ಚೀನಾ ಉದ್ಧಟತನ; ಭಾರತದ್ದೇ ತಪ್ಪಂತೆ


Team Udayavani, Jan 20, 2018, 12:02 PM IST

Dokalm.jpg

ಬೀಜಿಂಗ್‌/ನವದೆಹಲಿ: ಡೋಕ್ಲಾಂ ನಮಗೆ ಸೇರಿದ್ದು. ಹೀಗಾಗಿ ಅಲ್ಲಿ ನಾವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿಯೇ ತೀರುತ್ತೇವೆ. ಈ ಬಗ್ಗೆ ಯಾರೂ ಮಾತನಾಡುವುದೇ ಬೇಡ’. ಈ ರೀತಿ ಹೇಳುವ ಮೂಲಕ ಚೀನಾವು ಭಾರತದ ಮುಂದೆ ಮತ್ತೆ ಉದ್ಧಟತನ ತೋರಿಸಿದೆ. ವಿವಾದಿತ ಡೋಕ್ಲಾಂ ಪ್ರದೇಶದಲ್ಲಿ ನೆರೆಯ ರಾಷ್ಟ್ರ ವ್ಯವಸ್ಥಿತ ರೀತಿಯಲ್ಲಿ ಸೇನೆಯ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಚೀನಾ ಎಚ್ಚರಿಕೆ ನೀಡುವ ಧ್ವನಿಯಲ್ಲಿ ಮಾತನಾಡಿದೆ.

ಕಳೆದ ವರ್ಷ 73 ದಿನಗಳ ಕಾಲ ಎರಡು ರಾಷ್ಟ್ರಗಳ ನಡುವೆ ಇದೇ ವಿವಾದಕ್ಕೆ ಸಂಬಂಧಿಸಿ ಭಾರೀ ವಿವಾದ ಸೃಷ್ಟಿಯಾಗಿತ್ತು. ಈ ಘಟನೆ ನಡೆದು ಐದು ತಿಂಗಳ ಬಳಿಕ ಮತ್ತೆ ಅದೇ ಪ್ರದೇಶದಲ್ಲಿ ಬಿಕ್ಕಟ್ಟು ಉಂಟಾಗಿದೆ.

ಬೆಳವಣಿಗೆಗಳ ಬಗ್ಗೆ ಬೀಜಿಂಗ್‌ನಲ್ಲಿ ಶುಕ್ರವಾರ ಪ್ರತಿಕ್ರಿಯೆ ನೀಡಿದ ಚೀನಾ ವಿದೇಶಾಂಗ ಇಲಾಖೆ ವಕ್ತಾರ, “ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳನ್ನು ನೋಡಿದೆ. ಆದರೆ, ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ಯಾರು ನೀಡಿದರು ಎಂದು ಗೊತ್ತಿಲ್ಲ’ ಎಂದು ಹೇಳಿದ್ದಾರೆ. ಡೋಕ್ಲಾಂ ವಿಚಾರದಲ್ಲಿ ತಮ್ಮ ದೇಶದ ಅಭಿಪ್ರಾಯ ಸ್ಪಷ್ಟವಾಗಿದೆ. ಅದು ಯಾವತ್ತೂ ಚೀನಾಕ್ಕೇ ಸೇರಿದ್ದು. ಅದಕ್ಕೆ ಸಂಬಂಧಿಸಿದಂತೆ ಯಾವುದೇ ವಿವಾದ ಇಲ್ಲ. ನಮ್ಮ ಭೂಪ್ರದೇಶದಲ್ಲಿನ ಜನರ ಹಾಗೂ ಸೇನೆಗಳ ಸಂಚಾರಕ್ಕೆ ಅನುಕೂಲವಾಗುವಂತೆ ಆ ಪ್ರದೇಶದಲ್ಲಿ ರಸ್ತೆ
ಸೇರಿದಂತೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಡೋಕ್ಲಾಂ ನಮ್ಮದೇ ಆಗಿರುವಾಗ ಕಾಮಗಾರಿ ನಡೆಸುವ ಎಲ್ಲ ಹಕ್ಕು ಇದೆ. ಇದನ್ನು, ಭಾರತವಾಗಲೀ, ಬೇರೆ ದೇಶವಾಗಲೀ ಪ್ರಶ್ನಿಸಬಾರದು ಎಂದೂ ವಕ್ತಾರರು ಹೇಳಿದ್ದಾರೆ.

ಪರಿಹಾರಕ್ಕೆ ಮಾರ್ಗಗಳಿವೆ: ಚೀನಾ ಸೇನೆ ಮತ್ತೆ ತಳವೂರಿರುವ ಬಗ್ಗೆ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ವಿದೇಶಾಂಗ ಇಲಾಖೆ ವಕ್ತಾರ ರವೀಶ್‌ ಕುಮಾರ್‌, ಬಿಕ್ಕಟ್ಟು ಸರಿಪಡಿಸಲು ಎರಡೂ ದೇಶಗಳು ಮಾರ್ಗೋಪಾಯಗಳನ್ನು ರೂಪಿಸಿವೆ ಎಂದು ಹೇಳಿದ್ದಾರೆ. ಆ ಪ್ರದೇಶದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ನಿಗಾ ಇರಿಸಿದ್ದೇವೆ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ಉಂಟಾಗುವುದಿದ್ದರೆ, ಅದನ್ನು ತಡೆಯಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಭಾರತದ್ದೇ ತಪ್ಪಂತೆ:
ಎರಡನೇ ಬಾರಿಗೆ ಕಳೆದ ಆಗಸ್ಟ್‌ನಲ್ಲಿ ಉಂಟಾಗಿದ್ದಂತೆಯೇ ವಿವಾದ ನಡೆಸಲು ಚೀನಾ ಸಿದ್ಧವಾಗಿದೆಯೇ ಎಂದು ಪ್ರಶ್ನಿಸಿ
ದಾಗ, “ಚಿಕನ್‌ ನೆಕ್‌ (ಪಶ್ಚಿಮ ಬಂಗಾಳದ ಸಿಲಿಗುರಿ ಮತ್ತು ಸಿಕ್ಕಿಂ ನಡುವಿನ ಸಣ್ಣ ಸ್ಥಳ) ಪ್ರದೇಶದ ಹೊರ ಭಾಗದಲ್ಲಿ ನಾವು ನಡೆಸು ತ್ತಿರುವ ಕಾಮಗಾರಿಗೆ ಭಾರತವೇ ಅಡ್ಡಿಪಡಿಸುತ್ತಿದೆ. ಇದರಿಂದಾಗಿ ಎರಡೂ ರಾಷ್ಟ್ರಗಳ ನಡುವಿನ ಸಂಬಂಧಕ್ಕೆ ಧಕ್ಕೆ ಬರಬಹುದು’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. 

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.