ಪದ್ಮಾವತ್: ರಾಜಸ್ಥಾನ, ಗುಜರಾತ್ ಬಳಿಕ ಬಿಡುಗಡೆಗೆ ಹರಿಯಾಣ ತಡೆ
Team Udayavani, Jan 16, 2018, 7:31 PM IST
ಹೊಸದಿಲ್ಲಿ : ಬಾಲಿವುಡ್ ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ ವಿವಾದಿತ ಐತಿಹಾಸಿಕ ಕಥಾ ಚಿತ್ರ “ಪದ್ಮಾವತ್’ ಬಿಡುಗಡೆಯನ್ನು ರಾಜಸ್ಥಾನ, ಗುಜರಾತ್ ಬಳಿಕ ಹರಿಯಾಣ ಸರಕಾರ ತಡೆಹಿಡಿದಿದೆ.
ಪದ್ಮಾವತ್ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಭಾರೀ ಸಂಖ್ಯೆಯ ಜನರು ಭಾವಿಸಿರುವುದರಿಂದ ಚಿತ್ರದ ಬಿಡುಗಡೆಯನ್ನು ರಾಜ್ಯದಲ್ಲಿ ತಡೆಹಿಡಿಯುವ ನಿರ್ಧಾರವನ್ನು ಇಂದಿನ ಸಂಪುಟ ಸಭಯಲ್ಲಿ ಕೈಗೊಳ್ಳಲಾಯಿತು ಎಂದು ಮೂಲಗಳು ಹೇಳಿವೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಈ ಹಿಂದೆ “ಪದ್ಮಾವತಿ ಚಿತ್ರಕ್ಕೆ ಕೇಂದ್ರ ಸೆನ್ಸಾರ್ ಮಂಡಳಿ ಸರ್ಟಿಫಿಕೇಟ್ ನೀಡಿದ ಬಳಿಕ ಅದನ್ನು ರಾಜ್ಯದಲ್ಲಿ ಬಿಡುಗಡೆ ಮಾಡುವುದರ ಬಗ್ಗೆ ನಿರ್ಧರಿಸಲಾಗುವುದು’ ಎಂದು ಹೇಳಿದ್ದರು.
ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಿಡುವ ದೃಷ್ಟಿಯಲ್ಲಿ ಪದ್ಮಾವತ್ ಚಿತ್ರವನ್ನು ನಿಷೇಧಿಸಬೇಕೆಂಬ ಪ್ರಸ್ತಾವವನ್ನು ಹರಿಯಾಣ ಸಚಿವ ಅನಿಲ್ ವಿಜ್ ಮುಂದಿಟ್ಟಿದ್ದರು. ಆದರೆ ಚಿತ್ರ ಬಿಡುಗಡೆಯನ್ನು ಸದ್ಯಕ್ಕೆ ತಡೆಹಿಡಿಯಲು ಸಂಪುಟ ಸಭೆ ನಿರ್ಧರಿಸಿತು.
ಪದ್ಮಾವತ್ ಚಿತ್ರಕ್ಕೆ ಕೇಂದ್ರ ಸೆನ್ಸಾರ್ ಮಂಡಳಿ ಯು/ಎ ಸರ್ಟಿಪಿಕೇಟ್ ನೀಡಿರುವ ಹೊರತಾಗಿಯೂ ರಾಜಸ್ಥಾನ ಮತ್ತು ಗುಜರಾತ್ ಸರಕಾರಗಳು ಆ ಚಿತ್ರದ ಬಿಡುಗಡೆಗೆ ತಮ್ಮ ರಾಜ್ಯದಲ್ಲಿ ನಿಷೇಧ ಹೇರಿವೆ.
ಪದ್ಮಾವತ್ ಚಿತ್ರ ಇದೇ ಜನವರಿ 25ರಂದು ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ