ಆ.15ಕ್ಕೆ ಆರೋಗ್ಯವಿಮೆ ಯೋಜನೆ?


Team Udayavani, Feb 3, 2018, 8:23 AM IST

03-5.jpg

ನವದೆಹಲಿ: “ಮೋದಿ ಕೇರ್‌’ ಎಂದೇ ಹೇಳಲಾದ ರಾಷ್ಟ್ರೀಯ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿದ್ದರೂ, ಆಗಸ್ಟ್‌ 15 ಅಥವಾ ಅಕ್ಟೋಬರ್‌ 2ರಂದು ಜಾರಿಗೆ ಬರುವ ಸಾಧ್ಯತೆಯಿದೆ. 10 ಕೋಟಿ ಕುಟುಂಬಗಳಿಗೆ ಆರೋಗ್ಯ ವಿಮೆ ಒದಗಿಸುವ ಈ ಯೋಜನೆಗೆ 1000 ರೂ.ನಿಂದ 1200 ರೂ.ವರೆಗೆ ಪ್ರೀಮಿಯಂ ನಿಗದಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದು ರಾಜ್ಯಗಳ
ಸಹಭಾಗಿತ್ವದಲ್ಲಿ ಜಾರಿಗೆ ಬರಲಿದ್ದು, ಶೇ. 40ರಷ್ಟು ಮೊತ್ತವನ್ನು ರಾಜ್ಯ ಸರ್ಕಾರಗಳು ಭರಿಸಬೇಕಿರುತ್ತದೆ.

ಮೊದಲ ವರ್ಷ ಶೇ.50ರಷ್ಟು ಕುಟುಂಬಗಳಿಗೆ ವಿಮೆ ಒದಗಿಸಲಿದೆ ಎಂದು ಊಹಿಸಿದರೂ, ಸುಮಾರು 5-6 ಸಾವಿರ ಕೋಟಿ ರೂ. ವೆಚ್ಚ ಮಾಡಬೇಕಾಗುತ್ತದೆ. ಈ ಪೈಕಿ ಕೇಂದ್ರ ಸರ್ಕಾರಕ್ಕೆ ಸುಮಾರು 3 ಸಾವಿರ ಕೋಟಿ ರೂ. ಹೊರೆ ಬೀಳುವ ಸಾಧ್ಯತೆಯಿದೆ. ಈ ವೆಚ್ಚವನ್ನು ಸರಿದೂಗಿಸಿಕೊಳ್ಳಲು ಶೇ.1 ಹೆಚ್ಚುವರಿ ಸೆಸ್‌ ವಿಧಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ಈಗಾಗಲೇ ಚಾಲ್ತಿಯಲ್ಲಿರುವ ರಾಷ್ಟ್ರೀಯ ಸ್ವಾಸ್ಥ್ಯ ವಿಮೆ ಯೋಜನೆಯನ್ನು ಇದರಲ್ಲಿ ವಿಲೀನಗೊಳಿಸಲಾಗುತ್ತದೆ. ಪ್ರಸ್ತುತ 1ಲಕ್ಷ ರೂ. ವಾರ್ಷಿಕ ಆರೋಗ್ಯ ವಿಮೆ ಕವರೇಜ್‌ ಅನ್ನು ಈ ಯೋಜನೆ ಹೊಂದಿತ್ತು. 

ಹೇಗಿರಲಿದೆ ಯೋಜನೆ?: ಖಾಸಗಿ ವಿಮೆ ಕಂಪನಿಗಳು ಈ ಹಿಂದೆ ಒದಗಿಸುತ್ತಿದ್ದ ಮರುಪಾವತಿ ಮಾದರಿಯನ್ನು ಅನುಸರಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಂದರೆ ಮೊದಲು ವೈದ್ಯಕೀಯ ಸೇವೆ ಪಡೆದು, ನಂತರ ವೆಚ್ಚದ ಬಿಲ್‌ ಸಲ್ಲಿಸಿದರೆ, ಮರುಪಾವತಿ ಮಡಲಾಗುತ್ತದೆ. ಆದರೆ ಈ ವಿಧಾನದಲ್ಲಿ ತೊಡಕುಗಳು ಹಾಗೂ ದುರ್ಬಳಕೆ ಅವಕಾಶವಿದೆ. ಹಾಗಾಗಿ, ಇದರ ಬದಲಿಗೆ ವಿಮೆ ಅಥವಾ
ಟ್ರಸ್ಟ್‌ ವಿಧಾನದಲ್ಲಿ ವಿಮೆಯನ್ನು ಜಾರಿಗೆ ತರಲಾಗುತ್ತದೆ ಎಂದು ವಿತ್ತ ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.

ವಿಮೆ ವಿಧಾನದಲ್ಲಿ ಜಾರಿಗೆ ತಂದರೆ ಪ್ರೀಮಿಯಂ ಮೊತ್ತ ಕಡಿಮೆ ಇರಲಿದೆ. ಸರ್ಕಾರ ಟೆಂಡರ್‌ ಕರೆದು ಖಾಸಗಿ ಅಥವಾ ಸರ್ಕಾರಿ ವಿಮೆ ಕಂಪನಿಗಳಿಗೆ ಜವಾಬ್ದಾರಿ ನೀಡಲಿದೆ. ಇದರಲ್ಲಿ ಯಾವ ಸಂಸ್ಥೆ ಕಡಿಮೆ ಪ್ರೀಮಿಯಂ ಪ್ರಸ್ತಾಪಿಸುತ್ತದೆಯೋ ಆ ಕಂಪನಿಗೆ ಹೊಣೆ ನೀಡಲಾಗುತ್ತದೆ. ಇದರಿಂದ ಸರ್ಕಾರ ಯೋಜನೆ ಜಾರಿಗೆ ವೆಚ್ಚ ಮಾಡುವ ಅಗತ್ಯವಿರುವುದಿಲ್ಲ. ಅಲ್ಲದೆ ದೇಶದ ಎಲ್ಲ ಆಸ್ಪತ್ರೆಗಳನ್ನೂ ಈ ವಿಮೆ ವ್ಯಾಪ್ತಿಗೆ ತರುವುದು ಸುಲಭ.

ಇನ್ನೊಂದೆಡೆ ಟ್ರಸ್ಟ್‌ ಆಧಾರದಲ್ಲಿ ಯೋಜನೆ ಜಾರಿಗೊಳಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಡಿಯಲ್ಲಿ ಟ್ರಸ್ಟ್‌ ಸ್ಥಾಪಿಸಲಾಗುತ್ತದೆ. ಈ ಟ್ರಸ್ಟ್‌ಗಳು ವಿಮೆ ಕಂಪನಿಗಳಂತೆಯೇ ಕಾರ್ಯನಿರ್ವಹಿಸಲಿವೆ. ಆದರೆ ಇದು ಜಾರಿಗೊಳಿಸುವ ವೆಚ್ಚವನ್ನು ಸರ್ಕಾರ ಹೊರಬೇಕಿರುತ್ತದೆ. ಇನ್ನೊಂದೆಡೆ ವಿಮೆಯ ಪ್ರೀಮಿಯಂನಿಂದ ಸಂಗ್ರಹಿಸಿದ ಮೊತ್ತವನ್ನು ಸರ್ಕಾರ ಇತರ ಯೋಜನೆಗಳಲ್ಲಿ ಹೂಡಿಕೆ ಮಾಡಬಹುದಾಗಿದೆ. ಆದರೆ ಕಾರ್ಯನಿರ್ವಹಣೆ ವೆಚ್ಚ ಈ ವಿಧಾನದಲ್ಲಿ ಹೆಚ್ಚಿರುವುದರಿಂದ ಜನರಿಗೆ ಪ್ರೀಮಿಯಂ ಮೊತ್ತ ಹೆಚ್ಚುವ ಸಾಧ್ಯತೆ ಇರಲಿದೆ.

ಶೈಶವಾವಸ್ಥೆಯಲ್ಲಿದೆ ಯೋಜನೆ: ಯಾವ ವಿಧಾನದಲ್ಲಿ ಮತ್ತು ಹೇಗೆ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಸದ್ಯ ನೀತಿ ಆಯೋಗ ಮತ್ತು ಆರೋಗ್ಯ ಸಚಿವಾಲಯ ಈ ಬಗ್ಗೆ ಸಮಾಲೋಚನೆ ನಡೆಸುತ್ತಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಪ್ರಸ್ತಾವನೆ ಸಿದ್ಧವಾಗಲಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.