ಗಾಂಧಿ ಹತ್ಯೆ ಸಮರ್ಥನೆ ದುರಂತ: ಮುಖ್ಯಮಂತ್ರಿ
Team Udayavani, Jan 31, 2018, 8:21 AM IST
ಬೆಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹತ್ಯೆ ಸಮರ್ಥಿಸಿಕೊಳ್ಳುತ್ತಿರುವುದು ದೊಡ್ಡ ದುರಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರ ಸ್ಮರಣಾರ್ಥ ವಿಧಾನಸೌಧ ಮತ್ತು ವಿಕಾಸಸೌಧ ಮಧ್ಯೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ “ಸರ್ವೋದಯ ದಿನ’ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ನಾಥೂರಾಮ್ ಗೋಡ್ಸೆ ಗುಂಡಿಗೆ ಮಹಾತ್ಮಾ ಗಾಂಧೀಜಿ ಬಲಿಯಾಗಿದ್ದು, ಈ ದಿನ ದೇಶದ ಪಾಲಿಗೆ ಕರಾಳ ದಿನ. ಆದರೆ, ನಾಥೂರಾಮ್ ಗೋಡ್ಸೆ ಗುಂಡಿಕ್ಕಿ ಗಾಂಧೀಜಿಯನ್ನು ಹತ್ಯೆ ಮಾಡಿರುವುದನ್ನು ಮತೀಯವಾದಿಗಳು ಸಮರ್ಥಿಸಿಕೊಳ್ಳುತ್ತಿರುವುದು ದೊಡ್ಡ ದುರಂತ ಎಂದರು. ಗಾಂಧೀಜಿಯವರು ಪ್ರತಿಪಾದಿಸಿದ ಶಾಂತಿ-ಸಹಬಾಳ್ವೆ ಮತ್ತು ಜಾತ್ಯಾತೀತ
ತತ್ವಗಳು ಇಂದಿಗೂ ಪ್ರಸ್ತುತ ಎಂದು ಸಿದ್ದರಾಮಯ್ಯ ಹೇಳಿದರು. ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ, ಗೋವಿಂದ್ರಾಜು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ