ರಂಗಭೂಮಿಗೆ ಸಾಣೇಹಳ್ಳಿ ಮಠದ ಕೊಡುಗೆ ಅಪಾರ
Team Udayavani, Jan 19, 2018, 12:50 PM IST
ಹುಬ್ಬಳ್ಳಿ: ಸಾಣೇಹಳ್ಳಿ ಶಿವಕುಮಾರ ಕಲಾಸಂಘ “ಶಿವಸಂಚಾರ’ ನಾಟಕೋತ್ಸವದ ಉದ್ಘಾಟನೆ ನಗರದ ಆದರ್ಶನಗರದ ಕನ್ನಡ ಭವನದಲ್ಲಿ ಗುರುವಾರ ನಡೆಯಿತು. ಡಾ| ಪಾಂಡುರಂಗ ಪಾಟೀಲ ಮಾತನಾಡಿ, ನಾಟಕದ ಮೂಲಕ ಸಮಾಜ ಬದಲಾವಣೆ ಸಾಧ್ಯ ಎಂಬುದನ್ನು ತೋರಿಸಿಕೊಟ್ಟವರು ಸಾಣೇಹಳ್ಳಿ ಸ್ವಾಮಿಗಳು.
ಅವರ ತಂಡದವರು ಪ್ರತಿ ವರ್ಷ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುತ್ತಾರೆ. ಹವ್ಯಾಸಿ ರಂಗಭೂಮಿಯ ಉತ್ತೇಜನಕ್ಕೆ ಸಾಣೇಹಳ್ಳಿ ಮಠದ ಕೊಡುಗೆ ಅಪಾರ ಎಂದರು. ಅನೇಕ ಕಲಾವಿದರು, ರಂಗಕರ್ಮಿಗಳನ್ನು ರೂಪಿಸಿದ ಕೀರ್ತಿ ಶಿವಸಂಚಾರಕ್ಕಿದೆ. ನಾಟಕಗಳನ್ನು ಆಯೋಜಿಸುವುದು ಕಡುಕಷ್ಟವಾಗಿದೆ.
ಇಂಥ ಸಂದರ್ಭದಲ್ಲಿ ನಿರಂತರ ನಾಟಕ ಪ್ರದರ್ಶನಗಳನ್ನು ನೀಡುತ್ತ ರಂಗಭೂಮಿಯನ್ನು ಜೀವಂತವಾಗಿಟ್ಟಿರುವುದು ಶ್ಲಾಘನೀಯ. ನಾಟಕ ಪ್ರದರ್ಶನಕ್ಕೆ ಕಡಿಮೆ ದರದಲ್ಲಿ ಕನ್ನಡ ಭವನ ನೀಡುವ ಕುರಿತು ಮಹಾಪೌರರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, ನಾವು ನಿತ್ಯ ಜೀವನದಲ್ಲಿ ಹಲವು ಬಾರಿ ನಾಟಕ ಮಾಡುತ್ತೇವೆ. ಆದರೆ ನಿಜವಾಗಿಯೂ ಯಾವುದು ನಾಟಕ ಎಂಬುದನ್ನು ತಿಳಿಯಲು ನಾಟಕ ನೋಡಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಮಾತನಾಡಿ, ಸಾಣೆಹಳ್ಳಿ ಮಠ ಪ್ರತಿ ವರ್ಷ ಮೂರು ವಿಶಿಷ್ಟ ನಾಟಕಗಳನ್ನು ಪ್ರದರ್ಶಿಸುತ್ತಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕಗಳನ್ನು ವೀಕ್ಷಿಸಬೇಕು ಎಂದು ಹೇಳಿದರು. ಆರ್.ಟಿ. ಮಜ್ಜಗಿ ಮಾತನಾಡಿ, ನಾಟಕಗಳ ಆಯೋಜನೆಗೆ ಕನ್ನಡ ಭವನವನ್ನು ಉಚಿತವಾಗಿ ನೀಡಲು ಮಹಾನಗರ ಪಾಲಿಕೆ ಮುಂದಾಗಬೇಕು.
ರಂಗಭೂಮಿಯನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ ಎಂದರು. ನಂತರ ಡಾ| ಸಿದ್ದಲಿಂಗ ಪಟ್ಟಣಶೆಟ್ಟಿ ಅನುವಾದಿಸಿದ, ಮಾಲತೇಶ ಬಡಿಗೇರ ನಿರ್ದೇಶನದ “ಚೋರ ಚರಣದಾಸ’ ನಾಟಕದ ಪ್ರದರ್ಶನ ನಡೆಯಿತು. ಜ. 19ರಂದು “ಮೋಳಿಗೆ ಮಾರಯ್ಯ’ ಹಾಗೂ ಜ. 20ರಂದು “ಸಾಯೋ ಆಟ’ ನಾಟಕಗಳ ಪ್ರದರ್ಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು