ಬಜೆಟ್ ಅಧಿವೇಶನ ಆರಂಭ:ಪಕ್ಷಗಳಿಗಿಂತಲೂ ದೇಶ ದೊಡ್ಡದು; ಪ್ರಧಾನಿ ಮೋದಿ
Team Udayavani, Jan 29, 2018, 11:01 AM IST
ನವದೆಹಲಿ: ದೇಶದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ ಅನ್ನು ಮಂಡಿಸಲಾಗುತ್ತಿದೆ. ಬಜೆಟ್ ದೇಶದ ಅರ್ಥ ವ್ಯವಸ್ಥೆಯನ್ನು ಬಲಿಷ್ಠಗೊಳಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಸಂಸತ್ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಸಂಸತ್ ಭವನದ ಬಳಿ ಪ್ರಧಾನಿ ಸುದ್ದಿಗಾರರ ಜತೆ ಮಾತನಾಡುತ್ತ ಈ ಪ್ರತಿಕ್ರಿಯೆ ನೀಡಿದರು.
ಬಜೆಟ್ ಅಧಿವೇಶನದಲ್ಲಿ ತ್ರಿವಳಿ ತಲಾಖ್ ವಿಧೇಯಕ ಅಂಗೀಕಾರವಾಗುವ ವಿಶ್ವಾಸ ಇದೆ ಎಂದು ಪ್ರಧಾನಿ ಹೇಳಿದರು, ಅಲ್ಲದೇ ತ್ರಿವಳಿ ತಲಾಖ್ ವಿಧೇಯಕ ಬೆಂಬಲಿಸುವಂತೆ ಪ್ರಧಾನಿ ಮೋದಿ ಎಲ್ಲಾ ಪ್ರತಿಪಕ್ಷಗಳ ಸದಸ್ಯರಲ್ಲಿ ಮನವಿ ಮಾಡಿಕೊಳ್ಳುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದ ಪ್ರಧಾನಿ, ಪಕ್ಷಗಳಿಗಿಂತಲೂ ದೇಶ ದೊಡ್ಡದು ಎಂದರು. ಭಾನುವಾರ ಸಂಸತ್ ಭವನದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದ್ದು, ಬೇರೆ, ಬೇರೆ ವಿಚಾರಗಳನ್ನೆತ್ತಿ ಅಧಿವೇಶನದ ವೇಳೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ಧವಾಗಿವೆ. ಮತ್ತೊಂದೆಡೆ ತ್ರಿವಳಿ ತಲಾಖ್ ನಂತ ಪ್ರಮುಖ ವಿಧೇಯಕಗಳಿಗೆ ಹೇಗಾದರೂ ಅಂಗೀಕಾರ ಪಡೆಯಲೇಬೇಕು ಎಂಬ ಯತ್ನ ಸರ್ಕಾರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು