ಪಾಕ್ಗೆ ಮುಖ್ಯಮಂತ್ರಿ ಸಪೋರ್ಟ್: ಜೋಶಿ
Team Udayavani, Feb 1, 2018, 6:25 AM IST
ಕೊಪ್ಪಳ: ಆರ್ಎಸ್ಎಸ್, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳನ್ನು ಭಯೋತ್ಪಾದನಾ ಸಂಘಟನೆಗಳು ಎಂದಿರುವ ಸಿಎಂ ಸಿದ್ದರಾಮಯ್ಯ ಅವರು ಪಾಕಿಸ್ತಾನಿಗಳ ವಾದ ಪುರಸ್ಕರಿಸುತ್ತಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಜೈಲಿಗೆ ಹೋಗಿ ಬಂದವರು ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ ಬ್ಯಾಂಕ್ಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪಾಕಿಸ್ತಾನಿಗಳ ವಾದಕ್ಕೆ ಸಹಕಾರ ನೀಡಿದಂತೆ ಕಾಣುತ್ತಿದೆ. ಪಾಕಿಸ್ತಾನದಲ್ಲಿ ಅವರ ಮಾತಿಗೆ ಬೆಂಬಲ ಸಿಕ್ಕಂತೆ ಕಾಣುತ್ತಿದೆ.
ಮಹದಾಯಿ ವಿಷಯದಲ್ಲಿ ಸಿಎಂ ಕೆಲವು ಸಂಘಟನೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು, ವಾಟಾಳ್ ನಾಗರಾಜ್ ಕಾಂಗ್ರೆಸ್ ಏಜೆಂಟ್ರಂತೆ ಹಣ ಪಡೆದು ಹೋರಾಟ ಮಾಡುತ್ತಿದ್ದಾರೆ ಎಂದರು. ರಾಜ್ಯ ಸರ್ಕಾರ ಗೃಹ ಇಲಾಖೆಯನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದು, ಪೊಲೀಸ್ ಅಧಿ ಕಾರಿಗಳು ಸರ್ಕಾರದ ಅಣತಿಯಂತೆ ಕುಣಿಯುತ್ತಿದ್ದಾರೆ. ಆನಂದ್ ಸಿಂಗ್ ಕಾಂಗ್ರೆಸ್ ಸೇರುತ್ತಿದ್ದರೆ ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ
Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ
June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫಲಿತಾಂಶ
MUST WATCH
ಹೊಸ ಸೇರ್ಪಡೆ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!