ತೆಂಗು ಕೀಟ ಬಾಧೆ, ಮೀನು ಸಾಕಣೆ ಪ್ರಾತ್ಯಕ್ಷಿಕೆ, ಕಾರ್ಯಾಗಾರ 


Team Udayavani, Jan 24, 2018, 12:12 PM IST

24-Jan-12.jpg

ಮೂಡಬಿದಿರೆ: ಸಮಗ್ರ ಕೃಷಿಯಿಂದ ಮಾತ್ರ ನ್ಯಾಯಬದ್ಧ ಲಾಭ ಸಿಗಲು ಸಾಧ್ಯ. ರೈತರಿಗೆ ವಿಜ್ಞಾನದ ಅಂಶಗಳನ್ನು ಮಾತ್ರ ತಿಳಿಸಿದರೆ ಸಾಲದು. ಜತೆಗೆ ಅರ್ಥಶಾಸ್ತ್ರದ ಲೆಕ್ಕಾಚಾರಗಳನ್ನೂ ಕಲಿಸಬೇಕಾಗಿದೆ ಎಂದು ಜಿಲ್ಲಾ ಕೃಷಿ
ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಶಿವಕುಮಾರ ಮಗದ ಹೇಳಿದರು.

ಮೂಡಬಿದಿರೆಯ ಎಂಸಿಎಸ್‌ ಬ್ಯಾಂಕ್‌ ಕಲ್ಪವೃಕ್ಷ ಸಭಾಂಗಣದಲ್ಲಿ ಕೃಷಿ ವಿಚಾರ ವಿನಿಮಯ ಕೇಂದ್ರ, ಮಂಗಳೂರಿನ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮೂಡಬಿದಿರೆ ಇನ್ನರ್‌ವೀಲ್‌ ಕ್ಲಬ್‌ ಮತ್ತು ಎಂ.ಸಿ.ಎಸ್‌. ಬ್ಯಾಂಕ್‌ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ತೆಂಗು ಕೀಟ ಬಾಧೆ ಮತ್ತು ಮೀನು ಸಾಕಣೆ ಕುರಿತಾದ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.  ರೈತರು ಹೆಚ್ಚುವರಿ ವೆಚ್ಚವಿಲ್ಲದೆ ವೈವಿಧ್ಯಮಯ ಮೀನು ಸಾಕಣೆಯನ್ನು ಕೈಗೊಂಡು ಬದುಕನ್ನು ಹಸನಾಗಿಸಿ ಕೊಳ್ಳಬಹುದು. ಮೂರು ನಾಲ್ಕು ಅಡಿ ಗಳಷ್ಟು ನೀರು ನಿಲ್ಲುವ ಹೊಲಗಳು, ಸಾಂಪ್ರದಾಯಿಕ ಕಟ್ಟಗಳು, ಕೆರೆಗಳು, ಸಿಮೆಂಟ್‌ ತೊಟ್ಟಿಗಳು, ಭತ್ತದ ಬೆಳೆಯ ನಡುವಿನ ಬಸಿಗಾಲುವೆಗಳೂ ಸೇರಿದಂತೆ ವಿವಿಧೆಡೆ ಮೀನು ಸಾಕಬಹುದು. ಈ ಬಗ್ಗೆ ಇಲಾಖೆಯಿಂದ ಆಸಕ್ತರಿಗೆ ಮಾಹಿತಿ, ಯೋಜನ ವರದಿ, ಮೀನುಮರಿಗಳನ್ನು ಒದಗಿಸಲಾಗುವುದು. ಊರಿನ ಕೋಳಿ ಯಂತೆ ಸ್ವರ್ಣಧಾರಾ ಕೋಳಿಯನ್ನು ಸಾಕಿ ಗರಿಷ್ಟ ಲಾಭ ಮಾಡಿಕೊಳ್ಳಬಹುದು ಎಂದರು.

ತೆಂಗು ಕೀಟ ಬಾಧೆ ಮತ್ತು ನಿವಾರಣೆ
ಕಾಸರಗೋಡು ಸಿಪಿಸಿಆರ್‌ಐ ಮುಖ್ಯ ವಿಜ್ಞಾನಿ ಡಾ| ವಿನಾಯಕ ಹೆಗ್ಡೆ ಅವರು ತೆಂಗು ಕೀಟ ಬಾಧೆ ಮತ್ತು ನಿವಾರಣೆಯ ಕುರಿತು ಮಾಹಿತಿ ನೀಡಿದರು. ಗರಿ ತಿನ್ನುವ ಕೀಟ, ಬಿಳಿ ಹುಳ, ಬಿಳಿ ನೊಣ, ನುಸಿ ಪೀಡೆ ಮೊದಲಾದ ಕೀಟ ಬಾಧೆಗಳ ಬಗ್ಗೆ ವಿವರಿಸಿ ಕೀಟನಾಶಕಗಳು ಮಾತ್ರವಲ್ಲ ಜೈವಿಕ ವಿಧಾನಗಳ ಮೂಲಕ ಅವುಗಳನ್ನು ನಿಯಂತ್ರಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ವಿಜ್ಞಾನಿಗಳೊಂದಿಗೆ ರೈತರು ಸಂವಾದ ನಡೆಸಿದರು.

ಉದ್ಘಾಟನೆ
ಮೂಡಬಿದಿರೆ ಇನ್ನರ್‌ವೀಲ್‌ ಕ್ಲಬ್‌ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ರಾಜವರ್ಮ ಬೈಲಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೇಮನಾಥ ಆಳ್ವ, ಸಿಇಒ
ಉದಯ ಹೆಗ್ಡೆ ಆಡಳಿತ ಮಂಡಳಿ ಸದಸ್ಯ ಸಂಪತ್‌ ಸಾಮ್ರಾಜ್ಯ, ಸಹಾಯಕ ಕೃಷಿ ಅಧಿಕಾರಿ ಪ್ರದೀಪ್‌ ಡಿ’ಸೋಜಾ
ಭಾಗವಹಿಸಿದ್ದರು. ಎಂಸಿಎಸ್‌ ಬ್ಯಾಂಕ್‌ ಸಿಇಒ ಚಂದ್ರಶೇಖರ ಎಂ., ಕೃ.ವಿ.ವಿ. ಕೇಂದ್ರದ ಉಪಾಧ್ಯಕ್ಷ ಸುಭಾಶ್ಚಂದ್ರ
ಚೌಟ ಉಪಸ್ಥಿತರಿದ್ದರು. ವಲಯ ರೈತ ಸಂಘದ ಅಧ್ಯಕ್ಷ ಧನಕೀರ್ತಿ ಬಲಿಪ ಸ್ವಾಗತಿಸಿದರು. ಕೃ. ವಿ. ವಿ. ಕೇಂದ್ರದ ಜತೆ ಕಾರ್ಯದರ್ಶಿ ಸುಜಾತಾ ರಮೇಶ್‌ ನಿರೂಪಿಸಿದರು. ಕಾರ್ಯದರ್ಶಿ ಜಿನೇಂದ್ರ ಜೈನ್‌ ವಂದಿಸಿದರು.

ಮರಳಿ ಸಾವಯವದತ್ತ
ನೀರು ನಿಲ್ಲುವ ಗದ್ದೆಗಳು ನಾಶವಾಗಿ ಜಲಮೂಲ ಕ್ಷೀಣಿಸುತ್ತಿರುವುದು, ರಾಸಾಯನಿಕಗಳ ಎಗ್ಗಿಲ್ಲದ ಬಳಕೆಯಿಂದ ಪರಿಸರ ನಾಶವಾಗುತ್ತಿದೆ. ಸ್ವಯಂಕೃತ ಅಪರಾಧಗಳಿಂದಾಗಿ ನಮ್ಮ ಭವಿಷ್ಯವನ್ನು ನಾವೇ ಹಾಳುಗೆಡಹುತ್ತಿದ್ದೇವೆ. ನಾವು ಮತ್ತೆ ಸಾವಯವದತ್ತ ಹೊರಳಿಕೊಳ್ಳಬೇಕಾಗಿದೆ.
ರಾಜವರ್ಮ ಬೈಲಂಗಡಿ,
  ಅಧ್ಯಕ್ಷ, ಕೃಷಿ ವಿಚಾರ ವಿನಿಮಯಕೇಂದ್ರ 

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.