ಮಹಾಮಸ್ತಕಾಭಿಷೇಕಕ್ಕೆ ದಿನಗಣನೆ ಆರಂಭ


Team Udayavani, Jan 24, 2018, 12:14 PM IST

24-15.jpg

ಬೆಂಗಳೂರು: ಇತಿಹಾಸ ಪ್ರಸಿದ್ಧ ಭಗವಾನ್‌ ಬಾಹುಬಲಿ ಏಕಶಿಲಾ ಮೂರ್ತಿಯ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಪೂರ್ವ ಸಿದ್ಧತಾ ಕಾರ್ಯ ಅಂತಿಮಗೊಳ್ಳುತ್ತಿದ್ದು, ಐತಿಹಾಸಿಕ ಆಚರಣೆಗೆ ದಿನಗಣನೆ ಶುರುವಾಗಿದೆ.

ವಿಂಧ್ಯಗಿರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿನ ಮಂಟಪ, ಗುಡಿ ಗೋಪುರಗಳು ಸಿಂಗಾರಗೊಂಡಿವೆ. ಚಿಕ್ಕರಾಜ ಒಡೆಯರ್‌ ಕಲ್ಯಾಣಿ ಸ್ವತ್ಛಗೊಂಡು ಕಂಗೊಳಿಸುತ್ತಿದೆ. ತ್ಯಾಗಿ ನಗರ, ಯಾತ್ರಿನಗರ, ಕಳಸ ನಗರ, ಪಂಚ ಕಲ್ಯಾಣ ನಗರ, ಸ್ವಯಂಸೇವಕರ ನಗರ ಸೇರಿ 12 ತಾತ್ಕಾಲಿಕ ಉಪನಗರಗಳ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಕೆಲವೆಡೆ ವಾಸ್ತವ್ಯ ಆರಂಭವಾಗಿದೆ. ವಿಂಧ್ಯಗಿರಿಯ ಆವರಣ ಹಾಗೂ ಮೂರ್ತಿಯಿರುವ ಪ್ರಾಂಗಣದಲ್ಲಿ ಮಠದಿಂದ ಸಿದ್ಧತಾ ಕಾರ್ಯ ಭರದಿಂದ ಸಾಗಿದ್ದು, ಮೂಲ ಸೌಕರ್ಯ ಕಲ್ಪಿಸುವ ಕಾರ್ಯದಲ್ಲಿ ಜಿಲ್ಲಾಡಳಿತ ತೊಡಗಿಸಿಕೊಂಡಿದೆ. ಈಗಾಗಲೇ ಭಕ್ತರು, ಪ್ರವಾಸಿಗರ ಸಂಖ್ಯೆ ಏರಿಕೆಯಾಗಲಾರಂಭಿಸಿದೆ. ಒಟ್ಟಾರೆ  ಕ್ಷೇತ್ರದಲ್ಲಿ ಸಂಭ್ರಮ, ಸಡಗರದೊಂದಿಗೆ ಕಳೆಗಟ್ಟಿದೆ.

ಅತ್ಯಾಧುನಿಕ ಅಟ್ಟಣಿಗೆ: ಇದೇ ಮೊದಲ ಬಾರಿಗೆ ಜರ್ಮನ್‌ ತಂತ್ರಜ್ಞಾನದಡಿ ಲೆಹರ್‌ ಸಂಸ್ಥೆಯು 58.8 ಅಡಿ ಎತ್ತರದ ಬಾಹುಬಲಿ ಮೂರ್ತಿಯ ಮಸ್ತಕಾಭಿಷೇಕಕ್ಕೆ 70 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸುತ್ತಿದೆ. ಬಾಹುಬಲಿ ಮೂರ್ತಿಯ ಮಸ್ತಕದ ಮೇಲ್ಭಾಗ,
ಎರಡೂ ಭುಜಗಳ ಬಳಿ ಕ್ಯಾಂಟಿ ಲಿವರ್‌ ನಿರ್ಮಿಸಲಾಗುತ್ತಿದ್ದು, ಸುರಕ್ಷತಾ ಬಲೆ ಅಳವಡಿಸಲಾಗುವುದು ಎಂದು ಮಹಾಮಸ್ತಕಾಭಿಷೇಕ ವಿಶೇಷಾಧಿಕಾರಿ ಬಿ.ಎನ್‌. ವರಪ್ರಸಾದ ರೆಡ್ಡಿ ತಿಳಿಸಿದರು. ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಮಿತಿ, ಐಐಎಸ್ಸಿಯ ತಜ್ಞರು ಈ ತಂತ್ರಜ್ಞಾನವನ್ನು ದೃಢೀಕರಿಸಿ  ದ್ದಾರೆ. ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ರಾಕ್‌ ಮೆಕಾನಿಕ್ಸ್‌ ತಂಡ ಪರಿಶೀಲನೆ ನಡೆಸಿ ಮೂರ್ತಿಗೂ, ಅಟ್ಟಣಿಗೆಗೂ ಸಂಪರ್ಕವಿಲ್ಲ ಎಂಬುದನ್ನು ದೃಢೀಕರಿಸಿದೆ. ಅಟ್ಟಣಿಗೆ ಬಳಿ 3 ಲಿಫ್ಟ್ ಅಳವಡಿಸಲಾಗುವುದು ಎಂದು ವಿವರಿಸಿದರು.

ಲಾಂಛನದಲ್ಲಿ ಗುಳ್ಳಕಾಯಜ್ಜಿ
ಬಾಹುಬಲಿ ಮೂರ್ತಿಯಿರುವ ಪ್ರಾಂಗಣದ ಎದುರಿಗೆ ಗುಳ್ಳಕಾಯಜ್ಜಿಯ ಮೂರ್ತಿಯಿದೆ. ಬಾಹುಬಲಿಯ 58.8 ಅಡಿ ಎತ್ತರದ ಮೂರ್ತಿ ಕೆತ್ತಿಸಿದ ಚಾವುಂಡರಾಯನಿಗೆ ಅಹಂಕಾರ ಬಂದಿತ್ತು. ಕ್ರಿ.ಶ.981ರಲ್ಲಿ ನಡೆದ ಮೊದಲ ಮಹಾಮಸ್ತಕಾಭಿಷೇಕದ ವೇಳೆ ಹಾಲು, ಗಂಧ, ಅರಿಶಿನ ಎಷ್ಟು ಸುರಿದರೂ ಮೂರ್ತಿ ಪೂರ್ತಿಯಾಗಿ ತೊಯ್ಯಲಿಲ್ಲ. ಆಗ ಗಿಂಡಿಯಲ್ಲಿ ಹಾಲು ಹಿಡಿದು ಬಂದ ಅಜ್ಜಿಯೊಂದು ಚಾವುಂಡರಾಯನ ಅನುಮತಿ ಪಡೆದು ಅಭಿಷೇಕ ಮಾಡಿದಾಗ ಇಡೀ ಮೂರ್ತಿ ತೊಯ್ದು ಹಾಲು ಹೊಳೆಯಾಗಿ ಹರಿದು ಬೆಳಗೊಳವಾಯಿತು ಎಂಬ ಪ್ರತೀತಿ ಇದೆ. ಈ ಬಾರಿಯ ಮಹಾಮಸ್ತಕಾಭಿಷೇಕದ ಲಾಂಛನದಲ್ಲಿ ಗುಳ್ಳಕಾಯಜ್ಜಿಯೇ ಮಹತ್ವ ಪಡೆದುಕೊಂಡಿರುವುದು ವಿಶೇಷ.

ಕೈಪಿಡಿ ತರಲು ಚಿಂತನೆ
ಕಳೆದ ಬಾರಿಯ ಮಹಾಮಸ್ತಕಾಭಿಷೇಕದ ಬಗ್ಗೆ ಹೆಚ್ಚಿನ ಮಾಹಿತಿಯೇ ಇಲ್ಲ. ಹಾಗಾಗಿ ಈ ಬಾರಿಯ ಮಹಾಮಸ್ತಕಾಭಿಷೇಕ ಮಹೋತ್ಸವ ಕುರಿತಂತೆ ಕೈಪಿಡಿ ತರಲು ಚಿಂತಿಸಲಾಗಿದ್ದು, ದಾಖಲೀಕರಣ ನಡೆಯಲಿದೆ. ನ್ಯಾಷನಲ್‌ ಜಿಯೋಗ್ರಾಫಿಕ್‌ ವಾಹಿನಿಯು ಮಹೋತ್ಸವ ಕುರಿತಂತೆ ಡಾಕ್ಯುಮೆಂಟ್‌ ರೂಪಿಸಲು ಅನುಮತಿ ಕೋರಿದ್ದು, ಈ ಬಗ್ಗೆ ಪರಿಶೀಲನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಯಂ ಕಾರ್ಯ
ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಶ್ರವಣ ಬೆಳಗೊಳ ಗ್ರಾಪಂ ವ್ಯಾಪ್ತಿಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ನಿತ್ಯ 1.5 ದಶಲಕ್ಷ ಲೀಟರ್‌ ಕೊಳಚೆ ನೀರು ಸಂಸ್ಕರಿಸುವ ರಾಚೇನಹಳ್ಳಿ ಕೆರೆ ಬಳಿ ನಿರ್ಮಾಣವಾಗಿದೆ. ಆ ಮೂಲಕ ದೇಶದಲ್ಲೇ ಎಸ್‌ಟಿಪಿ ಸೌಲಭ್ಯ ಪಡೆದ ಪ್ರಥಮ ಗ್ರಾಪಂ ಎಂಬ ಹೆಗ್ಗಳಿಕೆಗೆ ಶ್ರವಣ ಬೆಳಗೊಳ ಪಾತ್ರವಾಗಲಿದೆ.

ಶ್ರವಣ ಬೆಳಗೊಳ ಕ್ಷೇತ್ರ ಸಂಪರ್ಕಿಸುವ ಎಲ್ಲ ಪ್ರಮುಖ ರಸ್ತೆಗಳನ್ನು 89 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.

ಜನಿವಾರ ಕೆರೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸಲಾಗಿದ್ದು, ಬೋಟಿಂಗ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 

ಮಹಾಮಸ್ತಕಾಭಿಷೇಕದ ಕಳಸ ಹರಾಜಿನಿಂದ ಸಂಗ್ರಹ  ವಾಗುವ ಹಣವನ್ನು ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಗಳಿಗೆ ಬಳಸಲಾಗುತ್ತಿದೆ. ಹಿಂದಿನ ಮಹಾಮಸ್ತಕಾಭಿಷೇಕದಲ್ಲಿ ಮೊದಲ ಕಳಶ 1.08 ಕೋಟಿ ರೂ.ಗೆ ಹರಾಜಾಗಿತ್ತು. ಆ ಹಣದಲ್ಲಿ ಮಕ್ಕಳ ಆಸ್ಪತ್ರೆ ನಿರ್ಮಿಸಲಾಗಿದೆ.
 ●ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಶ್ರವಣಬೆಳಗೊಳೆ

ರಾಜ್ಯ ಸರ್ಕಾರ 175 ಕೋಟಿ ರೂ. ಅನುದಾನ ನೀಡಿದ್ದು, ಕೇಂದ್ರದಿಂದ ಯಾವುದೇ ಅನುದಾನ ಬಂದಿಲ್ಲ. 175 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ಜಿಎಸ್‌ಟಿಯಡಿ 15ರಿಂದ 18 ಕೋಟಿ ರೂ. ಪಾವತಿಸಬೇಕಿದ್ದು, ವಿನಾಯ್ತಿ ಕೋರಲಾಗಿದೆ.
 ●ಎ. ಮಂಜು, ಮಹಾಮಸ್ತಕಾಭಿಷೇಕ ಸಮಿತಿ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ

 ●ಎಂ.ಕೀರ್ತಿಪ್ರಸಾದ್‌
ಚಿತ್ರ: ಆಸ್ಟ್ರೋ ಮೋಹನ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.