ಐಟಿಐ ಕಾಲೇಜು ಕಟ್ಟಡ ತೆರವಿಗೆ ನ್ಯಾಯಾಲಯ ಆದೇಶ


Team Udayavani, Jan 22, 2018, 11:55 AM IST

gul-8.jpg

ವಾಡಿ: ಅಧಿಕಾರಿಗಳು ಮಾಡಿದ ಸಣ್ಣ ಎಡವಟ್ಟಿ ನಿಂದ ನಿರ್ಮಾಣ ಹಂತದಲ್ಲಿರುವ ಸರಕಾರಿ ಕಾಲೇಜು ಕಟ್ಟಡವೊಂದನ್ನು ಧರೆಗುರುಳಿಸಬೇಕಾದ ಪ್ರಸಂಗ ಎದುರಾಗಿದ್ದು, ಸರಕಾರದ ಕೋಟ್ಯಂತರ ರೂ. ಅನುದಾನ
ನೀರುಪಾಲಾಗಲಿದೆ.

ರಾವೂರ-ಲಕ್ಷ್ಮೀಪುರವಾಡಿ ಗ್ರಾಮಗಳ ಮಧ್ಯೆ ನಿರ್ಮಿಸಲಾಗುತ್ತಿರುವ ವಾಡಿ ಸರಕಾರಿ ಕೈಗಾರಿಕಾ ತರಬೇತಿ
ಕೇಂದ್ರ (ಐಟಿಐ) ಕಾಲೇಜು ಕಟ್ಟಡವನ್ನು ಅನಧಿಕೃತ ಜಾಗದಲ್ಲಿ ಕಟ್ಟಲಾಗುತ್ತಿದ್ದು, ಅದನ್ನು ತೆರವುಗೊಳಿಸಿ ಜಮೀನು ಮಾಲೀಕರಿಗೆ ಭೂಮಿ ಬಿಟ್ಟುಕೊಡಬೇಕು ಎಂದು ಕೋರ್ಟ್‌ ಆದೇಶ ನೀಡಿರುವುದರಿಂದ ಅಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಚಿಂತೆಗೀಡು ಮಾಡಿದೆ.

ರಾವೂರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಸರ್ವೇ ನಂ. 177ರಲ್ಲಿನ 116.38 ಎಕರೆ ಸರಕಾರಿ
ಜಾಗದಲ್ಲಿ 4 ಎಕರೆಯನ್ನು ಕಾಲೇಜು ಕಟ್ಟಡ ಕಟ್ಟಲು ಸರಕಾರ ನೀಡಿತ್ತು. ನಬಾರ್ಡ್‌ ಯೋಜನೆಯಡಿ ಮಂಜೂರಾದ ಒಟ್ಟು 3 ಕೋಟಿ ರೂ. ಅನುದಾನದಲ್ಲಿ ವಾಡಿ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದ ನೂತನ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿತ್ತು. ದಾಖಲೆಗಳ ಸಮೇತ ಜಾಗ ಪರಿಶೀಲನೆ ಮಾಡಿ ಕಟ್ಟಡ ಪರವಾನಿಗೆ ನೀಡಬೇಕಾದ ಅಧಿಕಾರಿಗಳು, ಉದ್ದೇಶಿತ ಜಾಗದ ಬದಲು ಗಾಂಧಿನಗರದ ಪಟ್ಟಾ ಸರ್ವೇ ನಂ. 56.57 ರಲ್ಲಿ ರೈತರೊಬ್ಬರಿಗೆ ಸೇರಿದ ಜಾಗೆ ತೋರಿಸಿದ್ದರು ಎನ್ನಲಾಗಿದೆ.

ಕಾಮಗಾರಿ ಆರಂಭವಾದ ವೇಳೆ ಎಚ್ಚೆತ್ತ ಜಮೀನು ಮಾಲೀಕರಾದ ಕಮಲಾಬಾಯಿ ಶರಣಪ್ಪ, ಬಸಣ್ಣ ನಾಗಪ್ಪ ಹಾಗೂ ಅಮರೇಶ ಸಿದ್ರಾಮಪ್ಪ ಎನ್ನುವರು ತಮ್ಮ ಮೂಲ ದಾಖಲೆಗಳೊಂದಿಗೆ ಬಂದು ಅಧಿಕಾರಿಗಳೊಂದಿಗೆ ತಕರಾರು
ತೆಗೆದಿದ್ದರು ಎನ್ನಲಾಗಿದೆ. ಈ ವೇಳೆ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿತ್ತು. ಅನ್ಯಾಯ ಪ್ರಶ್ನಿಸಿ ರೈತರು ಕೋರ್ಟ್‌ ಮೊರೆ ಹೋಗಿದ್ದರು.

ಸುದೀರ್ಘ‌ ವಿಚಾರಣೆ ನಡೆಸಿದ ನ್ಯಾಯಾಲಯ 2017 ಡಿಸೆಂಬರ್‌ 6ರಂದು ಅಂತಿಮ ತೀರ್ಪು ನೀಡಿದ್ದು, ಎರಡು ತಿಂಗಳೊಳಗಾಗಿ ಕಟ್ಟಡ ತೆರವುಗೊಳಿಸಿ ಜಮೀನು ಬಿಟ್ಟುಕೊಡಬೇಕು ಎಂದು ಸಂಬಂಧಿಸಿದ ಸರಕಾರಿ ಅಧಿಕಾರಿಗಳಿಗೆ ಆದೇಶ ನೀಡಿದೆ. ಜಮೀನು ಉಳಿಸಿಕೊಳ್ಳಲು ಕಳೆದ ಮೂರ್‍ನಾಲ್ಕು ವರ್ಷಗಳಿಂದ ನ್ಯಾಯಾಲಕ್ಕೆ ಅಲೆಯುತ್ತಿದ್ದ ರೈತರಿಗೆ ಕೊನೆಗೂ ನ್ಯಾಯ ಸಿಕ್ಕಿದೆ. ಆದರೆ ಬೇಜವಾಬ್ದಾರಿ ಅಧಿಕಾರಿಗಳ ದೋರಣೆಗೆ ಸರಕಾರದ ಕೋಟ್ಯಂತರ ರೂ. ಅನುದಾನ ಮಣ್ಣುಪಾಲಾಗಿದೆ. ಜತೆಗೆ ಸಮಯ ಹಾಳಾಗಿ ವಿದ್ಯಾರ್ಥಿಗಳು ಮತ್ತಷ್ಟು ಸಮಸ್ಯೆಗೆ ಸಿಲುಕುವಂತಾಗಿದೆ.

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.