ಪತ್ನಿಯನ್ನು ಮಾರಣಾಂತಿಕವಾಗಿ ಕೊಚ್ಚಿ ಪರಾರಿ


Team Udayavani, Feb 2, 2018, 12:36 PM IST

20-26.jpg

ಕಾರ್ಕಳ: ಪತ್ನಿ ಜತೆಗೆ ಮುನಿಸಿ ಆಕೆಯನ್ನು ಕತ್ತಿಯಿಂದ ಕಡಿದು  ಕೊಲೆಗೆ ಯತ್ನಿಸಿರುವ ಘಟನೆ  ಅಜೆಕಾರು ಸಮೀಪದ  ಹೆರ್ಮುಂಡೆಯಲ್ಲಿ  ಜ. 27 ರಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. 

ಹೆರ್ಮುಂಡೆಯ ಪಟ್ರಬೆಟ್ಟು ನಿವಾಸಿ  ಸಂತೋಷ್‌ ಪೂಜಾರಿ (27) ಆರೋಪಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ. 
ಹೆರ್ಮುಂಡೆ ಕರ್ಜಿಪಲ್ಕೆಯ ಶ್ರೀಧರ್‌ ಪೂಜಾರಿ ಮತ್ತು ಸುಗುಣಾ ದಂಪತಿಯ ಪುತ್ರಿ ಅನುಶ್ರೀ (23) ಪತಿಯ ಪೈಶಾಚಿಕ ಕೃತ್ಯಕ್ಕೆ ಒಳಗಾಗಿ ಮಣಿ ಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆ  ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.   ಸಂತೋಷ್‌ ವಿರುದ್ಧ ಶ್ರೀಧರ್‌ ಪೂಜಾರಿ  ಅವರು ಅಜೆಕಾರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ
ಡಿಪ್ಲೊಮಾ ಮುಗಿಸಿದ್ದ  ಅನುಶ್ರೀ ಸಿವಿಲ್‌ ಎಂಜಿನಿಯರ್‌ ಆಗಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ದ್ದರು. ಮದುವೆಯಾದ ಬಳಿಕವೂ ಕೆಲವು ಸಮಯ ಬೆಂಗಳೂರಿನಲ್ಲಿದ್ದ ಆಕೆ ಅನಂತರ ಪತಿ ಜತೆಗೆ ಮುಂಬಯಿಗೆ ತೆರಳಿದ್ದರು.  ಅಲ್ಲಿ ಪತಿ-ಪತ್ನಿಯರ ಮಧ್ಯೆ  ಪ್ರತಿದಿನವೂ ಗಲಾಟೆ ನಡೆಯುತ್ತಿತ್ತು. ಹೀಗಾಗಿ  ನಾಲ್ಕು ತಿಂಗಳ ಹಿಂದೆ ಅನುಶ್ರೀ ತಾಯಿ ಮುಂಬಯಿಗೆ ತೆರಳಿ ಮಗಳನ್ನು ಕರೆದುಕೊಂಡು ಬಂದಿದ್ದಾರೆ. ಸ್ವಲ್ಪ ಸಮಯ ಮನೆಯಲ್ಲೇ ಇದ್ದ ಆಕೆ ಎರಡು ತಿಂಗಳ ಹಿಂದೆಯಷ್ಟೇ ಕಾರ್ಕಳ ಗುಂಡ್ಯ ಡ್ಕದ   ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕೆ ಸೇರಿದ್ದರು. 

ಹತ್ಯೆಗೆ ಸಂಚು ರೂಪಿಸಿದ್ದ
ಆರೋಪಿ ಸಂತೋಷ್‌ ಪೂಜಾರಿ ಆಕೆಯ ಕೊಲೆಗೆ ಜ. 27ರಂದು ಸಂಚು ನಡೆಸಿದ್ದ. ಅಂದು ಕೆಲಸ ಮುಗಿಸಿ ಕಾರ್ಕಳದಿಂದ ತೆಳ್ಳಾರ್‌ ಮೂಲಕ ಹೆರ್ಮುಂಡೆಗೆ ತೆರಳುತ್ತಿದ್ದಾಗ ಸ್ವರ್ಣಾ ನದಿ ದಾಟುತ್ತಿದ್ದಂತೆ ಹಿಂದಿನಿಂದ ಬಂದು ಆಕೆಯನ್ನು ಹಿಡಿದುಕೊಂಡಿದ್ದಾನೆ. ಆಕೆ ಬಿಡಿಸಿಕೊಳ್ಳಲು ಯತ್ನಿಸಿದಾಗ ತಾನು ತಂದಿದ್ದ ಕತ್ತಿಯಿಂದ ಕೈ ಮತ್ತು ಕಾಲಿಗೆ ಯದ್ವಾತದ್ವಾ ಕಡಿದು ಪರಾರಿಯಾಗಿದ್ದಾನೆ. ಮುಂಬಯಿಯಲ್ಲಿ ಹೊಟೇಲ್‌ ಉದ್ಯೋಗಿಯಾಗಿದ್ದ ಆತ ಯಾವಾಗ ಊರಿಗೆ ಬಂದಿದ್ದ ಎಂಬುದು ತಿಳಿದಿಲ್ಲ.

ಬಿದ್ದಲ್ಲಿಂದಲೇ ಅಣ್ಣನಿಗೆ ಫೋನ್‌
 ಗಂಭೀರ ಗಾಯಗೊಂಡು ಬಿದ್ದಲ್ಲಿಂದಲೇ ಆಕೆ  ಅಣ್ಣನಿಗೆ ಫೋನ್‌ ಮೂಲಕ ವಿಷಯ ತಿಳಿಸಿದ್ದಾಳೆ. ತನ್ನ ತುಂಡಾದ ಕೈ ಬೆರಳುಗಳಿಂದ ಬ್ಯಾಗ್‌ನಲ್ಲಿದ್ದ ಮೊಬೈಲ್‌ ತೆಗೆಯಲು ಕೂಡ ಸಾಧ್ಯವಾಗಲಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅನುಶ್ರೀ ಅಣ್ಣ ತನ್ನ ಗೆಳೆಯನ ಜತೆಗೆ ಕಾರಿನಲ್ಲಿ ಆಕೆಯನ್ನು ಕಾರ್ಕಳದ ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರೆಗೆ ಸಾಗಿಸಿದ್ದಾರೆ. 

ಒಲ್ಲದ ಮನಸ್ಸಿನಲ್ಲೇ ಮದುವೆ
ದೂರದ ಸಂಬಂಧಿಯಾಗಿರುವ ಸಂತೋಷ್‌ 6 ವರ್ಷಗಳಿಂದ ಅನುಶ್ರೀಯನ್ನು ಪ್ರೀತಿಸುತ್ತಿದ್ದ. ಆದರೆ ಆತನನ್ನು ಮದುವೆಯಾಗಲು ಅನುಶ್ರೀಗೆ ಇಷ್ಟವಿರಲಿಲ್ಲ.  ಆಕೆಯನ್ನು ಮದುವೆ ಮಾಡಿಕೊಡುವಂತೆ ಮನೆಯವರಿಗೆ  ಬೆದರಿಕೆ ಹಾಕಿದ್ದ ಸಂತೋಷ್‌ ತನ್ನ ಪ್ರಯತ್ನದಲ್ಲಿ ಸಫ‌ಲನಾಗಿದ್ದ. ಬೆದರಿಕೆಗೆ ಮಣಿದ ಮನೆಯವರು ಮಗಳಿಗೆ ಸಮಸ್ಯೆಯಾಗಬಾರದು ಎಂದು ತಂಗಿಯನ್ನು ಮದುವೆಗೆ ಒಪ್ಪಿಸಿ  2017 ಮಾ. 23ರಂದು ವಿವಾಹ ನೆರವೇರಿಸಿದ್ದರು ಎಂದು ಅನುಶ್ರೀ ಅಣ್ಣ ಅರುಣ್‌ ಕುಮಾರ್‌ ತಿಳಿಸಿದ್ದಾರೆ.  

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.