ಕನ್ನಡ ಬೆಳವಣಿಗೆಗೆ ಅಡ್ಡಿಪಡಿಸಿದರೆ ಸಹಿಸಲಾರೆ
Team Udayavani, Jan 23, 2018, 6:15 AM IST
ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ಯಾರೇ ಅಡ್ಡಿಯಾದರೂ ಸಹಿಸುವುದಿಲ್ಲ. ಹೀಗೆ ಅಡ್ಡಿಪಡಿಸುವವರನ್ನು ಹೆಡೆಮುರಿ ಕಟ್ಟುವ ಶಕ್ತಿ ನಮಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಸೋಮವಾರ ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷ ಪೂರೈಸಿದ ಸವಿನೆನಪಿಗೆ ನಿರ್ಮಿಸಲಾದ ಶತಮಾನೋತ್ಸವ ಭವನ ಉದ್ಘಾಟಿಸಿ ಅವರು ಮಾತನಾಡಿದರು.
“”ಜನರ ಹಿತ, ನಾಡಿನ ನೆಲ-ಜಲದ ರಕ್ಷಣೆ ನಮಗೆ ಮುಖ್ಯ. ಇದಕ್ಕೆ ಕೊಕ್ಕೆ ಹಾಕುವವರನ್ನು ಸಹಿಸುವುದಿಲ್ಲ. ಜನ ಹಿತ ಇದ್ದರೆ, ಅಧಿಕಾರಿಗಳ ಮಾತು ಕೇಳುವ ಪ್ರಮೇಯವೇ ಬರುವುದಿಲ್ಲ. ಅಧಿಕಾರಿಗಳು ಉಂಟುಮಾಡುವ ತೊಡಕುಗಳನ್ನು ನಿವಾರಿಸುವ ಶಕ್ತಿ ಜನಪ್ರತಿನಿಧಿಗಳಿಗೆ ಇದೆ. ಹಾಗಂತ, ಎಲ್ಲ ಅಧಿಕಾರಿಗಳೂ ಕೊಕ್ಕೆ ಹಾಕುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
19 ತಿಂಗಳಲ್ಲಿ 10 ಯೋಜನೆ: ಕಳೆದ 19 ತಿಂಗಳಲ್ಲಿ “ಕಾಯಕ ಪಥ’ದಡಿ 10 ಹೊಸ ಕಾರ್ಯಕ್ರಮಗಳನ್ನು
ಪರಿಷತ್ತು ಜಾರಿಗೊಳಿಸಿದೆ. ಸರ್ಕಾರದ ನೆರವಿನಿಂದ ಶತಮಾನೋತ್ಸವ ಭವನ ಕೂಡ ನಿರ್ಮಾಣ ಗೊಂಡಿದೆ.
ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲೂ ಪರಿಷತ್ತಿನ ಭವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ ಹಣಕಾಸಿನ ಭರವಸೆ ನೀಡಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಮಾತನಾಡಿ, ಈಗ ನಿರ್ಮಿಸಲಾಗಿರುವ ಶತಮಾನೋತ್ಸವ ಭವನವು ಪರಿಷತ್ತಿನ ಹಿಂದಿನ ಅಧ್ಯಕ್ಷ ದಿವಂಗತ ಪುಂಡಲೀಕ ಹಾಲಂಬಿ ಅವರ ಕನಸಿನ ಕೂಸು. ಅಂದು ಅವರು ಬಿತ್ತಿದ ಬೀಜ ಈಗ ಭವನದ ರೂಪದಲ್ಲಿ ಬೆಳೆದುನಿಂತಿದೆ. ಇದರ ಶ್ರೇಯಸ್ಸು ಹಾಲಂಬಿ ಅವರಿಗೆ ಸಲ್ಲುತ್ತದೆ ಎಂದು ಸ್ಮರಿಸಿದರು.
ಕಸಾಪ ಸಿಬ್ಬಂದಿ ಇನ್ನು ಸರ್ಕಾರಿ ನೌಕರರು: ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಯೂ ಇನ್ಮುಂದೆ ಸರ್ಕಾರದ
ಸಿಬ್ಬಂದಿ ಮತ್ತು ನೇಮಕಾತಿ ನಿಯಮಾವಳಿಗೆ ಒಳಪಡಲಿದ್ದಾರೆ. ಇದರಿಂದ ಸರ್ಕಾರಿ ನೌಕರರಿಗೆ ಸಿಗುವ ಸವಲತ್ತುಗಳು ಇವರಿಗೂ ದೊರೆಯಲಿವೆ ಎಂದು ಸ್ವತಃ ಸಿದ್ದರಾಮಯ್ಯ ಘೋಷಿಸಿದರು.
ಪರಿಷತ್ತಿನ ಸಿಬ್ಬಂದಿಯನ್ನು ಸಿಆಂಡ್ ಆರ್ ನಿಯಮಗಳ ವ್ಯಾಪ್ತಿಗೆ ಒಳಪಡಿಸಲಾಗುವುದು ಎಂದು ಹೇಳಿದರು. ಪ್ರಸ್ತುತ ಧಾರವಾಡದ ವಿದ್ಯಾವರ್ಧಕ ಸಂಘ, ರಾಮನಗರದ ಜಾನಪದ ಪರಿಷತ್ತಿನ ಸಿಬ್ಬಂದಿಗೆ ಮಾತ್ರ ಈ ನಿಯಮಗಳು ಅನ್ವಯಿಸುತ್ತಿವೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗೂ ಇದನ್ನು ಅನ್ವಯಿಸಲಾಗುವುದು ಎಂದರು. ಇದರಿಂದ ಪರಿಷತ್ತಿನಲ್ಲಿ 50 ಜನ ಸಿಬ್ಬಂದಿ ಇದ್ದು, ಅವರೆಲ್ಲರಿಗೂ ಈ ನಿಯಮ ಅನ್ವಯ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ