ಬ್ಯಾಂಕಲ್ಲಿ ಉತ್ತಮ ಸಿಸಿ ಕ್ಯಾಮರಾವಿರಲಿ


Team Udayavani, Jan 26, 2018, 12:14 PM IST

gul-4.jpg

ಚಿತ್ತಾಪುರ: ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಎಲ್ಲ ಬ್ಯಾಂಕಿನ ಅಧಿಕಾರಿಗಳು ತಮ್ಮ ಬ್ಯಾಂಕಿನ ಆವರಣದಲ್ಲಿ ಗುಣಮಟ್ಟದ ಸಿಸಿ ಕ್ಯಾಮರಾಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಿಪಿಐ ಶಂಕರಗೌಡ ಪಾಟೀಲ ಬ್ಯಾಂಕಿನ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪೊಲೀಸ್‌ ಠಾಣೆಯಲ್ಲಿ ಆಯೋಜಿಸಿದ್ದ ಬ್ಯಾಂಕ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳ್ಳರು ಯಾವಾಗ
ಬೇಕಾದರೂ ಕಳ್ಳತನ ಮಾಡುತ್ತಾರೆ. ಅವರಿಗೆ ಇದೇ ಸಮಯ ಎನ್ನೋದು ಇರುವುದಿಲ್ಲ. ಬ್ಯಾಂಕ್‌ನವರು ಕಳಪೆಮಟ್ಟದ ಸಿಸಿ ಕ್ಯಾಮರಾಗಳನ್ನು ಅಳವಡಿಸಿದರೆ ಆರೋಪಿಗಳ ಭಾವಚಿತ್ರ ಗುರುತಿಸಲು ಕಷ್ಟಕರವಾಗುತ್ತದೆ. ಆದ್ದರಿಂದ ಬ್ಯಾಂಕ್‌ ಒಳಗೆ ಹಾಗೂ ಹೊರಗೆ ಗುಣಮಟ್ಟದ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಹೇಳಿದರು.

ಪಟ್ಟಣ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯತ್ತಿದೆ. ಎಸ್‌ಬಿಎಚ್‌, ಎಸ್‌ಬಿಐ, ಕೆನರಾ, ಐಸಿಐಸಿಐ, ಕೆ.ಜಿ.ಬಿ, ಮೈಸೂರು ಬ್ಯಾಂಕ್‌, ಮಣಿಪುರಂ ಗೋಲ್ಡ್‌ ಲೋನ್‌ ಸೇರಿದಂತೆ ಇತರೆ ಬ್ಯಾಂಕಗಳು ಇವೆ. ಕೆಲವು ಬ್ಯಾಂಕ್‌ಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅವರ ಅನುಕೂಲಕ್ಕಾಗಿ ಅಳವಡಿಸಿಕೊಂಡಿರುತ್ತಾರೆ. 

ಆದರೆ ಅದು ಗುಣಮಟ್ಟದಿಂದ ಕೂಡಿದೆಯೋ ಇಲ್ಲವೋ ಎನ್ನುವುದನ್ನು ನೋಡಿರುವುದಿಲ್ಲ. ಅದರಲ್ಲಿ ಮುಖಗಳನ್ನು
ಗುರುತಿಸಲು ಸಾಧ್ಯವೋ, ಇಲ್ಲವೋ ಎನ್ನುವ ಪರಿಜ್ಞಾನವೂ ನಿಮ್ಮಲ್ಲಿ ಇರುವುದಿಲ್ಲ.ಏನಾದರೂ ಅನಾಹುತ ಸಂಭಿಸಿದರೆ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡುತ್ತಿರಿ. ನಾವು ಸಿಸಿ ಕ್ಯಾಮರಾಗಳಲ್ಲಿ ಮುಖ ಗುರುತಿಸಲು ಸಾಧ್ಯವಾಗದೇ ಆರೋಪಿಗಳು ಕೂಡಲೇ ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬ್ಯಾಂಕ್‌ಗಳಲ್ಲಿ ಬ್ಲಿಗರ್‌ ಅಲಾರಂಗಳನ್ನು ಅಳವಡಿಸಿಕೊಳ್ಳಬೇಕು. ಅಲಾರಾಂ ಬಗ್ಗೆ ಅಕ್ಕ ಪಕ್ಕದ ಮನೆಗಳು ಅಥವಾ ಹೋಟೆಲ್‌ಗ‌ಳು ಸೇರಿದಂತೆ ಯಾವುದೇ ಅಂಗಡಿಗಳು ಇರಲಿ. ಅವರಿಗೆ ಮಾಹಿತಿ ನೀಡಿ. ಏನಾದರೂ ಅನಾಹುತ ಸಂಭವಿಸಿದರೆ ಅಕ್ಕ ಪಕ್ಕದವರು ಅಲಾರಾಂ ಶಬ್ದ ಕೇಳಿ ತಕ್ಷಣ ಜಾಗೃತರಾಗಿ ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುತ್ತಾರೆ. ಅಲಾರಾಂನಲ್ಲಿ ಪೊಲೀಸ್‌ ಠಾಣೆಯ ಸಿಪಿಐ ಹಾಗೂ ಪಿಎಸ್‌ಐ ನಂಬರ್‌ಗಳನ್ನು ಅಳವಡಿಸಿ. ಇದರಿಂದ ಪೊಲೀಸರಿಗೆ ಮೆಸೇಜ್‌ ಬಂದ ಕೂಡಲೇ ಆರೋಪಿಗಳನ್ನು ಹಿಡಿಯುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು. ಪಿಎಸ್‌ಐ ಜಗದೇವಪ್ಪ ಪಾಳಾ, ಪ್ರೊಬೆಷನರಿ ಪಿಎಸ್‌ಐ ತಮ್ಮಯ್ಯ, ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಉಕ್ಲಿ, ವೀರಭದ್ರ, ಚಂದ್ರಶೇಖರ, ಮುಜಾಹೀದ್‌ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ಇದ್ದರು.

ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಬ್ಯಾಂಕ್‌ ರಜೆ ಇರಲಿ ಅಥವಾ ಇಲ್ಲದೇ ಇರಲಿ ಇಬ್ಬರು ವಾಚ್‌ಮನ್‌ಗಳನ್ನು  ನೇಮಿಸಿಕೊಳ್ಳಿ.
 ಹಗಲು-ರಾತ್ರಿ ಎನ್ನುವ ಅಲಾರಾಂಗಳು ಇವೆ. ಅವುಗಳನ್ನು ಅಳವಡಿಸಿಕೊಳ್ಳಿ.
 ಪ್ಯಾನಿಕ್‌ ಬಟನ್ಸ್‌ ಸೇರಿದಂತೆ ಸೆನ್ಸಾರ್‌ ಅಳವಡಿಸಿಕೊಳ್ಳಿ.
 ಪ್ರತಿಯೊಂದು ಎಟಿಎಂಗಳಲ್ಲಿ ಸಿಸಿ ಕ್ಯಾಮರಾ ಹಾಗೂ ಬೆಳಕು ಇರಲಿ.
 ಗ್ರಾಹಕರಿಗೆ ಕರೆ ಮಾಡಿ ನಿಮ್ಮ ಖಾತೆ ಸಂಖ್ಯೆ ನೀಡಿ ಅಥವಾ ನಿಮ್ಮ  ಎಟಿಎಂ ಪಾಸ್‌ ವರ್ಡ್‌ ನೀಡಿ ಎಂದು ಕೇಳುತ್ತಿದ್ದಾರೆ. 
ಅಂತಹವರಿಂದ  ದೂರವಿರುವ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬ್ಯಾಂಕ್‌ಗಳಲ್ಲಿ  ಹಾಕಿಸಿ.
 ಗ್ರಾಹಕರನ್ನು ಸತಾಯಿಸದೆ ಕೂಡಲೇ ಅವರ ಕೆಲಸಗಳನ್ನು ಮಾಡಿಕೊಡಿ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.