ಹಾಲಾಡಿ ಇಂದು ಬಿಜೆಪಿಗೆ
Team Udayavani, Feb 2, 2018, 12:04 PM IST
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಗೆದ್ದು, ಈಗ ಪಕ್ಷೇತರ ಶಾಸಕರಾಗಿ ರಾಜೀನಾಮೆ ನೀಡಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮತ್ತೆ ಮಾತೃಪಕ್ಷ ಬಿಜೆಪಿಗೆ ಫೆ. 2ರಂದು ಸಂಜೆ 4.30 ಗಂಟೆಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದಾರೆ.
ಅವರು 1999, 2004, 2008ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹ್ಯಾಟ್ರಿಕ್ ಜಯ ಸಾಧಿಸಿದ್ದರು. ಬಳಿಕ 2013ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಭರ್ಜರಿಯಾಗಿ ಗೆದ್ದಿದ್ದರು. ಈಗ ಅವಧಿಗೆ ಮುನ್ನವೇ ಪಕ್ಷೇತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಹಿಂದಿನ ಮುನಿಸು ಮರೆತು ಸ್ಥಳೀಯ ನಾಯಕರ ವಿರೋಧದ ನಡುವೆಯೇ ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ.
ಹಾಲಾಡಿಯವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಕುಂದಾಪುರ ಕ್ಷೇತ್ರ ಬಿಜೆಪಿಯ ಸುಮಾರು 400ರಿಂದ 500 ಮಂದಿ ಕಾರ್ಯಕರ್ತರು ಈಗಾಗಲೇ ಬೆಂಗಳೂರಿನತ್ತ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ರಣತಂತ್ರ ರೂಪಿಸು ತ್ತಿರುವ ಬಿಜೆಪಿಗೆ ಪ್ರಭಾವಿ ಬಂಟ ಸಮುದಾಯದ ನಾಯಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಸೇರ್ಪಡೆಯೊಂದಿಗೆ ಮತ್ತಷ್ಟು ಬಲ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ