54 ಲಕ್ಷ ರೂ. ಅನುದಾನ ವಾಪಸ್‌


Team Udayavani, Jan 30, 2018, 6:35 AM IST

Rs-54-lakhs-Grant-back.jpg

ಬೆಂಗಳೂರು: ರಾಜ್ಯದ 6 ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಮಹಿಳಾ ವಿದ್ಯಾರ್ಥಿನಿಲಯ ನಿರ್ಮಿಸಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ 54.60 ಲಕ್ಷ ರೂ. ಅನುದಾನವನ್ನು ತಾಂತ್ರಿಕ ಶಿಕ್ಷಣ ಇಲಾಖೆ ವಾಪಸ್‌ ಪಡೆದಿದೆ. ಹಣವನ್ನು ನೇರವಾಗಿ ಪ್ರಾಂಶುಪಾಲರ ಖಾತೆಗೆ ವರ್ಗಾಯಿಸಿದ್ದಕ್ಕೆ ಖಜಾನೆ ಅಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ.

ಕೇಂದ್ರ ಸರ್ಕಾರ 2017-18ರ ಆಯವ್ಯಯದಲ್ಲಿ ರಾಷ್ಟ್ರೀಯ ಉತ್ಛತರ ಶಿಕ್ಷಾ ಅಭಿಯಾನ (ರುಸಾ)ಕಾರ್ಯಕ್ರಮದಡಿ ರಾಜ್ಯದ ಏಳು ಸರ್ಕಾರಿ ಪಾಲಿಟೆಕ್ನಿಕ್‌ ಗಳಲ್ಲಿ ವಿದ್ಯಾರ್ಥಿನಿಲಯ ಸ್ಥಾಪನೆಗೆ 63.91 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ. ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಆ ಏಳು ಪಾಲಿ ಟೆಕ್ನಿಕ್‌ನ ಪ್ರಾಂಶುಪಾಲರ ಖಾತೆಗೆ ಹಣವನ್ನು ವರ್ಗಾಯಿಸಿದೆ. ಇದಕ್ಕೆ ಖಚಾನೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಈ ಆರೂ ಸಂಸ್ಥೆಗಳ ಹಣವನ್ನು ವಾಪಸ್‌ ಪಡೆದು, ಒಂದು ಸಂಸ್ಥೆಗೆ ಅವಕಾಶ ಮಾಡಿಕೊಟ್ಟಿದೆ.

ಬಿಡುಗಡೆಯಾದ ಹಣ: ಗಜೇಂದ್ರಗಡದ ಸರ್ಕಾರಿ ಪಾಲಿಟೆಕ್ನಿಕ್‌ಗೆ 9,31,234 ರೂ.ಗಳನ್ನು,ಚಿಂತಾಮಣಿಯ ಸರ್ಕಾರಿ ಪಾಲಿಟೆಕ್ನಿಕ್‌ಗೆ 7,81,877 ರೂ.ಗಳನ್ನು, ದಾವಣಗೆರೆಯ ಡಿಆರ್‌ಆರ್‌ ಸರ್ಕಾರಿ ಪಾಲಿಟೆಕ್ನಿಕ್‌ಗೆ 8,75,151 ರೂ.ಗಳನ್ನು, ಹಾನಗಲ್‌ ಸರ್ಕಾರಿ ಪಾಲಿಟೆಕ್ನಿಕ್‌ಗೆ 9,49,364 ರೂ.ಗಳನ್ನು,ಗದಗದ ಸರ್ಕಾರಿ ಪಾಲಿಟೆಕ್ನಿಕ್‌ಗೆ 9,68,697 ರೂ.ಗಳನ್ನು, ಮಿರ್ಲೆ ಸರ್ಕಾರಿ ಪಾಲಿಟೆಕ್ನಿಕ್‌ಗೆ 9,12,596 ರೂ.ಗಳನ್ನು ಹಾಗೂ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್‌ ಗೆ 9,72,396 ರೂ. ಸೇರಿ ಏಳು ಸರ್ಕಾರಿ ಪಾಲಿಟೆಕ್ನಿಕ್‌ಗಳ ಮಹಿಳಾ ವಿದ್ಯಾರ್ಥಿನಿಲಯದ ಕಟ್ಟಡ ನಿರ್ಮಾಣಕ್ಕೆ 63,91,315 ರೂ.ಗಳನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿತ್ತು. ಅದರಂತೆ ತಾಂತ್ರಿಕ ಶಿಕ್ಷಣ ಇಲಾಖೆ ಏಳು ಪಾಲಿಟೆಕ್ನಿಕ್‌ಗಳ ಪ್ರಾಂಶುಪಾಲರ ಖಾತೆಗೆ ಹಣ ಜಮಾ ಮಾಡಿದೆ. ಇದಕ್ಕೆ ಖಜಾನೆ ಅಧಿಕಾರಿಗಳು “ಹಣ ಪಾವತಿಯ ದೃಢೀಕರಣ ಇಲ್ಲ’ ಎಂದು ಆರು ಸಂಸ್ಥೆಗಳಿಗೆ ಹಣ ವರ್ಗಾಯಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆದರೆ, ಗಜೇಂದ್ರಗಡದ ಸರ್ಕಾರಿ ಪಾಲಿಟೆಕ್ನಿಕ್‌ಗೆ 9,31,234 ರೂ.ಗಳನ್ನು ನೀಡಿರುವ ಬಗ್ಗೆ ಯಾವುದೇ
ಆಕ್ಷೇಪ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ಆರು ಸಂಸ್ಥೆಗಳಿಗೆ ನೀಡಿರುವ ಹಣವನ್ನು ಹಿಂಪಡೆಯ ಲಾಗಿದೆ ಎಂದು ಜ.17ರಂದು ಆದೇಶ ಹೊರಡಿಸಿದೆ. ಪ್ರಾಂಶುಪಾಲರ ಖಾತೆಗೆ ಹಣ ವರ್ಗಾವಣೆ ಮಾಡಿರುವುದಕ್ಕೆ ಖಜಾನೆ ಅಧಿಕಾರಿಗಳು ನಿರಾಕರಿಸಿದ್ದಾರೆ. ಇದು ಸಂಸ್ಥೆಯ ಮಹಿಳಾ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕೇಂದ್ರ ದಿಂದ ಮಂಜೂರಾದ ಹಣವನ್ನು ಉದ್ದೇಶಿಸಿರುವ ಕಾಮಗಾರಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವೆಚ್ಚದ ಮಾಹಿತಿ ಕೊಡಿ: ಇಲಾಖೆಯಿಂದ ಸಿಬ್ಬಂದಿಗೆ ನೀಡಿರುವ ವೇತನ, ಸಹಾಯಧನ, ಹಬ್ಬದ ಮುಂಗಡ,ಕಚೇರಿ ವೆಚ್ಚ, ಕೇಂದ್ರ ಪುರಸ್ಕೃತ ಹಾಗೂ ಕೇಂದ್ರ ಯೋಜನೆ ಹೊರತುಪಡಿಸಿ ಬೇರೆ ಬೇರೆ ಬಿಲ್ಲುಗಳು,ವಿದ್ಯುಶ್ಚಕ್ತಿ, ದೂರವಾಣಿ, ವಾಹನ ಇತ್ಯಾದಿ ಎಲ್ಲಾ ಬಿಲ್ಲುಗಳ ಮಾಹಿತಿಯನ್ನು 2018ರ ಮಾ.31ರೊಳಗೆ ಖಜಾನೆ ಇಲಾಖೆಗೆ ನೀಡಲು ಆದೇಶ ಹೊರಡಿಸಿದೆ.

ಆಕ್ಷೇಪಕ್ಕೆ ಕಾರಣವೇನು?
ಅನುದಾನವನ್ನು ನೇರವಾಗಿ ಪ್ರಾಂಶುಪಾಲರ ಖಾತೆಗೆ ವರ್ಗಾವಣೆ ಮಾಡುವುದರಿಂದ ಅವ್ಯವಹಾರ ಆಗುವ ಸಾಧ್ಯತೆ ಇರುವುದರಿಂದ ಪ್ರಾಂಶುಪಾಲರ ಖಾತೆಗೆ ಹಣ ವರ್ಗಾವಣೆ ಮಾಡಿರುವುದಕ್ಕೆ ಖಜಾನೆ ಇಲಾಖೆಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ರಾಜ್ಯದ 81 ಸರ್ಕಾರಿ, 44 ಅನುದಾನಿತ ಹಾಗೂ 170 ಖಾಸಗಿ ಪಾಲಿಟೆಕ್ನಿಕ್‌ಗಳ ಪೈಕಿ ಬಹುತೇಕ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಮಹಿಳಾ ವಿದ್ಯಾರ್ಥಿನಿಲಯ ಇಲ್ಲ. ವಿದ್ಯಾರ್ಥಿ ನಿಯಲದ ಸ್ಥಾಪನೆಗಾಗಿ ರುಸಾದ ಅಡಿಯಲ್ಲಿ ಅನುದಾನವನ್ನು ಕೋರಲಾಗಿತ್ತು. ಅದರಂತೆ 7 ಸಂಸ್ಥೆಗಳಲ್ಲಿ ಮಹಿಳಾ ವಿದ್ಯಾರ್ಥಿನಿಲಯ ಸ್ಥಾಪನೆಗೆ ಅನುದಾನ ಮಂಜೂರು ಮಾಡಿದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.