ರಾಜ್ಯಕ್ಕೆಸೂಪರ್‌ ಓವರ್‌ ಸೋಲು


Team Udayavani, Jan 22, 2018, 3:05 PM IST

22-37.jpg

ಕೋಲ್ಕತಾ: ವಿನಯ್‌ ಕುಮಾರ್‌ ನೇತೃತ್ವದ ಕರ್ನಾಟಕ ತಂಡ ಸೈಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯ ಸೂಪರ್‌ ಲೀಗ್‌ನ ಮೊದಲ ಪಂದ್ಯದಲ್ಲಿ ಪಂಜಾಬ್‌ ವಿರುದ್ಧ “ಸೂಪರ್‌ ಓವರ್‌’ ಸೋಲುಂಡಿದೆ. ನಿಗದಿತ 20 ಓವರ್‌ಗಳ ಪಂದ್ಯದಲ್ಲಿ ಉಭಯ ತಂಡಗಳು 158 ರನ್‌ ಬಾರಿಸಿ ಟೈ ಸಾಧಿಸಿದ್ದವು. ಹೀಗಾಗಿ ಪಂದ್ಯ ಫ‌ಲಿತಾಂಶ ನಿರ್ಧಾರಕ್ಕೆ ಸೂಪರ್‌ ಓವರ್‌ (ಹೆಚ್ಚುವರಿ 1 ಓವರ್‌) ಮೊರೆ ಹೋಗಲಾಯಿತು.

ಭಾನುವಾರ ಇಲ್ಲಿ ನಡೆದ “ಎ’ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ 7 ವಿಕೆಟ್‌ಗೆ 158 ರನ್‌ ಬಾರಿಸಿತ್ತು. ಇದಕ್ಕೆ ಉತ್ತರವಾಗಿ ಪಂಜಾಬ್‌ ಕೂಡ 9 ವಿಕೆಟ್‌ಗೆ 158 ರನ್‌ ಬಾರಿಸಿತ್ತು. ಸೂಪರ್‌ ಓವರ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 15 ರನ್‌ ಬಾರಿಸಿದರೆ, ಕರ್ನಾಟಕ 11 ರನ್‌ ಬಾರಿಸಿ ಸೋಲುಂಡಿದೆ. 

ಮನ್‌ದೀಪ್‌ ಸ್ಫೋಟಕ ಆಟ: 159 ರನ್‌ ಗುರಿ ಬೆನ್ನುಹತ್ತಿದ ಪಂಜಾಬ್‌ ತಂಡಕ್ಕೆ ಆರಂಭಿಕ ಬ್ಯಾಟ್‌ ಮನ್‌ ಮನ್‌ದೀಪ್‌ ಸ್ಫೋಟ ಬ್ಯಾಟಿಂಗ್‌ ಪ್ರದರ್ಶಿಸುವ ಮೂಲಕ ತಂಡಕ್ಕೆ ನೆರವಾದರು. ಮನ್‌ ದೀಪ್‌ 29 ಎಸೆತದಲ್ಲಿ 45 ರನ್‌ ಬಾರಿಸಿ ವಿಕೆಟ್‌ ಕಳೆದುಕೊಂಡರು. ಅವರ ಆಟದಲ್ಲಿ 7 ಬೌಂಡರಿ, 1 ಸಿಕ್ಸರ್‌ ಸೇರಿತ್ತು. 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಹರ್ಭಜನ್‌ ಸಿಂಗ್‌ 19 ಎಸೆತದಲ್ಲಿ 5 ಬೌಂಡರಿ, 1 ಸಿಕ್ಸರ್‌ ಸೇರಿದಂತೆ 33 ರನ್‌ ಬಾರಿಸಿ ವಿಕೆಟ್‌ ಕಳೆದುಕೊಂಡರು. ಈ ಜೋಡಿ 2ನೇ ವಿಕೆಟ್‌ಗೆ 8.1
ಓವರ್‌ಗೆ 82 ರನ್‌ಗೆ ತೆದುಕೊಂಡು ಹೋದರು. ನಂತರ ಒಂದರ ನಂತರ ಒಂದರಂತೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿದರೂ ಅಂತಿಮವಾಗಿ 158 ರನ್‌ ಬಾರಿಸಿ ಟೈ ಸಾಧಿಸುವಲ್ಲಿ ಯಶಸ್ವಿಯಾಯಿತು. ಕರ್ನಾಟಕದ ಪರ ಎಸ್‌.ಅರವಿಂದ್‌ 4 ವಿಕೆಟ್‌
ಪಡೆದು ಮಿಂಚಿದರು.

ಜೋಶಿ ಸ್ಫೋಟ, ಗೌತಮ್‌ ತಾಳ್ಮೆಯ ಆಟ: ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಕರ್ನಾಟಕ ಆರಂಭದಲ್ಲಿಯೇ ಮಾಯಾಂಕ್‌ ಅಗರ್ವಾಲ್‌, ಕರುಣ್‌ ನಾಯರ್‌, ಕೆ.ಗೌತಮ್‌ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ನಂತರ ಜತೆಯಾದ ಆರ್‌.ಸಮಥ್‌
ì(31 ರನ್‌) ಮತ್ತು ಸಿ.ಎಮ್‌.ಗೌತಮ್‌ (36 ರನ್‌) ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ ಕಳಚಿಕೊಂಡಾಗ ಕ್ರೀಸ್‌ಗೆ ಬಂದ ಅನಿರುದ್ಧ್ ಜೋಶಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದರು. 19 ಎಸೆತದಲ್ಲಿ 6 ಬೌಂಡರಿ, 1 ಸಿಕ್ಸರ್‌ ಸೇರಿದಂತೆ ಅಜೇಯ 40 ರನ್‌
ಬಾರಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು. ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ 20 ಓವರ್‌ಗೆ 158/7 (ಅನಿರುದ್ಧ್ ಜೋಶಿ 40, ಸಿ.ಎಂ.ಗೌತಮ್‌ 36, ಬೆಲೆ¤àಜ್‌ ಸಿಂಗ್‌ 21ಕ್ಕೆ 3), ಪಂಜಾಬ್‌ 20 ಓವರ್‌ಗೆ 158/9 (ಮನ್‌ದೀಪ್‌ ಸಿಂಗ್‌ 45, ಹರ್ಭಜನ್‌
ಸಿಂಗ್‌ 33, ಎಸ್‌.ಅರವಿಂದ್‌ 32ಕ್ಕೆ 4) 

ಸೂಪರ್‌ ಓವರ್‌ನಲ್ಲಿ ಎಡವಿದ ರಾಜ್ಯ
ಉಭಯ ತಂಡಗಳು ತಲಾ 158 ರನ್‌ ಬಾರಿಸಿ ಟೈ ಮಾಡಿಕೊಂಡಿರುವುದರಿಂದ ಪಂದ್ಯದ ಫ‌ಲಿತಾಂಶಕ್ಕಾಗಿ ಸೂಪರ್‌ ಓವರ್‌ ಮೊರೆ
ಹೋಗಲಾಯಿತು. ಈ ಸಂದರ್ಭದಲ್ಲಿ ಪಂಜಾಬ್‌ ಪರ ಬ್ಯಾಟಿಂಗ್‌ಗೆ ಬಂದ ಯುವರಾಜ್‌ ಸಿಂಗ್‌ (5 ರನ್‌), ಮನ್‌ದೀಪ್‌ಸಿಂಗ್‌ (10 ರನ್‌) ಕೆ.ಗೌತಮ್‌ ಓವರ್‌ನಲ್ಲಿ 15 ರನ್‌ ಬಾರಿಸಿದರು. ನಂತರ ಕರ್ನಾಟಕದ ಪರ ಕ್ರೀಸ್‌ಗೆ ಬಂದ ಕರುಣ್‌ ನಾಯರ್‌ (8 ರನ್‌),
ಅನಿರುದ್ಧ್ ಜೋಶಿ (2 ರನ್‌), 1 ಇತರೆ ರನ್‌ ಸೇರಿದಂತೆ ಒಟ್ಟು 11 ರನ್‌ ಬಂತು. ಪಂಜಾಬ್‌ ಪರ ಸಿದ್ಧಾರ್ಥ ಕೌರ್‌ ಸೂಪರ್‌ ಓವರ್‌ನಲ್ಲಿ ಬಿಗುವಿನ ದಾಳಿ ನಡೆಸಿ ಪಂಜಾಬ್‌ ಗೆಲುವಿಗೆ ಕಾರಣರಾದರು.

ಟಾಪ್ ನ್ಯೂಸ್

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.