ನಾಲತವಾಡ ಸೌಂದಯೀಕರಣಕ್ಕೆ ಬದ್ಧ: ನಡಹಳ್ಳಿ


Team Udayavani, Jan 16, 2018, 2:04 PM IST

vij-6.jpg

ನಾಲತವಾಡ: ನನ್ನ ರಾಜಕೀಯ ಬದುಕಿನಲ್ಲೇ ನಾಲತವಾಡ ಪಟ್ಟಣದಲ್ಲಿ ಹದಗೆಟ್ಟ ರಸ್ತೆ, ಚರಂಡಿ ಹಾಗೂ ಬಡತನದಿಂದ ಬಳಲುತ್ತಿದ್ದ ಕುಟುಂಬಗಳನ್ನು ನೋಡಿಯೇ ಇಲ್ಲ. 25 ವರ್ಷದಿಂದ ಶಾಸಕರಾಗಿ ಆಯ್ಕೆಯಾದರವರಿಗೆ ಸಮಸ್ಯೆಗಳು ಗಮನಕ್ಕೆ ಬರಲಿಲ್ಲವೇ ಎಂದು ದೇವರಹಿಪ್ಪರಗಿ ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ಪ್ರಶ್ನಿಸಿದರು.

ಪಟ್ಟಣದ ವಿವಿಧ ವಾರ್ಡುಗಳಲ್ಲಿ ನಡೆದ ಮನೆ ಮನೆಗೆ ಕುಮಾರಣ್ಣ, ಹಳ್ಳಿ ಹಳ್ಳಿಗೆ ನಡಹಳ್ಳಿ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ತಾಲೂಕಿನಲ್ಲೇ ಪಟ್ಟಣದಲ್ಲಿ ಅತಿ ಬಡತನದ ಬೇಗೆಯಿಂದ
ಬಳಲುತ್ತಿದ್ದಾರೆ ಎಂದು ನಾನು ಕನಸಿನಲ್ಲೇ ಊಹಿಸಿರಲಿಲ್ಲ. ಅಂತಹ ದುಸ್ಥಿತಿ ಪಟ್ಟಣದಲ್ಲಿದೆ. ಇಂತಹ ಗಂಭೀರ ಸಮಸ್ಯೆಗಳತ್ತ ಸ್ಥಳೀಯ ಶಾಸಕರು ಗಮನ ಹರಿಸದಿರುವುದು ‌ ದುರಂತ ಎಂದರು.

ಪಟ್ಟಣದಲ್ಲಿ ಬಡವರಿಗೆ ಪಡಿತರ ಚೀಟಿ, ಮಾಸಿಕ ವೇತನ ಹಾಗೂ ವಾಸಿಸಲು ಸೂರುಗಳಿಲ್ಲ, ಇವೆಲ್ಲವುಗಳನ್ನು
ಸರಕಾರ ಒದಗಿಸುತ್ತದೆ. ಆದರೆ ಅವುಗಳನ್ನು ಒದಗಿಸುವ ಮನೋಭಾವನೆ ಶಾಸಕರಲ್ಲಿ ಇರಬೇಕು. ಪಟ್ಟಣದಲ್ಲಿ 4,500 ಮನೆಗಳಲ್ಲಿ ಅರ್ಧದಷ್ಟು ನಿರ್ಗತಿಕರು ಇದ್ದಾರೆ. ಪಟ್ಟಣದಲ್ಲೇ ನಾಡ ಕಾರ್ಯಾಲಯವಿದೆ ಇದುವರೆಗೂ ಕೆಲವರಿಗೆ ವೃದ್ದಾಪ್ಯ ವೇತನ ಸಿಗುತ್ತಿಲ್ಲ.

ಸಮಸ್ಯೆಗಳು ಪಟ್ಟಣದಲ್ಲಿ ತಾಂಡವವಾಡುತ್ತಿವೆ. 25 ವರ್ಷದ ರಾಜಕಾರಣದಲ್ಲಿ ಪ್ರತಿ ವರ್ಷವೂ ಕೇವಲ 100 ಆಸರೆ ಮನೆಗಳನ್ನು ಅರ್ಹರಿಗೆ ಕಲ್ಪಿಸಿದ್ದರೆ ಒಟ್ಟು 2,500 ಮನೆ ಒದಗಿಸಬಹುದಿತ್ತು. ಇವೆಲ್ಲ ಶಾಸಕರು ತಮ್ಮ ಮನೆಯಿಂದ
ಒದಗಿಸುತ್ತಾರೋ ಎಂದು ಪ್ರಶ್ನಿಸಿದರು. ಕಳೆದ 5 ದಿನದಿಂದ ಅಲೆದಾಡುತ್ತಿದ್ದೇನೆ. ಶೇ. 75ರಷ್ಟು ವೃದ್ಧರು ನಮಗೆ ಪಿಂಚಣಿ ಬರುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ನಾನು 10 ವರ್ಷ ಶಾಸಕನಾಗಿದ್ದು ಈ ರೀತಿ ಆಡಳಿತ ಮಾಡಿಯೇ ಇಲ್ಲ ಎಂದು ಹೇಳಿದರು.

ಸತತ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದೀರಿ. ಶಾಸಕರೇ ನೀವೆ ಒಂದು ಸಲ ಮನೆ ಮನೆಗೆ ಅಲೆದಾಡಿ ಬಡವರ ಪರಿಸ್ಥಿತಿ ಗಮನಕ್ಕೆ ಬರುತ್ತದೆ. ನಾನು ಈಗಾಗಲೇ ಬಡವರ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡಿದ್ದೇನೆ. ಮುಂದಿನ
ದಿನಗಳಲ್ಲಿ ನಾನೇ ಈ ಭಾಗದ ಶಾಸಕನಾಗುತ್ತೇನೆ. ನಿಮ್ಮೆಲ್ಲ ಸಮಸ್ಯೆಗಳಿಗೆ ನಡಹಳ್ಳಿಯಿಂದ ಮಾತ್ರ ಪರಿಹಾರ ಎಂದು ಭರವಸೆ ನೀಡಿದ್ದೇನೆ ಎಂದರು.

ಶಾಸಕರಾಗಿ ಅಧಿಕಾರದಲ್ಲಿ ಪ್ರಾಮಾಣಿಕತೆ ಮೆರೆಯಬೇಕು. ನನಗೆ 25 ವರ್ಷ ಬೇಡ, 5 ವರ್ಷ ಅಧಿಕಾರ ನೀಡಿ. ಮೊದಲು ಪೊರಕೆ ಹಿಡಿದು ನಾಲತವಾಡ ಪಟ್ಟಣವನ್ನೇ ಸ್ವತ್ಛಗೊಳಿಸುವ ಪ್ರತಿಜ್ಞೆ ಮಾಡಿದ್ದೇನೆ. ಪಟ್ಟಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಸರಕಾರಿ ಪ್ರೌಢ ಶಾಲೆಗಳಿಂದ ವಂಚಿತರಾಗಿದ್ದಾರೆ. ಕನಿಷ್ಠ ಒಂದು ಸರಕಾರಿ ಪ್ರೌಢಶಾಲೆ ಮಂಜೂರು ಮಾಡದಿರುವು ಅನುಮಾನ ಹುಟ್ಟಿಸಿದೆ ಎಂದರು.

ಪಟ್ಟಣದಲ್ಲಿ ನನಗೆ ಸಾರ್ವಜನೀಕರಿಂದ ಉತ್ತಮ ಪ್ರತಿಕ್ರೀಯೆ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಶಾಸಕರಾದ ನಾಡಗೌಡ ಅವರು ದಿ| ದೇಶಮುಖ ಅಭಿಮಾನಿಗಳಿಗೆ ಮೂಲ ಸೌಕರ್ಯಗಳಿಂದ ವಂಚಿತಗೊಳಿದ್ದಾರೆ ಎಂಬ ಬಲವಾದ ಆರೋಪಗಳಿವೆ. ರಾಜಕಾರಣ ಬದಿಗೊತ್ತಿ ಭೇದ ಭಾವ ಮರೆತು ಬಡವರ ಪರ ಚಿಂತನೆ ಮಾಡಬೇಕು ಎಂದರು.

ಜೆಡಿಎಸ್‌ ತಾಲೂಕು ಪ್ರಧಾನ ಕಾರ್ಯದರ್ಶಿ ಜಿ. ಮಹಾಂತೇಶಗೌಡ, ಪಪಂ ಸದಸ್ಯ ಭೀಮಣ್ಣ ಗುರಿಕಾರ, ವೀರೇಶ ರಕ್ಕಸಗಿ, ರಫಿಕ್‌ ಕೊಡಗಲಿ, ಸೈಯದ್‌ ಖಾಜಿ, ಸೋಮನಗೌಡ ಕವಡಿಮಟ್ಟಿ, ಜಗದೀಶ ಕೆಂಭಾವಿ, ಸಂಗಪ್ಪ
ಬೋವಿ, ಬಾಬುಗೌಡ ಹಂಪನಗೌಡ, ಸಿದ್ದಲಿಂಗಯ್ಯ ಕಪ್ಪರಮಠ, ಬಸನಗೌಡ ಪಾಟೀಲ (ನಡಹಳ್ಳಿ) ಹಾಗೂ
ಸಂಗಮೇಶ ಮೇಟಿ ಇದ್ದರು. 

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.