ಭಡ್ತಿ ಮೀಸಲಾತಿ : ಸುಪ್ರೀಂ ಅಂಗಳಕ್ಕೆ


Team Udayavani, Jan 17, 2018, 6:40 AM IST

suprim-court.jpg

ಬೆಂಗಳೂರು: ಭಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಸಿದ್ಧ ಎಂದು ಹೇಳುತ್ತಿರುವ ರಾಜ್ಯ ಸರಕಾರವು ಈಗ ನ್ಯಾಯಾಲಯದಲ್ಲಿ 3 ತಿಂಗಳ ಕಾಲಾವಕಾಶ ಕೋರಿದೆ. ಇದರಿಂದಾಗಿ ವಿವಾದದ ಚೆಂಡು ಮತ್ತೆ ಸುಪ್ರೀಂ ಕೋರ್ಟ್‌ ಅಂಗಳ ತಲುಪಿದಂತಾಗಿದೆ.

ಮುಂಭಡ್ತಿ ವಿಚಾರದ ಮಸೂದೆ ರಾಷ್ಟ್ರಪತಿ ಯವರ ಒಪ್ಪಿಗೆಗೆ ಹೋಗಿರುವುದನ್ನೇ ಪ್ರಮಾಣಪತ್ರದಲ್ಲಿ ಪ್ರಮುಖವಾಗಿ ಪ್ರಸ್ತಾವಿಸಿರುವ ರಾಜ್ಯ ಸರಕಾರ, ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆದಿದ್ದು, ಇನ್ನೂ ಮೂರು ತಿಂಗಳು ಕಾಲಾವಕಾಶ ಬೇಕು ಎಂದು ಹೇಳಿದೆ.

ಹೀಗಾಗಿ ಸುಪ್ರೀಂ ಕೋರ್ಟ್‌ ಮುಂದೇನು ಮಾಡಲಿದೆ ಎಂಬುದರತ್ತ ಎಲ್ಲರ ಚಿತ್ತ ಹರಿದಿದೆ. ಈ ಮಧ್ಯೆ ರಾಜ್ಯ ಸರಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ “ಅಹಿಂಸಾ’ ಹೋರಾಟ ಸಮಿತಿ ಕಾನೂನು ಹೋರಾಟ ಮುಂದು ವರಿಸಲು ತೀರ್ಮಾನಿಸಿದೆ. ಅಲ್ಲದೆ ವಿಧಾನಸಭೆ ಚುನಾವಣೆ ವರೆಗೂ ವಿವಾದ ಯಥಾಸ್ಥಿತಿ ಮುಂದುವರಿಯಲಿ ಎನ್ನುವುದು ಕಾಂಗ್ರೆಸ್‌ನ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಮತ್ತೆ ಮೂರು ತಿಂಗಳ ಕಾಲಾವಕಾಶ ಕೋರಿದೆ ಎಂದು ಹೇಳಲಾಗಿದೆ.

ಮೀನಮೇಷ ಯಾಕೆ?
 ಮತ್ತೂಂದು ಮೂಲಗಳ ಪ್ರಕಾರ ಬಹುತೇಕ ಇಲಾಖೆಗಳ ಪರಿಷ್ಕೃತ ಜೇಷ್ಠತಾ ಪಟ್ಟಿ ಸಿದ್ಧಗೊಂಡಿದೆಯಾದರೂ ಲೋಕೋಪಯೋಗಿ, ಜಲಸಂಪನ್ಮೂಲ ಇಲಾಖೆಯದೇ ಸಮಸ್ಯೆಯಾಗಿದೆ. ಲೋಕೋಪಯೋಗಿ ಹಾಗೂ ಜಲಸಂಪನ್ಮೂಲ ಇಲಾಖೆಯ ಜೇಷ್ಠತಾ ಪಟ್ಟಿ 2002ರ ವರೆಗೆ ಮಾತ್ರ ಸಿದ್ಧಪಡಿಸಲಾಗಿದೆ. 2017ರ ವರೆಗಿನ ಜೇಷ್ಠತಾ ಪಟ್ಟಿ ಸಿದ್ಧಪಡಿಸಿದರೆ ಈಗಾಗಲೇ ಮೀಸಲಾತಿಯಡಿ ಭಡ್ತಿ ಪಡೆದಿರುವ ಕೆಲವು ಪ್ರಭಾವಿ ಅಧಿಕಾರಿಗಳಿಗೆ ಹಿಂಭಡ್ತಿ ನೀಡಬೇಕಾಗುತ್ತದೆ. ಭಡ್ತಿ 
ಪಡೆದು ಆಯಕಟ್ಟಿನ ಜಾಗದಲ್ಲಿರುವವರು ಹಿರಿಯ ಸಚಿವರಿಗೆ ಆಪ್ತರಾಗಿರುವುದರಿಂದ ಅವರಿಗೆ ಹಿಂಭಡ್ತಿ ನೀಡುವುದು ಕಷ್ಟ. ಹೀಗಾಗಿ ಮೀನಮೇಷ ಎಣಿಸಲಾಗುತ್ತಿದೆ. ಜೇಷ್ಠತಾ ಪಟ್ಟಿ ಸಿದ್ಧಪಡಿಸುವಲ್ಲಿಯೂ ಕೆಲವು ಲೋಪದೋಷ ಆಗಿದ್ದು, ಅದನ್ನು ಸರಿಪಡಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ತತ್‌ಕ್ಷಣಕ್ಕೆ ಇದು ಬಗೆಹರಿಯುವಂತದ್ದಲ್ಲ ಎಂದು ಹೇಳಲಾಗುತ್ತಿದೆ.

ಸುಪ್ರೀಂ ಕೋರ್ಟ್‌ ಒಂದೊಮ್ಮೆ ತಮ್ಮ ಹಿಂದಿನ ಆದೇಶ ಪಾಲನೆ ಮಾಡಲೇಬೇಕು ಎಂದು ಸೂಚಿಸಿದರೆ ರಾಜ್ಯ ಸರಕಾರ ಮತ್ತೆ ಇಕ್ಕಟ್ಟಿಗೆ ಸಿಲುಕಲಿದೆ. ಆಗ ಅನಿವಾರ್ಯವಾಗಿ ಜೇಷ್ಠತಾ ಪಟ್ಟಿ ಸಲ್ಲಿಸಲೇಬೇಕಾಗುತ್ತದೆ.

ಸರಕಾರಕ್ಕೆ ಆಶಾಭಾವನೆ
ರಾಷ್ಟ್ರಪತಿ ಬಳಿ ಮಸೂದೆ ಇರುವುದರಿಂದ ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ ಸಹ ರಾಜ್ಯ ಸರಕಾರದ ಮನವಿಗೆ ಒಪ್ಪಿಗೆ ನೀಡಬಹುದು ಎಂಬ ಆಶಾಭಾವನೆ ಸರಕಾರದ್ದಾಗಿದೆ. ಆದರೆ ಸರಕಾರದ ನಡೆ ವಿರುದ್ಧ ಅಹಿಂಸಾ ಹೊರಾಟ ಸಮಿತಿಯೂ ನ್ಯಾಯಾಲಯದ ಮೊರೆ ಹೋಗಲು ತೀರ್ಮಾನಿಸಿದೆ. ಬುಧವಾರ ಅಥವಾ ಗುರುವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.