ಗಣರಾಜ್ಯೋತ್ಸವದಲ್ಲಿ ಕರುನಾಡ ಜೀವವೈಭವ
Team Udayavani, Jan 18, 2018, 6:00 AM IST
ಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಪಥಸಂಚಲನದಲ್ಲಿ ಈ ಬಾರಿ ಕರ್ನಾಟಕದ ಪಶ್ಚಿಮಘಟ್ಟದ ಜೀವವೈವಿಧ್ಯತೆಯ ಪ್ರತಿರೂಪ ಅನಾವರಣಗೊಳ್ಳಲಿದೆ. ಪಥ ಸಂಚಲನದ ರಾಜಮಾರ್ಗದಲ್ಲಿ ಹುಲಿ, ಸಿಂಹ, ಆನೆ ಸೇರಿದಂತೆ ಪ್ರಾಣಿಗಳ ಧ್ವನಿ, ಪಕ್ಷಿಗಳ ನೀನಾದದ ಹಿಮ್ಮೇಳವೂ ಮೊಳಗಲಿದೆ.
ರಾಜ್ಯದ ಪರಿಸರ ಮತ್ತು ವನ್ಯಜೀವಿಯ ಶ್ರೀಮಂತಿಕೆಯನ್ನು ಗಣರಾಜ್ಯೋತ್ಸವದ ಮೂಲಕ ವಿಶ್ವಕ್ಕೆ ಪರಿಚಯಿಸುವ ಪ್ರಯತ್ನವಾಗಿ ಕರ್ನಾಟಕದ ವನ್ಯಜೀವಿ ಸಂಪತ್ತಿನ ವೈಭವ ಸಾರುವ ಪರಿಕಲ್ಪನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಬಾರಿಯ ಸ್ತಬ್ಧಚಿತ್ರ ನಿರ್ಮಿಸುತ್ತಿದೆ. ಖ್ಯಾತ ಕಲಾವಿದ ಶಶಿಧರ ಅಡಪ ಮಾರ್ಗದರ್ಶನದಲ್ಲಿ ಪ್ರತಿರೂಪಿ ತಂಡ ಸ್ಥಬ್ಧಚಿತ್ರ ತಯಾರಿಯಲ್ಲಿದ್ದು, ಪ್ರವೀಣ್ ರಾವ್ ಅವರ ಹಿನ್ನೆಲೆ ಸಂಗೀತವೂ ಇದೆ.
50 ಲಕ್ಷ ರೂ. ವೆಚ್ಚದಲ್ಲಿ ಸ್ಥಬ್ಧಚಿತ್ರ ನಿರ್ಮಾಣವಾಗುತ್ತಿದ್ದು, ಜ.24 ರಂದು ತಾಲೀಮು ನಡೆಯಲಿದೆ.
ಕರ್ನಾಟಕದ ರಾಷ್ಟ್ರೀಯ ಉದ್ಯಾವನಗಳು, ದೇಶದ ಶೇ.70 ರಷ್ಟು ಹುಲಿ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆ, ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಐದನೇ ಸ್ಥಾನ ಪಡೆದಿರುವುದು ಸ್ಥಬ್ಧ ಚಿತ್ರದಲ್ಲಿ ಬಿಂಬಿತವಾಗಲಿದೆ. ಜತೆಗೆ ಕರ್ನಾಟಕದ ಪಕ್ಷಿ ಪ್ರಪಂಚದ ಹೆಮ್ಮೆಯಾದ ರಾಷ್ಟ್ರೀಯ ಪಕ್ಷಿ ನವಿಲು, ಹಾರ್ನ್ಬಿಲ್ (ಮಂಗಟ್ಟೆ), ಕಿಂಗ್ ಫಿಶರ್ (ಮಿಂಚುಳ್ಳಿ) ಹಕ್ಕಿಗಳ ಪ್ರತಿರೂಪ ಇರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ
Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ
Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ