ಗೋಳ್ತಮಜಲು ರೈಲ್ವೇ ಮೇಲ್ಸೇತುವೆ
Team Udayavani, Jan 20, 2018, 2:56 PM IST
ಬಂಟ್ವಾಳ: ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯ ಮಾಣಿಮಜಲು ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಜ. 19ರಂದು ಸಂಸದ ನಳಿನ್ ಕುಮಾರ್ ಕಟೀಲು ವೀಕ್ಷಣೆ ನಡೆಸಿದರು. ಸ್ಥಳೀಯರ ಆವಶ್ಯಕತೆಗಳ ಬಗ್ಗೆ, ಕುಂದುಕೊರತೆಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಪಡೆದು ಸಮಸ್ಯೆಗಳನ್ನು ಸರಿಪಡಿಸಲು ರೈಲ್ವೇ ಇಲಾಖೆಯ ಅಧಿಕಾರಿಗಳ ಸಭೆ ಕರೆಯುವುದಾಗಿ ಆಶ್ವಾಸನೆ ನೀಡಿದರು.
ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ತಾ.ಪಂ. ಮಾಜಿ ಉಪಾಧ್ಯಕ್ಷ, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು, ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ಗೋಳ್ತಮಜಲು ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಭಟ್, ಅಲ್ಪಸಂಖ್ಯಾಕ ಮೋರ್ಚಾದ ಅಧ್ಯಕ್ಷರು, ಗೋಳ್ತಮಜಲು ಗ್ರಾ.ಪಂ. ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ, ಯುವ ಮೋರ್ಚಾದ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಪಂ. ಸದಸ್ಯರಾದ ಬಿ.ಕೆ. ಶೇಖರ್ ಕೊಟ್ಟಾರಿ, ಮೋನಪ್ಪ ದೇವಶ್ಯ, ಲಲಿತಾ, ಜಯಶ್ರೀ, ಗಿರೀಶ್ ನೆಟ್ಲ, ಗುರುವಪ್ಪ ಗೌಡ, ಗೋಪಾಲಕೃಷ್ಣ ಪೂವಳ, ಪ್ರಮುಖರಾದ ವಾಸು ಮತ್ತಿತರರಿದ್ದರು.