ಪೊಲೀಸ್ ವೇತನ ಹೆಚ್ಚಳ : ಔರಾದ್ಕರ್ ವರದಿ ಪರಿಗಣಿಸಲು ಪರಂ ಪತ್ರ
Team Udayavani, Jan 29, 2018, 6:50 AM IST
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಐಪಿಎಸ್ಯೇತರ ಸಿಬಂದಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಎಡಿಜಿಪಿ ರಾಘವೇಂದ್ರ ಔರಾದ್ಕರ್ ಸಮಿತಿ ವರದಿಯನ್ನು ವೇತನ ಪರಿಷ್ಕರಣೆ ಸಂದರ್ಭದಲ್ಲಿ ಪರಿಗಣಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್ ಆರನೇ ವೇತನ ಆಯೋಗದ ಅಧ್ಯಕ್ಷ ಎಂ.ಆರ್ ಶ್ರೀನಿವಾಸಮೂರ್ತಿಯವರಿಗೆ ಪತ್ರ ಬರೆದಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿ ಹಾಗು ಅಧಿಕಾರಿಗಳ ವೇತನ, ಭತ್ತೆ ಹೆಚ್ಚಳ ಕುರಿತು ತಾವು ಗೃಹ ಸಚಿವರಾಗಿದ್ದಾಗ ಉನ್ನತ ಪೊಲೀಸ್ ಅಧಿಕಾರಿಯಾಗಿದ್ದ ಔರಾದ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ದೇಶದ ವಿವಿಧ ರಾಜ್ಯಗಳ ಪೊಲೀಸ್ ಇಲಾಖೆಯ ಸಿಬಂದಿ ಪಡೆಯುತ್ತಿರುವ ವೇತನ ಮತ್ತು ಇತರೆ ಭತ್ತೆಗಳ ಬಗ್ಗೆ ಅಧ್ಯಯನ ನಡೆಸಿ ವೇತನ ಪರಿಷ್ಕರಣೆ ಮಾಡಬಹುದು ಎಂದು ಸರಕಾರಕ್ಕೆ ವರದಿ ಸಲ್ಲಿಸಿದೆ. ಸಮಿತಿಯ ವರದಿಯಲ್ಲಿನ ಅಂಶಗಳನ್ನು ಪರಿಗಣಿಸಿ ಪೊಲೀಸ್ ಇಲಾಖೆ ಸಿಬಂದಿ ವೇತನ ಹಾಗೂ ಭತ್ತೆ ಹೆಚ್ಚಳಕ್ಕೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್