ಮರಳುಗಾರಿಕೆ: ಡಿ.ಸಿ.ನೇತೃತ್ವದ ತಂಡ ದಾಳಿ
Team Udayavani, Jan 16, 2018, 11:25 AM IST
ಮಂಗಳೂರು: ಸಿಆರ್ಝಡ್ ವ್ಯಾಪ್ತಿಯ ಕೆಲವು ಕಡೆ ಅಕ್ರಮದಕ್ಕೆ ನಿರ್ಮಿಸಿ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ನೇತೃತ್ವದ ತಂಡದವರು ಮೂಡುಶೆಡ್ಡೆ, ಪಡುಶೆಡ್ಡೆ, ಜಪ್ಪಿನ ಮೊಗರು ಸೇರಿದಂತೆ ಹಲವೆಡೆ ಹಠಾತ್ ಧಾಳಿ ನಡೆಸಿ 800ಕ್ಕೂ ಅಧಿಕ ಲೋಡ್ ಮರಳು, ಡ್ರೆಜ್ಜಿಂಗ್ ಮೆಷಿನ್, ಲಾರಿಯನ್ನು ವಶಪಡಿಸಿಕೊಂಡು ಮುಟ್ಟುಗೋಲು ಹಾಕಿದ್ದಾರೆ.
ಮಂಗಳೂರು ತಾಲೂಕಿನ ಮರವೂರು ವೆಂಟೆಡ್ ಡ್ಯಾಂ ಪಕ್ಕದ ಪಡುಶೆಡ್ಡೆ, ಮೂಡುಶೆಡ್ಡೆ, ಮಂಜಲ್ಪಾದೆ ಸುತ್ತಮುತ್ತ ದಾಳಿ ನಡೆಸಿ 5 ಮರಳು ಧಕ್ಕೆ ಮುಟ್ಟುಗೊಲು ಹಾಕಲಾಗಿದ್ದು, 800 ಕ್ಕೂ ಅಧಿಕ ಲೋಡ್ ಮರಳು, ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. 6ಮಂದಿಯ ಮೇಲೆ ಪ್ರಕರಣ ದಾಖಲಾಗಿದ್ದು, 40ಬೋಟು, ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ ಆರಂಭಿಸಿದ ಧಾಳಿ ಸೋಮವಾರ ಸಂಜೆಯವರೆಗೆ ಮುಂದುವರಿದಿದೆ ಎಂದು ಪ್ರಕಟನೆ ತಿಳಿಸಿದೆ.
ದಾಳಿ ಮಾಡಿದ ತಂಡದಲ್ಲಿ ತಹಶೀಲ್ದಾರ್ ಗುರುಪ್ರಸಾದ್, ಎಸಿ ರೇಣುಕಾಪ್ರಸಾದ್, ಹಿರಿಯ ಭೂ ವಿಜ್ಞಾನಿ ನಿರಂಜನ್, ಮೂರ್ತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು, ಕಾವೂರು, ಪಾಂಡೇಶ್ವರ ಪೊಲೀಸರು ಭಾಗವಹಿಸಿದ್ದರು.
ಮರಳು ಶಿರಾಡಿ ಕಾಮಗಾರಿಗೆ: ಪಡುಶೆಡ್ಡೆಯಲ್ಲಿ ವಶಪಡಿಸಿಕೊಂಡ ಎಲ್ಲಾ ಮರಳನ್ನು ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೀಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ಮೂಲಕ ಗಣಿ ಇಲಾಖೆಗೆ ರಾಜಧನ ಪಾವತಿಸಿ, ಶಿರಾಡಿಗೆ ಕಳುಹಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ