ಟಗರು 2 ಶುರು!


Team Udayavani, Jan 20, 2018, 6:33 PM IST

Tagaru-2-Muhurath-4.jpg

ಒಂದು ಚಿತ್ರ ಯಶಸ್ವಿಯಾದ ಮೇಲೆ, ಅದರ ಮುಂದುವರೆದ ಭಾಗ ಬರುವುದು ವಾಡಿಕೆ. ಆದರೆ, “ಟಗರು’ ಚಿತ್ರದ ಬಿಡುಗಡೆಯ ಮುನ್ನವೇ ಅದರ ಮುಂದುವರೆದ ಭಾಗವನ್ನು ಶುರು ಮಾಡಲಾಗಿದೆ. ಶನಿವಾರ ಚಿತ್ರದ ಮುಹೂರ್ತ ಸಹ ಆಗಿದ್ದು, ಒಂದು ದೃಶ್ಯದ ಚಿತ್ರೀಕರಣ ಆಗಿದೆ.

ಹೌದು, “ಟಗರು 2′ ಚಿತ್ರದ ಮುಹೂರ್ತ ಸದ್ದಿಲ್ಲದೆ ಶನಿವಾರ ಬೆಳಿಗ್ಗೆ ಆಗಿದೆ. ಕೆಂಪೇಗೌಡ ನಗರದ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತವಾಗಿದೆ. ಮುಹೂರ್ತದ ನಂತರ ಶಿವಣ್ಣ ಲಾಂಗ್‌ ಹಿಡಿಯುವ ದೃಶ್ಯವನ್ನು ಚಿತ್ರೀಕರಿಸಲಾಗಿದೆ.

“ಟಗರು’ ಚಿತ್ರದ ಕೊನೆಯಲ್ಲಿ ಆ ದೃಶ್ಯ ಬರಲಿದೆ. ಹಾಗೆಯೇ “ಟಗರು 2′ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸಂದೇಶ ಸಹ ಬರಲಿದೆ. “ಚಿತ್ರದ ಮುಂದುವರೆದ ಭಾಗ ಮಾಡುವ ತೀರ್ಮಾನ ಇತ್ತೀಚೆಗೆ ತೆಗೆದುಕೊಳ್ಳಲಾಯಿತು. ಚಿತ್ರದ ಒನ್‌ಲೈನ್‌ ಸಹ ಸಿದ್ಧವಿದೆ. ಹಾಗಾಗಿ ಇವತ್ತು ಬೆಳಿಗ್ಗೆ ಮುಹೂರ್ತವಾಗಿದೆ. ಶಿವರಾಜಕುಮಾರ್‌ ಅಭಿನಯದ ಒಂದು ದೃಶ್ಯವನ್ನು ಸಹ ಚಿತ್ರೀಕರಣ ಮಾಡಲಾಗಿದೆ.

ಅದು “ಟಗರು’ ಚಿತ್ರದ ಕೊನೆಯಲ್ಲಿ ಬರಲಿದೆ. ಸುಮ್ಮನೆ “ಟಗರು 2′ ಕಮ್ಮಿಂಗ್‌ ಸೂನ್‌ ಎಂದು ತೋರಿಸುವ ಬದಲು, ಶಿವರಾಜಕುಮಾರ್‌ ಅಭಿನಯದ ಒಂದು ದೃಶ್ಯದ ಜೊತೆಗೆ ಕಮ್ಮಿಂಗ್‌ ಸೂನ್‌ ಎಂದು ತೋರಿಸಿದರೆ ಚೆನ್ನಾಗಿರುತ್ತದೆ ಎಂಬ ಕಾರಣಕ್ಕೆ ಆ ದೃಶ್ಯವನ್ನು ಚಿತ್ರೀಕರಿಸಲಾಯಿತು.

ಶಿವರಾಜಕುಮಾರ್‌ ಅವರ ಡೇಟ್ಸ್‌ ನೋಡಿಕೊಂಡು, ಮುಂದುವರೆದ ಭಾಗದ ಚಿತ್ರೀಕರಣ ಶುರು ಮಾಡುತ್ತೇವೆ’ ಎನ್ನುತ್ತಾರೆ ನಿರ್ಮಾಪಕ ಕೆ.ಪಿ. ಶ್ರೀಕಾಂತ್‌. ಅಂದಹಾಗೆ, “ಟಗರು’ ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.