ಅಂತಿಮ ಟೆಸ್ಟ್‌ಗೆ ರಹಾನೆ, ಯಾದವ್‌?


Team Udayavani, Jan 23, 2018, 7:05 AM IST

Ajinkya-Rahane,-Umesh-Yadav.jpg

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 3 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಈಗಾಗಲೇ 2 ಪಂದ್ಯ ಸೋತು ಸರಣಿ ಕಳೆದುಕೊಂಡಿರುವ ಭಾರತ ತಂಡ ಅಂತಿಮ ಪಂದ್ಯ ಗೆದ್ದು ಮಾನ ಉಳಿಸಿಕೊಳ್ಳುವ ತುಡಿತದಲ್ಲಿದೆ. ಹೀಗಾಗಿ ತಂಡದಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಅಜಿಂಕ್ಯ ರಹಾನೆ, ಆಲ್‌ರೌಂಡರ್‌ ರವೀಂದ್ರ ಜಡೇಜ ಹಾಗೂ ವೇಗಿ ಉಮೇಶ್‌ ಯಾದವ್‌ ಕೊನೆಯ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂವರೂ ಮೊದಲೆರಡು ಟೆಸ್ಟ್‌ಗಳಲ್ಲಿ ಆಡಿರಲಿಲ್ಲ. ಅಂತಿಮ ಟೆಸ್ಟ್‌ ಭಾರತದ ಪಾಲಿಗೆ ಪ್ರತಿಷ್ಠೆಯ ಕಣವಾಗಿದ್ದು, ನಾಯಕ ಕೊಹ್ಲಿ ಹಾಗೂ ಕೋಚ್‌ ರವಿಶಾಸಿŒ ಈ ಮೂವರನ್ನು ಆಡುವ ಬಳಗದಲ್ಲಿ ಸೇರಿಸಿಕೊಳ್ಳಲು ಚಿಂತಿಸಿದ್ದಾರೆ ಎನ್ನಲಾಗಿದೆ.

ಸೋಮವಾರ ಜಡೇಜ ಹಾಗೂ ಯಾದವ್‌ ನೆಟ್‌ನಲ್ಲಿ ಸುದೀರ್ಘ‌ ಅಭ್ಯಾಸ ನಡೆಸಿರುವುದು ಇದಕ್ಕೆ ಪುಷ್ಟಿ ಕೊಡುತ್ತದೆ.
ಈ ನಡುವೆ ಕೀಪರ್‌ ದಿನೇಶ್‌ ಕಾರ್ತಿಕ್‌ ಹೆಸರು ಕೂಡ ಹರಿದಾಡುತ್ತಿದೆ. ಹೀಗಾಗಿ ಬುಧವಾರದಿಂದ ಆರಂಭವಾಗಲಿರುವ ಟೆಸ್ಟ್‌ ಪಂದ್ಯದಲ್ಲಿ ಭಾರತ 4 ಬದಲಾವಣೆ ಮಾಡಿಕೊಂಡರೂ ಅಚ್ಚರಿನ ಇಲ್ಲ.

ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಭಾರತ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಎರಡು ಟೆಸ್ಟ್‌ ಪಂದ್ಯದಲ್ಲಿ ಹೀನಾಯ ಸೋಲುಂಡಿರುವ ಕೊಹ್ಲಿ ಪಡೆ ವಾಂಡರರ್ನಲ್ಲಿ ಗೆದ್ದು ಮಾನ ಉಳಿಸಿಕೊಳ್ಳಬೇಕಿದೆ. ಸರಣಿ ಸೋಲಿಗೆ ಎಲ್ಲಡೆಯಿಂದ ಟೀಕೆಗಳು ಕೇಳಿ ಬರುತ್ತಿವೆ. ಆದರೆ ಕೊಹ್ಲಿ ಮಾತ್ರ ಇದಕ್ಕೆ ತಲೆ ಕೆಡಿಸಿಕೊಂಡಿಲ್ಲ. ಸೋಮವಾರ ನೆಟ್ಸ್‌ನಲ್ಲಿ ನಿರಾಳವಾಗಿ ತಮ್ಮ ತಂಡದೊಂದಿಗೆ ಅಭ್ಯಾಸ ನಡೆಸಿದರು. ಈ ವೇಳೆ ಆಟಗಾರರು ಪರಸ್ಪರ ತಮಾಷೆ ಮಾಡಿಕೊಂಡು ಅಭ್ಯಾಸವನ್ನು ಆನಂದಿಸಿದರು. ಬೌಲಿಂಗ್‌ ಕೋಚ್‌ ಸಂಜಯ್‌ ಬಂಗಾರ್‌ ನೆಟ್‌ ಬೌಲರ್‌ ಆಗಿ ಕಾಣಿಸಿಕೊಂಡರು. ರೋಹಿತ್‌ ಶರ್ಮ ನಗುತ್ತಲೇ ಬಂಗಾರ್‌ ಬೌಲಿಂಗನ್ನು ಸ್ವಾಗತಿಸಿದರು. ಕೊಹ್ಲಿ, ಪಾರ್ಥಿವ್‌, ಧವನ್‌ ಹಾಗೂ ಜಡೇಜ ಈ ವೇಳೆ ಅಭ್ಯಾಸ ನಡೆಸುತ್ತಿದ್ದರು.

ಪಿಚ್‌ ಬಗ್ಗೆ ಮತ್ತೆ ಅಸಮಾಧಾನ
ಭಾರತ ಕ್ರಿಕೆಟಿಗರು ಟೆಸ್ಟ್‌ ಆರಂಭದಲ್ಲೇ ಆಫ್ರಿಕಾ ಪಿಚ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ 3ನೇ ಟೆಸ್ಟ್‌ ಆರಂಭಕ್ಕೂ ಮೊದಲು ಭಾರತೀಯರು ಮತ್ತೂಮ್ಮೆ ಪಿಚ್‌ ಬಗ್ಗೆ ಅತೃಪ್ತರಾಗಿದ್ದಾರೆ. ಸೋಮವಾರ ಭಾರತ ಬಹುತೇಕ ಆಟಗಾರರು ಅಭ್ಯಾಸದ ಅವಧಿಯಲ್ಲಿ ಫ‌ುಟ್‌ಬಾಲ್‌ ಆಡಿದರು. ಆದರೆ ಶಮಿ, ಭುವನೇಶ್ವರ್‌, ಇಶಾಂತ್‌ ಹಾಗೂ ಉಮೇಶ್‌ ಯಾದವ್‌ ನೆಟ್‌ನಲ್ಲಿ ಬೌಲಿಂಗ್‌ ನಡೆಸಿದರು.

ಈ ವೇಳೆ ಅಸಮರ್ಪಕ ಪಿಚ್‌ ಬಗ್ಗೆ ಬೌಲಿಂಗ್‌ ಕೋಚ್‌ ಸಂಜಯ್‌ ಬಂಗಾರ್‌ ಕೋಚ್‌ ರವಿ ಶಾಸಿŒ ಗಮನಕ್ಕೆ ತಂದಿದ್ದಾರೆ. ಕೂಡಲೇ ಶಾಸಿŒ ಮುಖ್ಯ ಕ್ಯುರೇಟರ್‌ ಅವರನ್ನು ಕರೆದು ಮತ್ತೂಮ್ಮೆ ರೋಲಿಂಗ್‌ ಮಾಡಲು ಹೇಳಿದ್ದಾರೆ. ಹೀಗೆ ರೋಲಿಂಗ್‌ ಮಾಡುತ್ತಲೇ ಭಾರತದ ಬೌಲರ್‌ಗಳ ನೆಟ್‌ ಅಭ್ಯಾಸ ನಡೆಯಿತು. ಇದು ಅಸಮಾಧಾನಕ್ಕೆ ಕಾರಣವಾಯಿತು.

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.