ವೆನಿಲ್ಲಾ ಹುಡುಗ
Team Udayavani, Jan 26, 2018, 12:22 PM IST
ಸಿನಿಮಾದಲ್ಲಿ ಹೀರೋ ಆಗಬೇಕೆಂದು ಕನಸು ಕಾಣುವವರಿಗೇನು ಕಡಿಮೆಯಿಲ್ಲ. ಆದರೆ, ನನಸಾಗೋದು ಮತ್ತು ನನಸು ಮಾಡುವವರು ಕಡಿಮೆಯೇ. ಆದರೆ, ಅವಿನಾಶ್ ಮಾತ್ರ ಖುಷಿಯಾಗಿದ್ದಾರೆ. ಯಾವ ಅವಿನಾಶ್ ಎಂದು ಕೇಳಿದರೆ “ವೆನಿಲ್ಲಾ’ ಸಿನಿಮಾ ಬಗ್ಗೆ ಹೇಳಬೇಕು. ಜಯತೀರ್ಥ ನಿರ್ದೇಶನದ “ವೆನಿಲ್ಲಾ’ ಚಿತ್ರದಲ್ಲಿ ಅವಿನಾಶ್ ನಾಯಕರಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು, ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಚಿತ್ರವನ್ನು ಅವಿನಾಶ್ ಅವರ ತಂದೆ ನಿರ್ಮಿಸಿದ್ದಾರೆ. ಕೆಲವರು ಮಕ್ಕಳ ಒತ್ತಾಯಕ್ಕೆ ಸಿನಿಮಾ ನಿರ್ಮಿಸುತ್ತಾರೆ. ಆದರೆ, ಅವಿನಾಶ್ ವಿಚಾರದಲ್ಲಿ ಇದು ಉಲ್ಟಾ. ಮಗನ ಟ್ಯಾಲೆಂಟ್ ನೋಡಿ ಅವಿನಾಶ್ ಅವರ ತಂದೆಯೇ ಆಸಕ್ತಿಯಿಂದ ಈ ಸಿನಿಮಾ ನಿರ್ಮಿಸಲು ಮುಂದಾದರಂತೆ.
ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಂಬಿಎ ಓದಿರುವ ಅವಿನಾಶ್ಗೆ ನಟನೆಯಲ್ಲಿ ಆಸಕ್ತಿ ಇದ್ದಿದ್ದರಿಂದ ನಟನಾಗೆ ಸೇರಿಕೊಂಡು ಅನೇಕ ಶೋಗಳನ್ನು ಕೊಟ್ಟರಂತೆ. ಅದೊಂದು ದಿನ ಇವರ ಶೋ, ಅದರಲ್ಲಿ ಅವಿನಾಶ್ ತೊಡಗಿಸಿಕೊಂಡ ರೀತಿಯಿಂದ ಖುಷಿಯಾದ ಇವರ ತಂದೆ ಇವರಿಗೆ ಹೇಳದೆಯೇ ನಿರ್ದೇಶಕ ಜಯತೀರ್ಥ ಅವರನ್ನು ಸಂಪರ್ಕಿಸಿ, ಸಿನಿಮಾ ಮಾಡಲು ಮುಂದಾಗಿದ್ದಾರೆ. ಅಂದಹಾಗೆ, “ವೆನಿಲ್ಲಾ’ದಲ್ಲಿ ಅವಿನಾಶ್ ಅವರ ಪಾತ್ರ ಅವರ ನಿಜ ಜೀವನಕ್ಕೆ ಹತ್ತಿರವಾಗಿದೆಯಂತೆ. ಇಲ್ಲೂ ಅವರು ಮೆಕ್ಯಾನಿಕಲ್ ಎಂಜಿನಿಯರ್ ಆಗಿಯೇ ಕಾಣಿಸಿಕೊಂಡಿದ್ದಾರೆ.
ರವಿ ರೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೆ ಹೇಳೋಣ ನಮ್ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್ಗಳು ತಾತ್ಕಾಲಿಕ ಸ್ಥಗಿತ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!
Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ