ಇನ್ನಷ್ಟು  ಪೊಲೀಸರ ವರ್ಗಾವಣೆ ಸಚಿವ ರಾಮಲಿಂಗಾ ರೆಡ್ಡಿ


Team Udayavani, Jan 24, 2018, 12:49 PM IST

24-18.jpg

ಮಂಗಳೂರು: ಚುನಾವಣೆ ಸಮೀಪಿಸುತ್ತಿರುವುದರಿಂದ ಚುನಾವಣಾ ಆಯೋಗದ ಸೂಚನೆಯ ಹಿನ್ನೆಲೆ ಯಲ್ಲಿ ಆಯಕಟ್ಟಿನ ಜಾಗದಲ್ಲಿರುವ ಇನ್ನಷ್ಟು ಪೊಲೀಸ್‌ ಅಧಿಕಾರಿಗಳ ವರ್ಗಾವಣೆಯಾಗಲಿದೆ ಎಂದು ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಉದ್ಯಮಿಯೋರ್ವರ ವಿವಾಹ ಸಮಾರಂಭದ ಹಿನ್ನೆಲೆ ಯಲ್ಲಿ ಮಂಗಳವಾರ ಕರ್ನಿರೆಗೆ ಆಗಮಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ದ.ಕ. ಜಿಲ್ಲಾ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ ಅವರ ವರ್ಗಾವಣೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು ವರ್ಗಾವಣೆ ಆಡಳಿತಾತ್ಮಕ ಪ್ರಕ್ರಿಯೆ. ಮೂರು ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಇರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಈಗಾಗಲೇ ಚುನಾವಣಾ ಆಯೋಗ ಸೂಚನೆ ನೀಡಿದೆ. ಇದರಂತೆ ಮೂರು ವರ್ಷ ಗಳಿಂದ ಬೆಳಗಾವಿಯಲ್ಲಿ ಎಸ್‌ಪಿಯಾಗಿದ್ದ ರವಿಕಾಂತೇ ಗೌಡ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಸುಧೀರ್‌ ಕುಮಾರ್‌ ರೆಡ್ಡಿ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಿ ದ.ಕ. ಜಿಲ್ಲೆಗಿಂತ ದೊಡ್ಡದಾಗಿರುವ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ ಎಂದರು.

ದ.ಕ. ಜಿಲ್ಲೆಯಲ್ಲಿ ಕಳೆದ 28 ದಿನಗಳಲ್ಲಿ 5 ಕೊಲೆಗಳಾಗಿದ್ದು ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ಲೋಪವಾಗಿದೆಯೇ ಎಂಬುದಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ವ್ಯವಸ್ಥೆ ಸರಿಯಾಗಿಯೇ ಕೆಲಸ ಮಾಡುತ್ತಿದೆ. ಇಲ್ಲಿ ರಾಜಕೀಯ ಪಕ್ಷಗಳು, ಸಂಘಟನೆಗಳು ಸುಮ್ಮನಿದ್ದರೆ ಯಾವುದೇ ಸಮಸ್ಯೆ ತಲೆದೋರದು. ನಾನು ಆ ರಾಜಕೀಯ ಪಕ್ಷ , ಸಂಘಟನೆ, ಈ ರಾಜಕೀಯ ಪಕ್ಷ, ಸಂಘಟನೆಗಳು ಎಂದು ಹೇಳುತ್ತಿಲ್ಲ. ಎಲ್ಲರೂ ಸುಮ್ಮನಿದ್ದರೆ ಕಾನೂನು ಸುವ್ಯವಸ್ಥೆ ಸರಿಯಾಗಿ ಇರುತ್ತೆ. ಜನರಿಗೆ ಯಾವುದೇ ಗಲಾಟೆ ಬೇಕಾಗಿಲ್ಲ. ಚುನಾವಣೆವರೆಗೆ ಇದೆಲ್ಲಾ ಮುಂದುವರಿಯುತ್ತದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂಬುದಾಗಿ ಕೆಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಅವರ ಹೇಳಿಕೆಗೆ ಉತ್ತರಿಸಿದ ಸಚಿವರು ಕರ್ನಾಟಕ ದಲ್ಲಿ ಬಿಜೆಪಿ ಆಡಳಿತ ಸಂದರ್ಭಕ್ಕೆ ಹೋಲಿಸಿದರೆ ಅಪರಾಧ ಪ್ರಮಾಣ ಗಣನೀಯ ಪ್ರಮಾಣ ಇಳಿಕೆಯಾಗಿದೆ. ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇರುವ ಅಪರಾಧ ಪ್ರಮಾಣಗಳತ್ತ ಅವರು ಗಮನ ಹರಿಸಲಿ. ಆ ರಾಜ್ಯಗಳಲ್ಲ ಅಪರಾಧ ಪ್ರಮಾಣಗಳು ಯಾವ ರೀತಿ ಇದೆ ಎಂಬುದಕ್ಕೆ ಉತ್ತರ ಪ್ರದೇಶ ರಾಜ್ಯದ ನಿದರ್ಶನವೊಂದೇ ಸಾಕು ಎಂದವರು ಹೇಳಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.