ಕಡಲೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಿ


Team Udayavani, Jan 19, 2018, 12:50 PM IST

h2-kadale.jpg

ಧಾರವಾಡ: ಜಿಲ್ಲೆಯಲ್ಲಿ ಕಡಲೆ ಬೆಳೆ ಉತ್ಪನ್ನ ಈಗಾಗಲೇ ರೈತನ ಕೈಗೆ ಬಂದಿದ್ದು, ಸೂಕ್ತ ದರ ಲಭ್ಯವಾಗದೇ ಕೃಷಿಕರು ಆತಂಕದಲ್ಲಿದ್ದು, ಕೂಡಲೇ ಬೆಂಬಲ  ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಹೇಳಿದರು. ಇಲ್ಲಿನ ಜಿಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ಕಡಲೆ ಬೆಳೆ ಬೆಳೆದಿರುವ ರೈತರಿಗೆ ಸಹಾಯ ಹಸ್ತ ಚಾಚುವುದು ಅಗತ್ಯ. ಈಗಾಗಲೇ  ಬೆಂಬಲ ಬೆಲ ಘೋಷಣೆ ಮಾಡಿದ್ದು, ತಕ್ಷಣ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಬೇಕು ಎಂದು ಸೂಚಿಸಿದರು. ಇದಕ್ಕೆ ಉತ್ತರಿಸಿದ ಕೃಷಿ ಜಂಟಿ ನಿರ್ದೇಶಕ  ಟಿ.ಎಸ್‌.ರುದ್ರೇಶಪ್ಪ, ಈಗಾಗಲೇ 4400 ರೂ. ಕನಿಷ್ಠ ಬೆಂಬಲ ಬೆಲೆ ಘೋಷಿಸಲಾಗಿದೆ. ಖರೀದಿ ಕೇಂದ್ರ ತೆರೆಯುವ ಕುರಿತು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ.

ಕೃಷಿ ಸಚಿವರು ಖುದ್ದಾಗಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಪರಿಸ್ಥಿತಿ ವಿವರಿಸಿ, ಖರೀದಿ ಕೇಂದ್ರ ತೆರೆಯಲು ಅನುಮತಿ ಕೋರಿದ್ದಾರೆ. ಕೇಂದ್ರದಿಂದ ಅನುಮತಿ ದೊರೆತ ಕೂಡಲೇ 3-4 ದಿನಗಳಲ್ಲಿ ಖರೀದಿ ಕೇಂದ್ರ  ಆರಂಭಿಸಲಾಗುವುದು ಎಂದರು.

ಮೆಕ್ಕೆಜೋಳಕ್ಕೂ ಖರೀದಿ ಕೇಂದ್ರ ಆರಂಭಿಸುವಂತೆ ಕೇಳಿದ ಅಧ್ಯಕ್ಷರ ಸೂಚನೆಗೆ ಉತ್ತರಿಸಿದ ರುದ್ರೇಶಪ್ಪ, ಅನ್ನ ಭಾಗ್ಯ ಯೋಜನೆಯಡಿ ಮೆಕ್ಕೆಜೋಳವನ್ನು ವಿತರಿಸುವುದಾದರೆ ಮಾತ್ರ ಬೆಂಬಲ ಬೆಲೆಯಡಿ ಖರೀದಿ ಮಾಡುವಂತೆ ಸರಕಾರ ಸೂಚಿಸಿದೆ.

ನಮ್ಮ ಭಾಗದಲ್ಲಿ  ಮೆಕ್ಕೆಜೋಳವನ್ನು ಆಹಾರ ಧಾನ್ಯವಾಗಿ ಬಳಸದ ಕಾರಣ ಬೆಂಬಲ ಬೆಲೆ ನೀಡಿ ಖರೀದಿ ಕೇಂದ್ರ ಆರಂಭಿಸಲು ಸಾಧ್ಯವಾಗುತ್ತಿಲ್ಲ ಎಂದರು. ಇದಕ್ಕೆ  ಸ್ಪಂದಿಸಿದ ಜಿಪಂ ಅಧ್ಯಕ್ಷರು, ಕಡಲೆ ಬೀಜ ಖರೀದಿಯೊಂದಿಗೆ ಮೆಕ್ಕೆಜೋಳಕ್ಕೂ ಬೆಂಬಲ ಬೆಲೆ ನಿಗದಿಗೊಳಿಸಿ ಖರೀದಿ ಕೇಂದ್ರ ಆರಂಭಿಸಲು ಅನುಮತಿ  ಕೋರಿ ಜಿಪಂ ಸಾಮಾನ್ಯ ಸಭೆಯ ಠರಾವು ಪಡೆದು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. 

ಜಿಲ್ಲೆಯಲ್ಲಿ ಕೃಷಿಹೊಂಡಗಳ ನಿರ್ಮಿಸುವಾಗ ಗುಣಮಟ್ಟ  ಕಾಯ್ದುಕೊಳ್ಳಲು ಆದ್ಯತೆ ನೀಡಬೇಕು. ತಾಪಂ ತ್ತೈಮಾಸಿಕ ಸಭೆ ನಡೆಯುವ ಸಂದರ್ಭದಲ್ಲಿ ಆಯಾ ತಾಲೂಕಿನ ಜಿಪಂ ಸದಸ್ಯರಿಗೆ ಕಡ್ಡಾಯವಾಗಿ ಸಭೆಯ  ನೋಟಿಸ್‌ ತಲುಪಿಸಬೇಕು. ಸಭೆಯ ನಂತರ ಅದರ ನಡವಳಿಗಳನ್ನೂ ತಲುಪಿಸಬೇಕು.

ಜಿಲ್ಲೆಯಾದ್ಯಂತ ಎಲ್ಲ ಗ್ರಾಪಂ ಶಾಲೆ, ಹಾಸ್ಟೆಲ್‌ಗ‌ಳು, ಅಂಗನವಾಡಿ ಸೇರಿದಂತೆ ಮತ್ತಿತರ ಸರಕಾರಿ ಕಟ್ಟಡಗಳ ಆವರಣದಲ್ಲಿ ಅಡುಗೆ ಕೈತೋಟ ನಿರ್ಮಿಸಬೇಕು. ಇನ್ಮುಂದೆ ಜಿಪಂ ಸಾಮಾನ್ಯ ಸಭೆಗಳಿಗೆ  ಪ್ರಮುಖ ಇಲಾಖೆಗಳ ತಾಲೂಕು ಮಟ್ಟದ ಅ ಧಿಕಾರಿಗಳನ್ನು ಸಹ ಆಹ್ವಾನಿಸಬೇಕು ಎಂದು ಸೂಚಿಸಿದರು. 

ಬಂಡಿವಾಡ ಮತ್ತು ಕೋಳಿವಾಡ ಗ್ರಾಪಂ  ಪಿಡಿಒ ಕಾರ್ಯ ವೈಖರಿಗಳ ಬಗ್ಗೆ ಅಸಮಾಧಾನ ಹೊರ ಹಾಕಿದ ಅಧ್ಯಕ್ಷರು, ಈ ಕೂಡಲೇ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸಿಇಒ ಅವರಿಗೆ  ಸೂಚನೆ ನೀಡಿದರು. 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.