ಮಠಕ್ಕೆ ಮರಳಿದ ಸಿದ್ಧಗಂಗಾ ಶ್ರೀ : ಭಕ್ತರಲ್ಲಿ ಸಂಭ್ರಮ
Team Udayavani, Jan 27, 2018, 4:37 PM IST
ತುಮಕೂರು : ದಿಢೀರ್ ಅನಾರೋಗ್ಯ ಕಾಣಿಸಿದ ಹಿನ್ನೆಲೆಯಲ್ಲಿ ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಸಣ್ಣ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಶತಾಯುಷಿ, ಭಕ್ತರ ಪಾಲಿಗೆ ನಡೆದಾಡುವ ದೇವರೆನಿಸಿಕೊಂಡ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಚೇತರಿಸಿಕೊಂಡು ಶನಿವಾರ ಮಠಕ್ಕೆ ಮರಳಿದ್ದಾರೆ.
ಶುಕ್ರವಾರ ಬೆಳಗ್ಗೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪೂಜೆ ಮುಗಿಸಿದ ನಂತರ ಶ್ರೀಗಳಿಗೆ ಅನಾರೋಗ್ಯ ಕಾಣಿಸಿಕೊಂಡಿತು. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಲಾಗಿತ್ತು.
ಶ್ರೀಗಳ ದೇಹದಲ್ಲಿ ಎಂಟು ಸ್ಟೆಂಟ್ಗಳಿದ್ದು, ನಿನ್ನೆ ಮತ್ತೆ ಮೂರು ಸ್ಟೆಂಟ್ ಅಳವಡಿಸಲಾಗಿದೆ. ಪಿತ್ತನಾಳದಲ್ಲಿ ಬ್ಲಾಕೇಜ್ ತೆರವುಗೊಳಿಸಲಾಗಿದೆ. ಪಿತ್ತನಾಳ ಬ್ಲಾಕ್ ಆಗಿದ್ದರಿಂದ ಅನಾರೋಗ್ಯ ಕಾಣಿಸಿಕೊಂಡಿತ್ತು. ನ್ಯೂಮೋನಿಯಾದಿಂದ ಶ್ರೀಗಳು ಬಳಲುತ್ತಿದ್ದರು.
ಶ್ರೀಗಳಿಗೆ 10 ದಿನಗಳ ಸಂಪೂರ್ಣ ವಿಶ್ರಾಂತಿಗೆ ವೈದ್ಯರು ಸೂಚನೆ ನೀಡಿದ್ದು ಉಳಿದ ಚಿಕಿತ್ಸೆಗಳನ್ನು ಮಟದಲ್ಲೇ ಮುಂದುವರಿಸಲಾಗುತ್ತಿದೆ.
ಶ್ರೀಗಳೂ ನಾನು ಇಲ್ಲಿರುವುದಿಲ್ಲ ಮಠಕ್ಕೆ ವಾಪಾಸಾಗುತ್ತೇನೆ ಎಂದು ಪಟ್ಟು ಹಿಡಿದಿದ್ದರು.
ಶ್ರೀಗಳು ಮಠದ ಬಳಿ ಕಾರಿನಿಂದ ಇಳಿದ ಬಳಿಕ ನಡೆದುಕೊಂಡೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಮಠದಲ್ಲಿ ಶ್ರೀಗಳನ್ನು ಕಂಡು ನೆರೆದಿದ್ದ ನೂರಾರು ಭಕ್ತರು ಪುನೀತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ