ಪದ್ಮಾವತ್ ವಿರುದ್ಧ ಜನತಾ ಕರ್ಫ್ಯೂ ಹೇರುತ್ತೇವೆ: ಕರ್ಣಿ ಸೇನೆ
Team Udayavani, Jan 24, 2018, 3:15 PM IST
ಹೊಸದಿಲ್ಲಿ : ಪದ್ಮಾವತ್ ವಿರುದ್ಧದ ಹಿಂಸೆಗೆ ನಮ್ಮನ್ನು ದೂರಬೇಡಿ; ನಾವು ಪದ್ಮಾವತ್ ಪ್ರದರ್ಶಿಸುವ ಚಿತ್ರ ಮಂದಿರಗಳ ಎದುರು ಜನತಾ ಕರ್ಫ್ಯೂ ವಿಧಿಸುತ್ತೇವೆ ಎಂದು ಕರ್ಣಿ ಸೇನೆಯ ಮುಖ್ಯಸ್ಥ ಲೋಕೇಂದ್ರ ಸಿಂಗ್ ಕಲ್ವಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನಿಂದ ಎರಡು ದಿನಗಳ ಹಿಂದಷ್ಟೇ ಕ್ಲೀನ್ ಚಿಟ್ ಪಡೆದಿರುವ ಪದ್ಮಾವತ್ ಚಿತ್ರ ಇದೇ ಜನವರಿ 25ರ ಗುರುವಾರ ದೇಶಾದ್ಯಂತ ಬಿಡುಗಡೆಗೊಳ್ಳಲಿದೆ.
ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ವಿವಾದಿತ ಐತಿಹಾಸಿಕ ಕಥಾ ಚಿತ್ರ ಪದ್ಮಾವತ್ (ಈ ಹಿಂದಿನ ಹೆಸರು ಪದ್ಮಾವತಿ) ಚಿತ್ರದ ವಿರುದ್ಧದ ದೇಶಾದ್ಯಂತದ ಹಿಂಸಾತ್ಮಕ ಪ್ರತಿಭಟನೆಗೆ ನಮ್ಮ ಸಂಘಟನೆಯನ್ನು ಯಾರೂ ದೂರಬಾರದು; ರಾಣಿ ಪದ್ಮಿನಿಯ ಘನತೆ ಗೌರವಗಳನ್ನು ರಕ್ಷಿಸುವುದು ರಾಜಪೂತರ ಕರ್ತವ್ಯವಾಗಿರುವುದರಿಂದ ಇತಿಹಾಸ ತಿರುಚಲಾದ ಪದ್ಮಾವತ್
ಚಿತ್ರವನ್ನು ನಾವು ವಿರೋಧಿಸುತ್ತಿದ್ದೇವೆ ಎಂದು ಲೋಕೇಂದ್ರ ಸಿಂಗ್ ಕಲ್ವಿ ಹೇಳಿದರು.
ಪದ್ಮಾವತ್ ಚಿತ್ರ ಕಥೆಯನ್ನು 16ನೇ ಶತಮಾನದ ಸೂಫಿ ಸಂತರೊಬ್ಬರ ಮಹಾ ಕಾವ್ಯವನ್ನು ಆಧರಿಸಿ ಸಿದ್ಧಪಡಿಸಲಾಗಿದೆ ಎಂದು ಚಿತ್ರ ನಿರ್ಮಾಪಕರು ನೀಡಿರುವ ಹೇಳಿಕೆ ಕರ್ಣಿ ಸೇನೆಗೆ ಸಮಾಧಾನ ತಂದಿಲ್ಲ ಎನ್ನುವುದು ಗಮನಾರ್ಹವಾಗಿದೆ.
“ನಾವು ಹಿಂಸೆಯ ಪರವಾಗಿಲ್ಲ; ಇತಿಹಾಸ ತಿರುಚಿರುವ ಪದ್ಮಾವತ್ ಚಿತ್ರವನ್ನು ನಾವು ನಮ್ಮದೇ ಆದ ರೀತಿಯಲ್ಲಿ ವಿರೋಧಿಸುತ್ತಿದ್ದೇವೆ. ಚಿತ್ರವನ್ನು ನಿಷೇಧಿಸಬೇಕೆಂಬ ನಮ್ಮ ಬೇಡಿಕೆ ಈಡೇರುವ ವರೆಗೂ ನಮ್ಮ ಪ್ರತಿಭಟನೆ ನಿಲುವುದಿಲ್ಲ; ನಾವು ಜನತಾ ಕರ್ಫ್ಯೂ ಹೇರುತ್ತೇವೆ’ ಎಂದು ಕಲ್ವಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್