ಬಂಟರ ಸಂಘ ಅಂಧೇರಿ-ಬಾಂದ್ರಾ ಸಮಿತಿ:ಸೀರೆ,ವಜ್ರಾಭರಣ ಪ್ರದರ್ಶನ


Team Udayavani, Jan 16, 2018, 11:38 AM IST

1401mum11a.jpg

ಮುಂಬಯಿ: ಮಕರ ಸಂಕ್ರಾಂತಿಯ ಶುಭಾವಸರದಂದು ನಾವೆಲ್ಲರೂ ಇಲ್ಲಿ ಸೇರಿ ಖುಷಿಯಿಂದ ಒಂದಷ್ಟು ಹೊತ್ತು ಕಳೆಯುವ ಅವಕಾಶವನ್ನು ಬಂಟರ ಸಂಘದ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ ಒದಗಿಸಿಕೊಟ್ಟಿದೆ. ಅಂಧೇರಿಗೂ ನನಗೂ ಬಹಳ ನಿಕಟವಾದ ಸಂಬಂಧವಿದೆ. ನಾನು ಮದುವೆಯಾಗಿ ಬಂದಾಗಿನ ಮನೆಯಾಗಿರಬಹುದು ನಮ್ಮ ವ್ಯಾಪಾರ ಕ್ಷೇತ್ರವಾಗಿರಬಹುದು ಎಲ್ಲವೂ ಅಂಧೇರಿ ಸುತ್ತಮುತ್ತಲಿನಲ್ಲಿದೆ. ಇಂದು ಮಹಿಳೆಯರಿಗೆ ಅತ್ಯಂತ ಪ್ರೀತಿಯ ಸೀರೆ ಹಾಗೂ ವಜ್ರಾಭರಣಗಳ ಪ್ರದರ್ಶನ, ಮಾರಾಟವನ್ನು ಈ ಸಮಿತಿಯಿಂದ ಆಯೋಜಿಸಿದ್ದೀರಿ. ಮುಂದೆಯೂ ನಿಮ್ಮ ಸಮಿತಿಯಿಂದ, ಮಹಿಳಾ ವಿಭಾಗದಿಂದ ಉತ್ತಮ ಕಾರ್ಯಗಳು ನಡೆಯಲಿ ಎಂದು ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಅವರು ನುಡಿದರು.

ಜ. 14 ಮಕರ ಸಂಕ್ರಾಂತಿಯಂದು ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದವರು ಪೊವಾಯಿ ಎಸ್‌.ಎಂ. ಶೆಟ್ಟಿ  ಶಿಕ್ಷಣ ಸಂಕುಲದ ಅಡಿಟೋರಿಯಂನಲ್ಲಿ ಏರ್ಪಡಿಸಿದ್ದ ಸೀರೆ ಹಾಗೂ ವಜ್ರಾಭರಣ ಪ್ರದರ್ಶನ ಹಾಗೂ ಮಾರಾಟದ ಉದ್ಘಾಟನೆಗೈದು ಅವರು ಶುಭಹಾರೈಸಿದರು.

ಅತಿಥಿಯಾಗಿ ಪಾಲ್ಗೊಂಡ ಭಿವಂಡಿಯ ಮಾಜಿ ನಗರ ಸೇವಕಿ ಶಶಿಕಲಾ ಸಂತೋಷ ಶೆಟ್ಟಿ ಅವರು ಮಾತನಾಡಿ, ಇಂದಿನ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ, ಸುಂದರ ವಾಗಿ ಆಯೋಜಿಸಿದ್ದೀರಿ. ಮಹಿಳೆಯರ ಪ್ರೀತಿ ಪಾತ್ರ ಸೀರೆ ಆಭರಣಗಳು ಇವೆ ಅಂದಾಕ್ಷಣ ನಾನು ಇಲ್ಲಿಗೆ ಬರಲು ಒಪ್ಪಿಕೊಂಡಿದ್ದೇನೆ. ಅತಿಥಿಯಾಗಿ ಆಮಂತ್ರಿಸಿದ ನಿಮಗೆ ವಂದನೆಗಳು. ನಿಮ್ಮ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಲಿ ಎಂದು ನುಡಿದು, ಭವಿಷ್ಯದ ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಾಲಿನಿ ಪದ್ಮನಾಭ ಪಯ್ಯಡೆ, ವರ್ಷಾ ಸುಕುಮಾರ್‌ ಶೆಟ್ಟಿ ಅವರು ಉಪಸ್ಥಿತರಿದ್ದು ಸಮಯೋಚಿತವಾಗಿ ಮಾತನಾಡಿದರು. ಸಂಚಾಲಕರಾದ ಅಪ್ಪಣ್ಣ ಎಂ. ಶೆಟ್ಟಿ ಅವರು ಮಾತನಾಡಿ,  ನಿಮ್ಮ ಎಲ್ಲ ಯೋಜನೆ ಯೋಚನೆಗಳು ಸಾಕಾರವಾಗಲಿ ಎಂದು ನುಡಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವನಿತಾ ನೋಂಡ ಅವರು ಪ್ರೀತಿಯ ಕರೆಯನ್ನು ಮನ್ನಿಸಿ ಆಗಮಿಸಿದವರೆಲ್ಲರಿಗೆ ಕೃತಜ್ಞತೆ ಸಲ್ಲಿಸಿದರು. ಬಂಟರ ಸಂಘದ ಮಹಿಳಾ ವಿಭಾಗದ ಪದಾಧಿಕಾರಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿದರು. 

ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಗುಣಪಾಲ ಶೆಟ್ಟಿ ಐಕಳ ಅವರು ಕಾರ್ಯ ಕ್ರಮದ ಯಶಸ್ಸಿಗೆ ಶುಭಹಾರೈಸಿದರು.

ಅನಿತಾ ಆರ್‌.ಕೆ. ಶೆಟ್ಟಿ,  ಆರ್‌.ಜಿ. ಶೆಟ್ಟಿ, ರಮೇಶ್‌ ರೈ, ಡಿ.ಕೆ. ಶೆಟ್ಟಿ, ಸುನಿಲ್‌ ಶೆಟ್ಟಿ, ಲಕ್ಷ್ಮಣ್‌ ಶೆಟ್ಟಿ  ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಶೋಭಾ ಎಸ್‌. ಶೆಟ್ಟಿ, ಸ್ಮಿತಾ ಶೆಟ್ಟಿ, ಪ್ರಶಾಂತಿ ಶೆಟ್ಟಿ, ಸವಿತಾ ಶೆಟ್ಟಿ, ವಿಂದ್ಯಾ ಬಲ್ಲಾಳ್‌, ನಿವೇದಿತಾ ಶೆಟ್ಟಿ, ಗೀತಾ ಶೆಟ್ಟಿ, ಪ್ರೇಮಾ ಶೆಟ್ಟಿ,  ಜ್ಯೋತಿ ಶೆಟ್ಟಿ, ಶೈಲಾ ಶೆಟ್ಟಿ, ಸುಜಾತಾ ಶೆಟ್ಟಿ ಕಲಿನಾ, ವಜ್ರಾ ಶೆಟ್ಟಿ, ಶೋಭಾ ರೈ, ವಿನುತಾ ಶೆಟ್ಟಿ ಮೊದಲಾದವರು ಸಹಕರಿಸಿದರು. 

ಪ್ರಶಾಂತಿ ಡಿ. ಶೆಟ್ಟಿ ಪ್ರಾರ್ಥನೆಗೈದರು. ಮಹಿಳಾ ವಿಭಾಗದ ಉಪ ಕಾರ್ಯಾಧಕ್ಷೆ ಡಾ| ಪೂರ್ಣಿಮಾ ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ನಮ್ಮ  ಹೊಸ ಸಮಿತಿಯ ಮೊದಲ ಹೆಜ್ಜೆ ಇದು. ಮಹಿಳಾ ವಿಭಾಗದ ಕೆಲವು ವರ್ಷದ ಹಿಂದಿನ ಯೋಜನೆಯಾದರೂ ಇಂದು ಅದಕ್ಕೆ ಒಳ್ಳೆಯ ದಿನ ಕೂಡಿ ಬಂದಿದೆ. ಹಲವು ದಿನಗಳ ಪರಿಶ್ರಮದಿಂದ ಮಹಿಳಾ ವಿಭಾಗದವರ ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಮುಂದೆಯೂ ಸಮಿತಿಯ ಸದಸ್ಯರ ಸಹಕಾರ ಸದಾ ಇದೆ. ನಾವೆಲ್ಲರೂ ಒಂದು ಮನೆಯ ಸದಸ್ಯರಂತೆ ಒಗ್ಗಟ್ಟಿನಿಂದ ಸತ್ಕಾರ್ಯಗಳನ್ನು ಮಾಡೋಣ.
-ಡಾ| ಆರ್‌. ಕೆ. ಶೆಟ್ಟಿ, ನೂತನ ಕಾರ್ಯಾಧ್ಯಕ್ಷರು,
ಬಂಟರ ಸಂಘ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ

ನನ್ನ ಬಹುದಿನಗಳ ಕನಸೊಂದು ಇಂದು ನನಸಾಗಿದೆ. ಈ ಕಾರ್ಯಕ್ರಮವು  ಯಶಸ್ವಿಯಾಗಿದೆ. ಮುಂದೆಯೂ ಆಗುತ್ತದೆ ಎಂಬ ಭರವಸೆ ನನಗಿದೆ.  ಇಂದು ಕಾರ್ಯ ನೆರವೇರಿದ ಸಂತೋಷ ನಮ್ಮ ಮಹಿಳಾ ವಿಭಾಗಕ್ಕಿದೆ. ನಾವೆಲ್ಲರು ಒಗ್ಗಟ್ಟು ಮತ್ತು ಒಮ್ಮತದಿಂದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜ ಬಾಂಧವರಿಗೆ ಸಹಕರಿಸೋಣ.
– ಸುಜಾತಾ ಗುಣಪಾಲ್‌ ಶೆಟ್ಟಿ, ಸಂಚಾಲಕಿ, ಮಹಿಳಾ ವಿಭಾಗ, ಅಂಧೇರಿ ಬಾಂದ್ರಾ ಸಮಿತಿ

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.