ಬುಸ್ಸೇರದೊಡ್ಡಿಯಲ್ಲಿ ಸಮಸ್ಯೆಗಳ ಗುಡ್ಡೆ


Team Udayavani, Jan 16, 2018, 4:07 PM IST

ray-6.jpg

ಹಟ್ಟಿ ಚಿನ್ನದ ಗಣಿ: ಗೌಡೂರು ಗ್ರಾಪಂ ವ್ಯಾಪ್ತಿಯ ಬುಸ್ಸೇರದೊಡ್ಡಿಯಲ್ಲಿ ಶುದ್ಧ ನೀರು, ಉತ್ತಮ ರಸ್ತೆ, ಚರಂಡಿ, ವಿದ್ಯುತ್‌ ಸೇರಿದಂತೆ ಹಲವು ಮೂಲ ಸೌಲಭ್ಯ ಮರೀಚಿಕೆಯಾಗಿದ್ದು, ನಿವಾಸಿಗಳು ಹಲವು ಸಮಸ್ಯೆ ಮಧ್ಯೆಯೇ ಜೀವನ ಸಾಗಿಸುವಂತಾಗಿದೆ.

ಬುಸ್ಸೇರದೊಡ್ಡಿಯಲ್ಲಿ 20ಕ್ಕೂ ಹೆಚ್ಚು ಗುಡಿಸಲುಗಳಿವೆ. ದೊಡ್ಡಿಗೆ ತೆರಳಲು ಉತ್ತಮ ರಸ್ತೆ ಇಲ್ಲ. ಮುಳ್ಳು, ಕಲ್ಲುಗಳಿರುವ ಕಚ್ಚಾ ರಸ್ತೆಯಲ್ಲೇ ದೊಡ್ಡಿಗೆ ಹೋಗಬೇಕು. ನಾರಾಯಣಪುರ ಬಲದಂಡೆ ಮುಖ್ಯ ನಾಲೆಯ 8ನೇ ವಿತರಣಾ ನಾಲೆ ವೀಕ್ಷಣಾ ರಸ್ತೆಯೇ ಇವರಿಗೆ ಉತ್ತಮ ರಸ್ತೆಯಾಗಿದೆ. ಆದರೂ 2 ಕಿ.ಮೀ. ತಗ್ಗುಗಳಿರುವ ರಸ್ತೆಯಲ್ಲಿ ಕಾಲ್ನಡಿಗೆಯಲ್ಲೇ ಸಾಗಬೇಕು. ದಿನ ನಿತ್ಯದ ವಸ್ತುಗಳ ಖರೀದಿಗೆ ಗುರುಗುಂಟಾಕ್ಕೆ ತೆರಳುತ್ತಾರೆ. 

ದೊಡ್ಡಿಯ ಜನರಿಗೆ ಶುದ್ಧ ಕುಡಿಯುವ ನೀರು ಸಿಗುವುದಿಲ್ಲ. ವರ್ತಿ ಅಥವಾ ಗೌಡೂರು ಹಳ್ಳದ ನೀರೇ ಜೀವಜಲವಾಗಿದೆ. ಗ್ರಾಮ ಪಂಚಾಯತಿಯಿಂದ ಕೊರೆಸಿದ ಕೈಪಂಪ್‌ನಲ್ಲಿ ನಿತ್ಯ 8-10 ಕೊಡಗಳಷ್ಟು ಮಾತ್ರ ನೀರು ಬರುತ್ತದೆ. ಹೀಗಾಗಿ ಕುಡಿಯುವ ನೀರಿಗಾಗಿ ಕಿ.ಮೀ.ಗಟ್ಟಲೇ ದೂರ ಅಲೆಯಬೇಕಾಗಿದೆ.

ದೊಡ್ಡಿಯ ಕೇವಲ 3 ಜನರಿಗೆ ಮಾತ್ರ ವಸತಿ ಭಾಗ್ಯಲಭಿಸಿದೆ. ಉಳಿದವರು ಗುಡಿಸಲಿನಲ್ಲೇ ವಾಸಿಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ಇಲ್ಲಿನ ಎರಡು ಗುಡಿಸಲು ಸುಟ್ಟು ಎರಡು ಮಕ್ಕಳು ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಜರುಗಿತ್ತು. ಶಾಸಕ ಮಾನಪ್ಪ ವಜ್ಜಲ್‌, ತಹಶೀಲ್ದಾರ್‌ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿದರೆ
ಹೊರತು ಪರಿಹಾರ ಮಾತ್ರ ಲಭಿಸಲಿಲ್ಲ.

ದೊಡ್ಡಿಯಲ್ಲಿ ವಿದ್ಯುತ್‌ ಸಂಪರ್ಕ ಇಲ್ಲ. ಹೀಗಾಗಿ ಗುಡಿಸಲು ವಾಸಿಗಳಿಗೆ ಚಿಮಣಿ ದೀಪವೇ ಬೆಳಕಿಗೆ ಆಧಾರವಾಗಿವೆ.
ಸೀಮೆಎಣ್ಣೆ ಸಿಗದಿದ್ದರೆ ಕತ್ತಲಲ್ಲಿ ಕಾಲಕಳೆಯುವಂತಾಗುತ್ತದೆ. ದೊಡ್ಡಿಯಲ್ಲಿ ಅಳವಡಿಸಿದ್ದ ಏಕೈಕ ಸೌರವಿದ್ಯುತ್‌ ದೀಪವೂ ಕೆಟ್ಟು ಹೋಗಿದೆ. ಆದರೆ ಗ್ರಾಮ ಪಂಚಾಯತಿ ದುರಸ್ತಿಗೆ ಮುಂದಾಗಿಲ್ಲ.

ದೊಡ್ಡಿಯಲ್ಲಿ 1ರಿಂದ 7ನೇ ತರಗತಿವರೆಗೆ ಒಟ್ಟು 40 ಮಕ್ಕಳಿದ್ದು, ಸಮೀಪದ ಗುರುಗುಂಟಾ ಶಾಲೆಗಳಿಗೆ ಕಾಲ್ನಡಿಗೆಯಲ್ಲಿಯೇ ತೆರಳುತ್ತಾರೆ. ವಿದ್ಯಾರ್ಥಿಗಳು ಮನೆ ಪಾಠವನ್ನು ಚಿಮಣಿ ಬೆಳಕಿನಲ್ಲೇ ಮಾಡುವಂತಾಗಿದೆ. ಇನ್ನು
ದೊಡ್ಡಿಯಲ್ಲಿ ಅಂಗನವಾಡಿ ಕೇಂದ್ರವಿಲ್ಲ. ಅಂಗನವಾಡಿ, ವಿದ್ಯುತ್‌ ಸೌಕರ್ಯ, ಉತ್ತಮ ರಸ್ತೆ ಸೌಲಭ್ಯಕ್ಕಾಗಿ ಶಾಸಕರು, ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಪಂ ಸದಸ್ಯ ಯಲ್ಲಪ್ಪ ಪೂಜಾರಿ ಸೇರಿದಂತೆ ದೊಡ್ಡಿ ನಿವಾಸಿಗಳು ದೂರಿದ್ದಾರೆ.

ಟಾಪ್ ನ್ಯೂಸ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.