ್ರ ಬಿಡುಗಡೆ ಮಾಡುವುದು ಸ್ವಲ್ಪ ರಿಸ್ಕಿ ಎಂಬುದು ಎಲ್ಲರಿಗೂ ಅರ್ಥವಾಗುತ್ತಿದೆ. ಅದೇ ಕಾರಣಕ್ಕೆ ಮಾರ್ಚ್‌ ತಿಂಗಳಿಗೂ ಮುನ್ನವೇ ಚಿತ್ರಗಳನ್ನು ಬಿಡುಗಡೆ ಮಾಡುವುದಕ್ಕೆ ಲೆಕ್ಕಾಚಾರ ನಡೆಯುತ್ತಿದ್ದು, ಅದಕ್ಕೆ ಸೂಕ್ತ  ತಯಾರಿಗಳು ನಡೆಯುತಿವೆ. ಹಾಗೆ ನೋಡಿದರೆ, ಫೆಬ್ರವರಿ ತಿಂಗಳಿನಿಂದಲೇ ಕನ್ನಡ ಚಿತ್ರಗಳಿಗೆ ಸವಾಲು ಶುರುವಾಗಲಿದೆ. 

ಏಕೆಂದರೆ, ಫೆಬ್ರವರಿ 1ರಿಂದ 24ರವರೆಗೂ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಒಂದು ದಿನದ ಮತ್ತು ಟಿ20 ಪಂದ್ಯಗಳು ನಡೆಯಲಿವೆ. ಎರಡು ಘಟಾನುಘಟಿ ತಂಡಗಳು ಎದುರುಬದುರಾಗುತ್ತಿರುವುದರಿಂದ, ಸಹಜವಾಗಿಯೇ ಜನರಿಗೆ ಆ ಕಡೆ ಹೆಚ್ಚು ಗಮನವಿರುತ್ತದೆ. ಇನ್ನು ಮಾರ್ಚ್‌ನಲ್ಲಿ ಪರೀಕ್ಷೆಗಳಿರುವುದರಿಂದ, ಆ ತಿಂಗಳು ಸಹಜವಾಗಿಯೇ ಚಿತ್ರರಂಗದ ಪಾಲಿಗೆ ಸ್ಲಾಗ್‌ ಓವರ್‌ ಎಂದರೆ ತಪ್ಪಿಲ್ಲ. ಆ ತಿಂಗಳಲ್ಲಿ ಬೇರೆ ತರಗತಿಯ ಪರೀಕ್ಷೆಗಳ ಜೊತೆಗೆ ಹತ್ತನೇ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿಗಳನ್ನು ಮತ್ತು ಅವರ ಹೆತ್ತವರ ನಿದ್ದೆಗೆಡಿಸಿರುತ್ತವೆ. 

ಏಪ್ರಿಲ್‌ ನಾಲ್ಕರಿಂದ, ಮೇ 27ರವರೆಗೆ ಐಪಿಲ್‌ ಕ್ರಿಕೆಟ್‌ ಪಂದ್ಯಾವಳಿಗಳು ನಡೆಯಲಿವೆ. ಈ ಎರಡು ತಿಂಗಳು ಕ್ರಿಕೆಟ್‌ ಪ್ರಿಯರ ಪಾಲಿಗೆ ಹಬ್ಬ ಎಂದರೆ ತಪ್ಪಿಲ್ಲ. ಇನ್ನು ಮೇನಲ್ಲಿ ಚುನಾವಣೆಯ ಸಮಯ. ಈ ಬಾರಿ ಯಾರು ಅಧಿಕಾರದ ಚುಕ್ಕಾಣಿ ಹಿಡಿಯಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದು, ಜನರ ಗಮನವೆಲ್ಲಾ ಆ ಕಡೆ ಕೇಂದ್ರೀಕೃತವಾಗಿರುವುದರಿಂದ ಚಿತ್ರಗಳ ಕಡೆ ಗಮನ ಸಹಜವಾಗಿಯೇ ಕಡಿಮೆಯಾಗುತ್ತದೆ. ಹಾಗಾಗಿ ಈ ಮೂರು ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡಿದರೆ, ರಿಸ್ಕ್ ಜಾಸ್ತಿ ಎಂಬ ಭಯ ನಿರ್ಮಾಪಕರದ್ದು.

ಹಾಗಂತ ಈ ಮೂರು ತಿಂಗಳುಗಳಲ್ಲಿ ಚಿತ್ರ ಬಿಡುಗಡೆ ಮಾಡಬಾರದು, ಮಾಡಿದರೆ ಜನ ಬರುವುದಿಲ್ಲ ಮತ್ತು ಇದರಿಂದ ಸಾಕಷ್ಟು ನಷ್ಟವಾಗುತ್ತದೆ ಎನ್ನುವುದೆಲ್ಲಾ ಸುಳ್ಳು. ಆದರೆ, ಈ ಮೂರೂ ತಿಂಗಳು ಕನ್ನಡ ಚಿತ್ರರಂಗಕ್ಕೆ ದೊಡ್ಡ ಸವಾಲೆನ್ನು ವುದು ಹೌದು. ಪರೀಕ್ಷೆ ಗಳಿರಲಿ, ಚುನಾವಣೆ ಯಾಗಲಿ ಅಥವಾ ಕ್ರಿಕೆಟ್‌ ಬರಲಿ …ಅದರಿಂದ ಜನ ಚಿತ್ರ ನೋಡುವುದೇ ಇಲ್ಲ ಅಥವಾ ಚಿತ್ರಮಂದಿರಗಳಿಂದ ದೂರಾಗಿಬಿಡುತ್ತಾರೆ ಎನ್ನುವುದು ತಪ್ಪಾಗುತ್ತದೆ. 

ಆದರೆ, ಇದೆಲ್ಲದರಿಂದ ಚಿತ್ರಗಳ ಪ್ರರ್ದಶನಕ್ಕೆ ಸ್ವಲ್ಪ ಮಟ್ಟಿಗೆ ಏಟು ಬೀಳುವುದು ಖಂಡಿತ. ಈ ಹಿಂದಿನ ವರ್ಷಗಳಲ್ಲಿ ಕ್ರಿಕೆಟ್‌ ಸೀಸನ್‌ ಇದ್ದಾಗ, ಪರೀಕ್ಷೆಗಳು ನಡೆಯುತ್ತಿದ್ದಾಗ ಕೆಲವು ಪ್ರದರ್ಶನಗಳು ಖಾಲಿ ಹೊಡೆಯುತ್ತಿವೆ ಎಂದು ನಿರ್ಮಾಪಕರೇ  ಬೇಸರಿಸಿಕೊಂಡಿದ್ದು ಉಂಟು. ಅದರಲ್ಲೂ ಸ್ವಲ್ಪ ನಿರೀಕ್ಷಿತ ಅಥವಾ ಹೆಸರಾಂತ ಕಲಾವಿದರ ಚಿತ್ರಗಳಿಗೆ ಅಷ್ಟೇನೂ ಬಿಸಿ ತಟ್ಟುವುದಿಲ್ಲ. ಹೊಸಬರ, ಹೆಚ್ಚು ಪ್ರಚಾರ ಮಾಡದವರ, ಕೊನೆಯ ಕ್ಷಣದಲ್ಲಿ ಬಿಡುಗಡೆ ಮಾಡಲು ತೀರ್ಮಾನಿಸಿದವರ ಚಿತ್ರಗಳಿಗೆ ಮಾತ್ರ ಪ್ರೇಕ್ಷಕರ ಅಭಾವ ದೊಡ್ಡ ಮಟ್ಟದಲ್ಲಿ ಕಾಡುವುದು ನಿಜ.

ಹಾಗಂತ ಹಿಂದಿನ ವರ್ಷಗಳಲ್ಲಿ ಈ ತರಹದ ಸಂದರ್ಭಗಳಲ್ಲಿ ಚಿತ್ರ ಬಿಡುಗಡೆ ಮಾಡಿದವರೆಲ್ಲಾ ಸೋತಿಲ್ಲ ಅಥವಾ ನೆಲಕಚ್ಚಿಲ್ಲ. ಈ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ಗೆದ್ದ ಚಿತ್ರಗಳ ಉದಾಹರಣೆಗಳೂ ಹಲವು ಇವೆ. ಆದರೆ, ಈ ಬಾರಿ ಕ್ರಿಕೆಟ್‌, ಪರೀಕ್ಷೆ, ಚುನಾವಣೆ ಎಲ್ಲವೂ ಒಂದರಹಿಂದೊಂದು ಬರುತ್ತಿರುವುರಿಂದ, ಚಿತ್ರ ಮಾಡಿ ಮುಗಿಸಿ, ಬಿಡುಗಡೆಗೆ ಎದುರು ನೋಡುತ್ತಿರುವ ಕೆಲವು ನಿರ್ಮಾಪಕರಲ್ಲಾದರೂ ಆತಂಕ ಸೃಷ್ಟಿಸಿದೆ. 

ಹಾಗಾಗಿ ಇನ್ನೊಂದೆರೆಡು ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆಗೆ ಹಲವರು ಬಂದಿದ್ದು, ಒಂದು ಪಕ್ಷ ಸ್ವಲ್ಪ ತಡವಾದರೆ, ಮೇ ನಂತರ ಚಿತ್ರ ಬಿಡುಗಡೆ ಮಾಡುವ ಯೋಚನೆಗೆ ಹಲವರು ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.ಹಾಗಂತ ಇಷ್ಟಕ್ಕೇ ಮುಗಿಯುವುದಿಲ್ಲ. ಜೂನ್‌ನಲ್ಲಿ ಶಾಲೆ ಆರಂಭ, ಮಳೆ … ಎಂಬ ಹೊಸ ಸವಾಲುಗಳು ಕನ್ನಡ ಚಿತ್ರಗಳ  ಮುಂದೆ ಹಾಜರಾಗುತ್ತವೆ. ಇಷ್ಟು ವರ್ಷಗಳ ಕಾಲ ಚಿತ್ರರಂಗ ಇವನ್ನೆಲ್ಲಾ ಮೆಟ್ಟಿ ನಿಂತಿವೆ.ಈ ಬಾರಿಯೂ ಅದು ಮುಂದುವರೆಯುತ್ತದೆ ಅಷ್ಟೇ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.