ಅಭಿಮಾನಿಗಳ ಸಮ್ಮುಖದಲ್ಲಿ ನಿಖಿಲ್ ಬರ್ತ್ಡೇ
Team Udayavani, Jan 23, 2018, 10:53 AM IST
ಯುವ ನಟ ನಿಖಿಲ್ಕುಮಾರ್ ಸೋಮವಾರ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಬೆಳಗ್ಗೆಯಿಂದಲೇ ರಾಜ್ಯದ ಹಲವು ಕಡೆಯಿಂದ ಆಗಮಿಸಿದ ಅಭಿಮಾನಿಗಳು ಅವರ ಮನೆಯ ಮುಂದೆ ನಿಂತು ಜೈಕಾರ ಕೂಗುವ ಮೂಲಕ ವಿಶೇಷವಾದ ಕೇಕ್ ಕತ್ತರಿಸಿ ಹುಟ್ಟಹಬ್ಬವನ್ನು ಆಚರಿಸಿದರು.
ಸಾಲಗಟ್ಟಿ ನಿಂತಿದ್ದ ಅಭಿಮಾನಿಗಳನ್ನು ಪ್ರೀತಿಯಿಂದಲೇ ಬಂದು ಮಾತನಾಡಿಸಿದ ನಿಖಿಲ್ ಅವರ ಕೈ ಕುಲುಕಿ, ಜೊತೆಗೊಂದು ಫೋಟೋ ತೆಗೆಸಿಕೊಂಡು ಅಭಿಮಾನಿಗಳನ್ನು ಖುಷಿಪಡಿಸಿದರು. ಈ ವೇಳೆ “ಕುರುಕ್ಷೇತ್ರ’ ನಿರ್ಮಾಪಕ ಮುನಿರತ್ನ ಅವರು ನಿಖಿಲ್ಕುಮಾರ್ ಮನೆಗೆ ತೆರಳಿ, ಹುಟ್ಟುಹಬ್ಬದ ಶುಭಕೋರಿದ್ದಾರೆ.
ಇದೇ ಸಂದರ್ಭದಲ್ಲಿ ನಿಖಿಲ್ಕುಮಾರ್ ಅವರ ಅಭಿಮಾನಿಗಳು ತನ್ನ ಪ್ರೀತಿಯ ನಾಯಕನ ಹುಟ್ಟುಹಬ್ಬದ ಅಂಗವಾಗಿ ಅನ್ನದಾನ, ರಕ್ತದಾನ ಕೂಡ ಹಮ್ಮಿಕೊಂಡಿದ್ದರು. ನಿಖಿಲ್ಕುಮಾರ್ “ಜಾಗ್ವಾರ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು, ಈಗ “ಕುರುಕ್ಷೇತ್ರ’ ಚಿತ್ರದಲ್ಲಿ ಅಭಿಮನ್ಯು ಪಾತ್ರವನ್ನು ನಿರ್ವಹಿಸಿದ್ದಾರೆ. ಈಗಾಗಲೇ ನಿಖಿಲ್ಕುಮಾರ್ ಅವರ ವಿಶೇಷ ಪೋಸ್ಟರ್ ಮತ್ತು ಟೀಸರ್ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ನಿರ್ದೇಶಕ ಎ.ಹರ್ಷ ಅವರ ಅವರ ನಿರ್ದೇಶನದ ‘ಸೀತಾರಾಮ ಕಲ್ಯಾಣ’ ಚಿತ್ರಕ್ಕೂ ನಿಖಿಲ್ ಕುಮಾರ್ ಹೀರೋ ಆಗಿದ್ದಾರೆ. ಈ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿದ್ದು, ಉಳಿದಂತೆ ತಮಿಳು ನಟ ಶರತ್ಕುಮಾರ್, ಆದಿತ್ಯ ಮೆನನ್, ಸುಧಾರಾಣಿ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಹಲವರು ಅಭಿನಯಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ