ಹಿನ್ನೆಲೆ ಸಂಗೀತ ಮುಗಿಸಿದ ನಾಗರಕಟ್ಟೆಗೆ
Team Udayavani, Jan 28, 2018, 11:38 AM IST
ಅನೀಶ್ ತೇಜಶ್ವರ್ ಅಭಿನಯದ “ನಾಗರಕಟ್ಟೆ’ ಚಿತ್ರಕ್ಕೆ ಹಿನ್ನೆಲೆ ಸಂಗೀತದ ಕೆಲಸ ಪೂರ್ಣಗೊಂಡಿದೆ. ಶ್ರೀ ಸಾಯಿ ವೆಂಚರ್ ಬ್ಯಾನರ್ನಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ಇತ್ತೀಚೆಗೆ ಬಾಲಾಜಿ ಸ್ಟುಡಿಯೋವಿನಲ್ಲಿ ಹಿನ್ನೆಲೆ ಸಂಗೀತ ಕಾರ್ಯ ನಡೆಸಲಾಗಿದೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆಯುವ ಮೂಲಕ ಶಂಕರ್ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
ಶಂಕರ್ ಅವರು ಈ ಹಿಂದೆ “18ನೇ ಕ್ರಾಸ್’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಚಿತ್ರಕ್ಕೆ ಸುರೇಶ್ ಬಾಬು ಅವರು ಛಾಯಾಗ್ರಹಣ ಮಾಡಿದ್ದಾರೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ಯೋಗರಾಜಭಟ್, ಕೆ. ಕಲ್ಯಾಣ್ ಅವರು ಗೀತೆಗಳನ್ನು ರಚಿಸಿದ್ದಾರೆ. ವಿನಯ್ ಎಂ.ಕುಮಾರ್ ಅವರು ಚಿತ್ರಕ್ಕೆ ಸಂಕಲನ ಮಾಡಿದ್ದಾರೆ. ಮದನ್ ಹರಿಣಿ ನೃತ್ಯ ನಿರ್ದೇಶನ ಮಾಡಿದ್ದಾರೆ.
ಮುರಳಿ ಅವರು ಕಲಾನಿರ್ದೇಶನ ಮಾಡಿದ್ದಾರೆ. ವಿಕ್ರಮ್ ಅವರ ಸಾಹಸ ಚಿತ್ರಕ್ಕಿದೆ. ಉಮೇಶ್ ಸಹನಿರ್ದೇಶನವಿದೆ. ಚಿತ್ರದಲ್ಲಿ ಅನೀಶ್ ತೇಜೇಶ್ವರ್ಗೆ ನಾಯಕಿಯಾಗಿ ನಿಹಾರಿಕಾ, ಶ್ರಾವ್ಯ ನಟಿಸಿದ್ದಾರೆ. ಉಳಿದಂತೆ ಚಿತ್ರದಲ್ಲಿ ದ್ವಾರಕೀಶ್, ಅವಿನಾಶ್, ಶರತ್ಲೋಹಿತಾಶ್ವ, ಚಿಕ್ಕಣ್ಣ, ಗಿರಿ ದಿನೇಶ್, ರಾಕ್ಲೈನ್ ಸುಧಾಕರ್, ಕರಿಸುಬ್ಬು, ಮಿಮಿಕ್ರಿ ದಯಾನಂದ್, ಸುಚೇಂದ್ರ ಪ್ರಸಾದ್, ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…