ರಸ್ತೆಯಲ್ಲಿರುವ ನಾಯಿ ಬೊಗಳಿದ್ರೆ ತಲೆ ಕೆಡಿಸಿಕೊಳ್ಳುವುದಿಲ್ಲ
Team Udayavani, Jan 20, 2018, 1:59 PM IST
ಬಳ್ಳಾರಿ: ‘ನಾವು ಹೇಳಿ ಕೇಳಿ ಹಠವಾದಿಗಳು. ಯಾವುದೋ ರಸ್ತೆಯಲ್ಲಿರುವ ನಾಯಿ ಬೊಗಳಿದರೆ ತಲೆ ಕೆಡಿಸಿಕೊಳ್ಳುವುದಿಲ್ಲ’ ಇದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ತಮ್ಮದೆ ಶೈಲಿಯಲ್ಲಿ ವಿರೋಧಿಗಳ ವಿರುದ್ಧ ಶನಿವಾರ ಕಿಡಿ ಕಾರಿದ ಪರಿ .
ಬಳ್ಳಾರಿಯಲ್ಲಿ ಉದ್ಯೋಗ ಮೇಳ ಉದ್ಘಾಟನೆ ಮಾಡಿ ಆಕ್ರೋಶ ಭರಿತರಾಗಿ ಮಾತನಾಡಿದ ಹೆಗಡೆ ‘ನಾನು ಇಲ್ಲಿ ಮತ ಕೇಳಲು ಬಂದಿಲ್ಲ. ಭಾಷಣ ಮಾಡಲು ಬಂದಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸು ನನಸು ಮಾಡಲು ಬಂದಿದ್ದೇನೆ’ ಎಂದರು.
‘ನಮಗೆ ಈ ಮಣ್ಣಿನ ಬಗ್ಗೆ , ಇಲ್ಲಿನ ಧರ್ಮದ ಗೌರವ ವಿದೆ ಜನರತ್ತು ಎತ್ತಿ ನಿಲ್ಲಿಸಬೇಕು’ ಎನ್ನುವ ಛಲ ವಿದೆ ಎಂದರು.
‘ಬಳ್ಳಾರಿಯಲ್ಲಿ ಕೌಶಲ್ಯ ಅಭಿವೃದ್ಧಿ ವಿವಿ ತೆರೆಯಲು ಮುಂದಾಗಿದ್ದು ಜಮೀನು ನೀಡಲು ಯಾರಾದರು ಮುಂದೆ ಬಂದರೆ ನಾವು ಮಾತುಕತೆ ನಡೆಸಲು ಸಿದ್ದರಿದ್ದೇವೆ’ ಎಂದರು.
ಸಮಾರಂಭದಲ್ಲಿ ಸಂಸದ ಶ್ರೀರಾಮುಲು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ದಲಿತ ಸಂಘಟನೆಗಳಿಂದ ಮುತ್ತಿಗೆ
ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಸಚಿವ ಹೆಗಡೆ ಅವರ ಕಾರಿಗೆ ದಲಿತ ಸಂಘಟನೆಯ ನೂರಾರು ಕಾರ್ಯಕರ್ತರು ಮುತ್ತಿಗೆ ಹಾಗಿ ಆಕ್ರೋಶ ವ್ಯಕ್ತ ಪಡಿಸಿದರು. ಕಪ್ಪು ಬಾವುಟಗಳನ್ನು ಪ್ರದರ್ಶಿಸಿ ಸಂವಿಧಾನ ವಿರೋಧಿ ಅನಂತ್ ಕುಮಾರ್ ಹೆಗಡೆಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಿದರು.
ಸಂಸದ ಶ್ರೀರಾಮುಲು ಅವರು ಕಾರಿನಿಂದ ಇಳಿದು ಬಂದು ಪ್ರತಿಭಟನಾ ನಿರತರ ಮನವೊಲಿಸಲು ಯತ್ನಿಸಿದರು.
ಸ್ಥಳದಲ್ಲಿದ್ದ ನೂರಾರು ಪೊಲೀಸರು ಪ್ರತಿಭಟನಾ ನಿರತರನ್ನು ಚದುರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!