ಕ್ರಾಂತಿ ಆರಿಸೋ ಪ್ರೀತಿ


Team Udayavani, Feb 2, 2018, 11:10 AM IST

20-16.jpg

“ನಾನೇನಾದರೂ ಹೀರೋ ಆದರೆ, ನೀನು ನಾಯಕಿ ಆಗ್ತಿಯ ಅಂದಿದ್ದರು. ನಾನು ತಮಾಷೆಗೆ ಹೇಳ್ತಾರೆ ಅಂದುಕೊಂಡು ಆಯ್ತು ಅಂದಿದ್ದೆ. ಒಂದು ದಿನ ಫೋನ್‌ ಕಾಲ್‌ ಬಂತು. ಹೋದೆ ಕಥೆ ಕೇಳಿದೆ, ನಾಯಕಿ ನೀನೇ ಅಂದರು. ನಾನೂ ಡನ್‌ ಅಂದೆ. ಹಾಗೆ ಮಾಡಿದ ಚಿತ್ರ ಈಗ ಮುಗಿದು, ಬಿಡುಗಡೆಗೆ ರೆಡಿಯಾಗಿದೆ …’

ಹೀಗೆ ಹೇಳಿ ಖುಷಿಗೊಂಡರು ನಾಯಕಿ ಮಂಜುಳಾ ಗಂಗಪ್ಪ. ಅವರು ಹೇಳಿಕೊಂಡಿದ್ದು, “ನಾನು ಲವ್ವರ್‌ ಆಫ್ ಜಾನು’ ಚಿತ್ರದ ಬಗ್ಗೆ. ಇದು ಸಂಪೂರ್ಣ ಹೊಸಬರ ಚಿತ್ರ. ಫೆಬ್ರವರಿ 9ರಂದು ತೆರೆಗೆ ಬರಲು ಸಜ್ಜಾಗಿದೆ ಚಿತ್ರತಂಡ. ಅಂದು ಟ್ರೇಲರ್‌ ತೋರಿಸುವ ಮೂಲಕ ಪತ್ರಕರ್ತರ ಜತೆ ಮಾತುಕತೆಗೆ ಕುಳಿತಿತ್ತು.

ಈ ಚಿತ್ರದ ಮೂಲಕ ನಾಯಕಿಯಾಗಿರುವ ಮಂಜುಳಾ ಗಂಗಪ್ಪ, ಅಂದು ಖುಷಿಯ ಮೂಡ್‌ನ‌ಲ್ಲಿದ್ದರು. ಅದೇ ಖುಷಿಯಲ್ಲಿ ಹೇಳಿಕೊಂಡಿದ್ದಿಷ್ಟು. “ನಾನಿಲ್ಲಿ ಯಾರಾದ್ರೂ ಮಾತಾಡಿಸಿದರೆ  ಸಾಕು ಅವರ ಮೇಲೆ ರೇಗುವಂತಹ ಹುಡುಗಿಯ ಪಾತ್ರ ಮಾಡಿದ್ದೇನೆ. ಒಂದರ್ಥದಲ್ಲಿ ಯಾವಾಗಲೂ ಹುರ್ರ ಅನ್ನೋ ಹುಡುಗಿ. ಆಮೇಲೆ ನಿರ್ದೇಶಕರು ಕರುಣೆ ತೋರಿಸಿ, ನಗುವ ಹುಡುಗಿಯನ್ನಾಗಿಸಿ, ಲವ್‌ ಮಾಡುವಂತೆಯೂ ಮಾಡಿದ್ದಾರೆ. ನನಗೆ ಸಿಕ್ಕ ಒಳ್ಳೆಯ ಚಿತ್ರವಿದು. ನಾನು ಮತ್ತು ಹೀರೋ ವಿಶಾಲ್‌ “ಪ್ರಿಯದರ್ಶಿನಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದೆವು. ಆ ಸಮಯದಲ್ಲಿ ವಿಶಾಲ್‌, ನಾನೇನಾದರೂ ಹೀರೋ ಆದರೆ, ನೀನು ನಾಯಕಿ ಆಗ್ತಿàಯ’ ಅಂದಿದ್ದರು. ತಮಾಷೆಗೆ ಹೇಳ್ತಾರೆ ಅಂದುಕೊಂಡೆ. ಒಮ್ಮೆ ಕರೆದು, ಕಥೆ ಕೇಳಿಸಿ ನೀನೇ ನಾಯಕಿ ಅಂದಾಗ, ಖುಷಿಯಾಯ್ತು. ಒಂದೊಳ್ಳೆಯ ಚಿತ್ರ ಇದಾಗಲಿದೆ’ ಅಂದರು ಮಂಜುಳಾ.

ನಿರ್ದೇಶಕ ಸುರೇಶ್‌ ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರ. “ಗೊಂಬೆಗಳ ಲವ್‌’ ಮತ್ತು “ದಾದಾ ಈಸ್‌ ಬ್ಯಾಕ್‌’ ಚಿತ್ರಗಳಿಗೆ ಕೆಲಸ ಮಾಡಿದ್ದೇ ಅನುಭವ. ಈಗ “ನಾನು ಲವ್ವರ್‌ ಆಫ್ ಜಾನು’ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. “ಒಂದು ಚಿತ್ರ ಸುದ್ದಿಯಾಗೋದು ಮೊದಲು ಹಾಡುಗಳಿಂದ ಈಗಾಗಲೇ ಹಾಡುಗಳಿಗೆ ಮೆಚ್ಚುಗೆ ಸಿಕ್ಕಿದೆ. ಸಿನಿಮಾಗೂ ಆ ಮೆಚ್ಚುಗೆ ಸಿಗುವ ನಂಬಿಕೆ ಇದೆ. ಇದೊಂದು ಕ್ರಾಂತಿ ಮತ್ತು ಪ್ರೀತಿಗೆ ಸಂಬಂಧಿಸಿದ ಚಿತ್ರ. ಆದರೆ, ಕಥೆಯ ಗುಟ್ಟು ಹೇಳಲ್ಲ. ಅದನ್ನು ಚಿತ್ರದಲ್ಲೇ ನೋಡಬೇಕು ಎಂದು ಸಸ್ಪೆನ್ಸ್‌ ಇಟ್ಟರು ಸುರೇಶ್‌.  

ಹಾಗಾದರೆ, ಈ “ನಾನು ಲವ್ವರ್‌ ಜಾನು’ ಚಿತ್ರ ಯಾವ ಜಾತಿಗೆ ಸೇರಿದ್ದು? “ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಪ್ರೀತಿ ಕುರಿತಾದ ಚಿತ್ರ. 16 ರಿಂದ 60 ವರ್ಷದವರು ಕುಳಿತು ನೋಡಬಹುದಾದ ಅಪ್ಪಟ ಭಾವನಾತ್ಮಕ ಸಂಬಂಧಗಳ ಸುತ್ತ ಸಾಗುವ ಚಿತ್ರ. ಎಲ್ಲಾ ಚಿತ್ರಗಳಲ್ಲೂ ಪ್ರೀತಿ ಕಥೆಗಳು ಸಹಜ. ಆದರೆ, ಇಲ್ಲೂ ಪ್ರೀತಿಯ ಕಥೆ ಇದ್ದರೂ, ಅದಕ್ಕೊಂದು ಹೊಸ ಸ್ಪರ್ಶ ಕೊಡಲಾಗಿದೆ ಬೆಂಗಳೂರು, ಮಂಗಳೂರು, ತುಮಕೂರು ಮತ್ತು ಚಿಕ್ಕಮಗಳೂರು ಸುತ್ತಮುತ್ತಲ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ ಎಂದು ವಿವರ ಕೊಟ್ಟರು. ನಾಯಕ ವಿಶಾಲ್‌ಗೆ ಇದು ಮೊದಲ ಚಿತ್ರವಂತೆ. ಅವರಿಲ್ಲಿ ಪಕ್ಕದ್ಮನೆ ಹುಡುಗನ ಪಾತ್ರ ಸಿಕ್ಕಿದೆ. ತುಂಬಾನೇ ತೂಕವಿರುವಂತಹ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ. ಹತ್ತು ವರ್ಷ ಸಿನಿಮಾ ರಂಗದಲ್ಲಿದ್ದೇನೆ. ಕೆಲ ಸಣ್ಣಪುಟ್ಟ ಪಾತ್ರ ಮಾಡಿದ್ದೆ. ನಿರ್ದೇಶಕರು ಇಲ್ಲಿ ಹೀರೋ ಮಾಡಿದ್ದಾರೆ. ಖುಷಿ ಮತ್ತು ಭಯ ಇದೆ. ನಿಮ್ಮ ಹಾರೈಕೆ ಇರಲಿ ಅಂದರು ಅವರು.

ಚಿತ್ರಕ್ಕೆ ಚಂದ್ರು, ರವಿ, ವಿಷ್ಣು ಭಂಡಾರಿ ನಿರ್ಮಾಪಕರು. ಅವರಿಗೆ ಒಳ್ಳೆಯ ಚಿತ್ರ ಮಾಡಿರುವ ತೃಪ್ತಿ. ಇವರೆಲ್ಲರೂ ಎರಡೆರೆಡು ಮಾತು ಹೇಳುವ ಹೊತ್ತಿಗೆ ಮಾತುಕತೆಗೆ ಬ್ರೇಕ್‌ ಬಿತ್ತು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.