ವೀರಭದ್ರೇಶ್ವರ ಜಾತ್ರೆ:ಸಿದ್ಧತೆಗೆ ಸ್ಥಳ ಪರಿಶೀಲನೆ
Team Udayavani, Jan 19, 2018, 11:51 AM IST
ಹುಮನಾಬಾದ: ಕುಲದೇವ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಪೂರ್ವ ಸಿದ್ಧತಾ ಕಾರ್ಯರೂಪಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಪಟ್ಟಣದ ಅಗ್ನಿಕುಂಡ, ದೇವಸ್ಥಾನ ಹಾಗೂ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪರಿಶೀಲಿಸಿದರು.
ಜಾತ್ರೆಗೆ ಪ್ರತಿವರ್ಷ ಜನ ಸಂಖ್ಯೆ ಹೆಚ್ಚಾಗುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಸೂಚಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪಟ್ಟಣದ ಅಗ್ನಿ ಕುಂಡಕ್ಕೆ ಭೇಟಿ ನೀಡಿದರು.
ಅಲ್ಲದೇ ಸಾರ್ವಜನಿಕರಿಗೆ ತೊಂದರೆ ಆಗದಂತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು. ದೇವಸ್ಥಾನದ
ಒಳಗಿನ ಹಾಗೂ ಹೊರ ಪ್ರದೇಶದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಭಕ್ತರಿಗೆ ಸರಳವಾಗಿ ದೇವರ ದರ್ಶನ ಪಡೆಯಲು ಅನುಕುಲ ಮಾಡುವ ಕುರಿತು ಚರ್ಚಿಸಿದರು.
ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ವಿಡಿಯೋ ಕ್ಯಾಮರಾ, ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಜಾತ್ರೆಗೆ ಆಗಮೀಸುವ ಜನರ ಮೇಲೆ ಸೂಕ್ಷ್ಮನೀಗಾ ವಹಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಅಗ್ನಿಕುಂಡ, ಬಸ್ ನಿಲ್ದಾಣ ಸೇರಿದಂತೆ ವಿವಿಧಡೆ ಕ್ಯಾಮೆರಾಗಳನ್ನು ಅಳವಡಿಸಿ ಕಳ್ಳತನ, ಯಾವುದೇ ಅಪರಾಧ ನಡೆಯದಂತೆ ಹಾಗೂ ಯಾವುದಾರೂ ಘಟನೆಗಳು ಸಂಭವಿಸಿದರೆ ಕೂಡಲೆ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ