ಶ್ರೀಕೃಷ್ಣ ಮಠ ರಾಜಾಂಗಣದ ನೂತನ ವೇದಿಕೆ ಉದ್ಘಾಟನೆ


Team Udayavani, Jan 21, 2018, 10:57 AM IST

Nidhi_Acharya_search_operation.jpg

ಉಡುಪಿ: ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ತಗಡನ್ನು ಹೊದೆಸುವ (ಸುವರ್ಣ ಗೋಪುರ) ಯೋಜನೆಗೆ ಪೂರಕವಾಗಿ ರಾಜಾಂಗಣದಲ್ಲಿ ನಿರ್ಮಿಸಿದ ಮಾದರಿಯನ್ನು ಶನಿವಾರ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನಾವರಣಗೊಳಿಸಿದರು.

ಪಲಿಮಾರು ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದಲ್ಲಿ ಗರ್ಭಗುಡಿಯ ಸುತ್ತ ಹಣತೆ ಗಳನ್ನು ಇರಿಸಲು ಮರದ ದಳಿಗಳನ್ನು ನಿರ್ಮಿಸಿದ್ದರೆ, ಈ ಪರ್ಯಾಯದಲ್ಲಿ ಸುವರ್ಣ ಗೋಪುರ ಯೋಜನೆ ಕೈಗೆತ್ತಿಕೊಂಡಿದ್ದಾರೆ. ಇವೆರಡರ ವಿನ್ಯಾಸವನ್ನು ಶೇಷಗಿರಿ ಕೆ.ಎಂ. ಅವರು ಮಾಡಿದ್ದಾರೆ. ಇದನ್ನು ಆಧರಿಸಿ ಸುವರ್ಣ ಗೋಪುರದ ಮಾದರಿಯನ್ನು ಕೇವಲ ಒಂದೂವರೆ ತಿಂಗಳಲ್ಲಿ ದಿನಕ್ಕೆ 18 ಗಂಟೆಗಳಂತೆ ಕೆಲಸ ನಿರ್ವಹಿಸಿ ಅರುಣ್‌ಕುಮಾರ್‌ ಮತ್ತು ಮೂಕಾಂಬಿಕಾ ಪಾಲಿಫೈಬರ್ನ ಸಿದ್ದರಾಜು ಅವರು ನಿರ್ಮಿಸಿದ್ದಾರೆ. ಅಂಬಲಪಾಡಿ ಪ್ರಕಾಶ ಆಚಾರ್ಯ, ಬಾಳ್ಕಟ್ಟ ಗಜೇಂದ್ರ ಆಚಾರ್ಯ, ಅರುಣಕುಮಾರ್‌ ಗುಂಡಿಬೈಲು ಮೊದಲಾದವರು ಸಹಕರಿಸಿದ್ದಾರೆ. ಉದ್ಯಮಿ ಭುವನೇಂದ್ರ ಕಿದಿಯೂರು ಅವರ ಸ್ಥಳದಲ್ಲಿ ಇದನ್ನು ನಿರ್ಮಿಸಿ ರಾಜಾಂಗಣಕ್ಕೆ ತರಲಾಗಿತ್ತು. 

ಗರ್ಭಗುಡಿಯಲ್ಲಿ ಅರ್ಚನೆ ನಡೆದರೆ ಇಲ್ಲಿ ಜ್ಞಾನಸತ್ರ ನಡೆಯಲಿದೆ. ಅಲ್ಲಿಂದ ಇಲ್ಲಿಗೆ ಬಂದ ಮನಸ್ಸಿನಲ್ಲಿ ದೇವರು ಪ್ರತ್ಯಕ್ಷವಾಗಲು ಪ್ರವಚನ ಶ್ರವಣ ನಡೆಯಬೇಕು. ಇದಕ್ಕಾಗಿ ರಾಜಾಂಗಣ ಮೀಸಲಿರುತ್ತದೆ. ಇದು ಜ್ಞಾನಿಗಳು ನೀಡಿದ ಎಂದೆಂದೂ ನಂದದ ಜ್ಞಾನದ ಮಂಗಳಾರತಿ ಎಂದು ಪಲಿಮಾರು ಶ್ರೀಗಳು ನುಡಿದರು. ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪ್ರಯಾಗ ಮಠದ ಶ್ರೀ ವಿದ್ಯಾತ್ಮತೀರ್ಥ ಶ್ರೀಪಾದರು ಉಪಸ್ಥಿತ ರಿದ್ದರು. ನೂತನ ವೇದಿಕೆ ನಿರ್ಮಿಸಲು ಸಹಕರಿಸಿ ದವರನ್ನು ಸ್ವಾಮೀಜಿ ಸಮ್ಮಾನಿಸಿದರು. ಸ್ವರ್ಣ ಗೋಪುರ ರಚನೆಯ ಬಗ್ಗೆ  ಮಸ್ಕತ್‌ನಲ್ಲಿ ಪ್ರಚುರಪಡಿಸಲು ಯುವರಾಜ್‌ ಮಸ್ಕತ್‌ ಅವರು ಕರಪತ್ರಗಳನ್ನು ಸ್ವೀಕರಿಸಿದರು. ಮೋಹನ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಪರ್ಯಾಯ ಸ್ವಾಗತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.