ಸ್ತ್ರೀಶಕ್ತಿ ಸಜ್ಜುಗೊಳಿಸಿದ್ದರು ನೇತಾಜಿ


Team Udayavani, Feb 3, 2018, 12:15 PM IST

gul-11.jpg

ವಾಡಿ: ಭಾರತ ಸ್ವಾತಂತ್ರ ಚಳವಳಿ ಗೆಲ್ಲಲು ನೇತಾಜಿ ಸುಭಾಶ್ಚಂದ್ರ ಬೋಸ್‌ ಸ್ತ್ರೀಶಕ್ತಿಯನ್ನು ಸಜ್ಜುಗೊಳಿಸುವ ಮೂಲಕ ಕ್ರಾಂತಿಗೆ ಕರೆನಿಡಿದ್ದರು ಎಂದು ಎ.ಐ.ಡಿ.ವೈ.ಒ ರಾಜ್ಯಾಧ್ಯಕ್ಷೆ ಎಂ. ಉಮಾದೇವಿ ಹೇಳಿದರು.

ಪಟ್ಟಣದ ಉರುಸ್‌ ಮಹಲ್‌ನಲ್ಲಿ ಎಐಡಿಎಸ್‌ಒ, ಎಐಡಿವೈಒ ಹಾಗೂ ಆವಿಷ್ಕಾರ ಸಂಘಟನೆಗಳು ಏರ್ಪಡಿಸಿದ್ದ ನೇತಾಜಿ ಸುಭಾಶ್ಚಂದ್ರ ಬೋಸ್‌ ಅವರ 121ನೇ ಜಯಂತಿ ನಿಮಿತ್ತದ ಸಾಂಸ್ಕೃತಿಕ ಜನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳವಳಿಯಲ್ಲಿ ಮಹಿಳೆಯರನ್ನು ಹುರಿದುಂಬಿಸಲು ಮಹಿಳೆಯರಿಗಾಗಿ ಝಾನ್ಸಿ ರಾಣಿ ರೆಜಿಮೆಂಟ್‌ ಸ್ಥಾಪಿಸಿದ್ದು ಹೋರಾಟಕ್ಕೆ ದೊಡ್ಡ ಶಕ್ತಿ ತಂದು ಕೊಟ್ಟಿತ್ತು ಎಂದರು.

ಇವತ್ತು ನಮ್ಮ ದೇಶದಲ್ಲಿ ಧರ್ಮ ಮತ್ತು ಜಾತಿ ಗಡಿಗಳನ್ನು ಮೀರಿ ಎಲ್ಲ ಜನರನ್ನು ಕಾಡುವ ಆರ್ಥಿಕ ಸಮಸ್ಯೆಗಳ ಬಗ್ಗೆ ಒತ್ತಿ ಹೇಳಬೇಕಾದ ಅವಶ್ಯಕತೆ ಇದೆ. ಬಡತನ, ಹಸಿವು, ನಿರುದ್ಯೋಗ, ಅನಕ್ಷರತೆ, ಅನಾರೋಗ್ಯ, ದುಬಾರಿ ತೆರಿಗೆ ಮತ್ತು ಸಾಲಬಾಧೆಯಂತ ಜ್ವಲಂತ ಸಮಸ್ಯೆಗಳು ಬಗೆಹರಿಯಬೇಕೆಂದರೆ ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕೆಂಬ ನೇತಾಜಿಯವರ ಚಿಂತನೆ ಸಾಕಾರಗೊಳಿಸಬೇಕಾಗಿದೆ ಎಂದು ಹೇಳಿದರು.

ನಮ್ಮನ್ನು ನವಯುಗದ ಗುಲಾಮರನ್ನಾಗಿಟ್ಟುಕೊಳ್ಳಲು ದೇಶದ ಬಂಡವಾಳಶಾಹಿಗಳು, ಆಳ್ವಿಕರು ನಡೆಸುತ್ತಿರುವ ಕುತಂತ್ರಗಳನ್ನು ಮೀರಿ, ಅನ್ಯಾಯಗಳ ವಿರುದ್ಧ ನಿರಂತರ ಹೋರಾಟ ಬೆಳೆಸುತ್ತ, ನೇತಾಜಿ, ಭಗತ್‌ಸಿಂಗ್‌, ಖುದಿರಾಮ ಭೋಸ್‌ ಮುಂತಾದ ಲಕ್ಷಾಂತರ ಕ್ರಾಂತಿಕಾರಿಗಳು ಕಂಡ ಶೋಷಣಾರಹಿತ ಸಮಾಜದ ಕನಸನ್ನು ನನಸು ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಎಐಡಿಎಸ್‌ಒ ಕಾರ್ಯದರ್ಶಿ ಮಲ್ಲಿನಾಥ ಹುಂಡೆಕಲ್‌ ಮಾತನಾಡಿದರು.

ಪಟ್ಟಣದ ಹಿರಿಯ ವೈದ್ಯ ಡಾ| ಎಸ್‌.ವಿ. ಇಂಗಳೇಶ್ವ ಮುಖ್ಯಅತಿಥಿಯಾಗಿದ್ದರು. ಎ.ಡಿ.ವೈ.ಒ ಕಾರ್ಯದರ್ಶಿ ಶರಣು ವಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಎ.ಐ.ಡಿ.ಎಸ್‌.ಒ ಸ್ಥಳೀಯ ಕಾರ್ಯದರ್ಶಿ ಮಲ್ಲಿನಾಥ ಹುಂಡೆಕಲ್‌ ಮಾತನಾಡಿದರು. ಎ.ಐ.ಡಿ.ವೈ.ಒ ಸ್ಥಳೀಯ ಕಾರ್ಯದರ್ಶಿ ಶರಣು ವಿ.ಕೆ. ಅಧ್ಯಕ್ಷತೆ ವಹಿಸಿದ್ದರು.

ಎಸ್‌ಯುಸಿಐ ಸ್ಥಳೀಯ ಸಮಿತಿ ಕಾರ್ಯದರ್ಶಿ ಆರ್‌. ಕೆ. ವೀರಭದ್ರಪ್ಪ, ಎಐಡಿಎಸ್‌ಒ ಅಧ್ಯಕ್ಷ ಶರಣು ಹೇರೂರ, ಗುಂಡಣ್ಣ ಎಂ.ಕೆ., ರಾಘವೇಂದ್ರ ಅಲ್ಲಿಪುರ, ವೀರಭದ್ರಪ್ಪ ಕೇಶ್ವರ, ಶಿವಕುಮಾರ ಆಂದೋಲಾ, ಮಲ್ಲಣ್ಣ ದಂಡಬಾ, ಶರಣು ದೋಶಟ್ಟಿ. ಶ್ರೀ ಶರಣ ಹೊಸಮನಿ, ಗೌತಮ ಪರತೂರಕರ, ಆರ್‌.ಜಿ. ವೆಂಕಟೇಶ, ರಾಜು ಒಡೆಯರ, ದೌಲಪ್ಪ ದೊರೆ, ಶ್ರೀಶೈಲ ಕೆಂಚಗುಂಡಿ ಪಾಲ್ಗೊಂಡಿದ್ದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶರತ್‌ ಚಂದ್ರ ಚಟರ್ಜಿಯವರ ಕಥೆಯಾಧಾರಿತ ಮಹೇಶ ನಾಟಕ, ನೇತಾಜಿ ಜೀವನ ಹೋರಾಟ ರೂಪಕ, ಕೋಲಾಟ ಪ್ರದರ್ಶನವಾಯಿತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.