ಜಿಲ್ಲೆಗಿಲ್ಲ ಮಹದಾಯಿ ಬಂದ್‌ ಬಿಸಿ


Team Udayavani, Jan 25, 2018, 3:20 PM IST

chikk-1.jpg

ಚಿಕ್ಕಬಳ್ಳಾಪುರ: ಮಹದಾಯಿ ವಿವಾದ ಇತ್ಯರ್ಥಕ್ಕೆ ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ರಾಜ್ಯದ ಕನ್ನಡಪರ ಸಂಘಟನೆಗಳ ಒಕ್ಕೂಟ ಗುರುವಾರ ನಡೆಸುತ್ತಿರುವ ಕರ್ನಾಟಕ ಬಂದ್‌ ಬಿಸಿ ಬಯಲು ಸೀಮೆಯ
ಚಿಕ್ಕಬಳ್ಳಾಪುರ ಜಿಲ್ಲೆಗಿಲ್ಲ.

ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆಗಳ ಅನಷ್ಠಾನಕ್ಕಾಗಿ ಹಾಗೂ ರಾಜ್ಯ ಸರ್ಕಾರ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳ ಅಂತರ್ಜಲ ವೃದ್ಧಿಗಾಗಿ ಇತ್ತೀಚೆಗೆ ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಬೆಂಗಳೂರು ಸಂಸ್ಕರಿತ ಕೊಳಚೆ ನೀರಿನ ವಿರುದ್ಧ ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿದಂತೆ ಅನೇಕ ಕನ್ನಡಪರ ಹಾಗೂ ರೈತಪರ ಸಂಘಟನೆಗಳು ಕಳೆದ ಡಿಸೆಂಬರ್‌ ನಲ್ಲಿ ಚಿಕ್ಕಬಳ್ಳಾಪುರ ನಗರ ಹಾಗೂ ವಿಜಾಪುರದ ದಲಿತ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ದಲಿತಪರ ಸಂಘಟನೆಗಳು ಚಿಂತಾಮಣಿ ಬಂದ್‌ ಆಚರಿಸಿದ್ದವು. ಈ ಹಿನ್ನೆಲೆಯಲ್ಲಿ ಮಹದಾಯಿ ವಿಚಾರದಲ್ಲಿ ಜಿಲ್ಲೆಯಲ್ಲಿ ಗುರುವಾರ ಬಂದ್‌ ಆಚರಿಸಲು ನೀರಾವರಿ ಹೋರಾಟ ಸಮಿತಿ ಸೇರಿದಂತೆ ಕನ್ನಡಪರ ಹಾಗೂ ರೈತಪರ ಸಂಘಟನೆಗಳು ನಿರಾಸಕ್ತಿ ತೋರಿರುವುದರಿಂದ ಜಿಲ್ಲೆಯಲ್ಲಿ ಮಹದಾಯಿ ಬಂದ್‌ ನಡೆಯುತ್ತಿಲ್ಲ.

ಕರವೇಯಿಂದ ರೈಲು ತಡೆ: ಕರ್ನಾಟಕಪರ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ರಾಜ್ಯ ಬಂದ್‌ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ಗುರುವಾರ ಬೆಳಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಹದಾಯಿ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿ ರೈಲು ತಡೆ ಚಳುವಳಿ ಹಮ್ಮಿಕೊಳ್ಳಲಾಗಿದೆಯೆಂದು ಕರವೇ ತಾಲೂಕು ಅಧ್ಯಕ್ಷ ವಿಜಯಕುಮಾರ್‌ ತಿಳಿಸಿದ್ದಾರೆ.

ಹೋರಾಟಕ್ಕೆ ಬೆಂಬಲ ಇದೆ, ಬಂದ್‌ ಇಲ್ಲ: ಮಹದಾಯಿ ಹೋರಾಟದ ಬಂದ್‌ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಘಟಕ ಮತ್ತು ಜಿಲ್ಲಾ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಬಯಲುಸೀಮೆ ಭಾಗದಲ್ಲಿ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಹಲವಾರು ಬಾರಿ ಬಂದ್‌ ನಡೆಸಿರುವುದರಿಂದ ರೈತರು, ಕಾರ್ಮಿಕರು, ಶಾಲಾ-ಕಾಲೇಜು ಮಕ್ಕಳಿಗೆ ಮತ್ತು ಜನಸಾಮಾನ್ಯ ವರ್ಗಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಬಂದ್‌ ನಡೆಸುತ್ತಿಲ್ಲವೆಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ, ಜಿಲ್ಲಾ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ ತಿಳಿಸಿದ್ದಾರೆ.

ಮಹಾರಾಷ್ಟ್ರ, ಗೋವಾ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಿ ಕರ್ನಾಟಕ ರಾಜ್ಯದೊಂದಿಗೆ ಮಾತುಕತೆ ನಡೆಸಿ ಸಮನ್ವಯತೆ ಮತ್ತು ಸಾಮರಸ್ಯದಿಂದ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಅದೇ ರೀತಿ ಯಾಗಿ ರಾಜ್ಯ ಸರ್ಕಾರವು ತನ್ನ ಜವಾಬ್ದಾರಿಯನ್ನು ಪ್ರದರ್ಶಿಸಿ ಮಹಾರಾಷ್ಟ್ರ ಮತ್ತು ಗೋವಾದಲ್ಲಿನ ತಮ್ಮದೇ ವಿರೋಧ ಪಕ್ಷಗಳನ್ನು ಮನವೊಲಿಸಲು ಮುಂದಾಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಜಿಲ್ಲಾದ್ಯಂತ ಬಿಗಿ ಭದ್ರತೆ ಕರ್ನಾಟಕ ಬಂದ್‌ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಂದ್‌ ಆಚರಿಸುವ ಬಗ್ಗೆ ಯಾವ
ಸಂಘಟನೆಯೂ ಮುಂದೆ ಬಂದಿಲ್ಲ. ಆದರೆ, ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಜಿಲ್ಲಾದ್ಯಂತ ಬಿಗಿ ಪೊಲೀಸ್‌ ಭದ್ರತೆ ನಿಯೋಜಿಸಲಾಗುತ್ತಿದೆ. ಹೆಚ್ಚುವರಿಯಾಗಿ ಜಿಲ್ಲೆಗೆ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನು ಕರೆಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತೀಕರೆಡ್ಡಿ ತಿಳಿಸಿದ್ದಾರೆ.

ಶಾಲಾ, ಕಾಲೇಜ್ಗಿಲ್ಲ ರಜೆ
ಮಹದಾಯಿ ವಿಚಾರದಲ್ಲಿ ಕರ್ನಾಟಕ ಬಂದ್‌ ಆಚರಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಆದರೆ, ಜಿಲ್ಲೆಯಲ್ಲಿ ಬಂದ್‌ ಆಚರಿಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಗುರುವಾರ ಎಂದಿನಂತೆ ಶಾಲಾ, ಕಾಲೇಜುಗಳು ಕಾರ್ಯನಿರ್ವಹಿಸಲಿವೆ
ಎಂದು ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.