ಅಣ್ಣ, ಅತ್ತಿಗೆಯನ್ನು ಕೊಂದು ಆತ್ಮಹತ್ಯೆ :ಆಸ್ತಿ ವಿವಾದ ಕಾರಣ


Team Udayavani, Feb 4, 2018, 10:21 AM IST

5-aa.jpg

ಮಡಿಕೇರಿ:  ಆಸ್ತಿ ಕಲಹದ ಹಿನ್ನೆಲೆಯಲ್ಲಿ ಅಣ್ಣ ಮತ್ತು  ಅತ್ತಿಗೆಯನ್ನು ಗುಂಡಿಕ್ಕಿ ಕೊಂದು ವ್ಯಕ್ತಿ ಯೋರ್ವ ಆತ್ಮಹತ್ಯೆ ಮಾಡಿಕೊಂಡ  ಆಘಾತಕಾರಿ ಘಟನೆ ಮೂರ್ನಾಡುವಿನ ಎಂ. ಬಾಡಗ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಮೂರ್ನಾಡು ಎಂ.ಬಾಡಗ ನಿವಾಸಿ, ಪ್ರಸ್ತುತ  ಮೈಸೂರಿನಲ್ಲಿ ವಾಸವಿದ್ದ ಮಾಜಿ ಸೈನಿಕ ಪಳಂಗಿಯಂಡ ಉತ್ತಪ್ಪ (62)ನೇ ಹಂತಕನಾಗಿದ್ದು,  ಪಳಂಗಿಯಂಡ ದೇವಯ್ಯ (66) ಹಾಗೂ ಅವರ ಪತ್ನಿ ಪ್ರೇಮಾ ದೇಚಮ್ಮ (53) ಗುಂಡೇಟಿಗೆ ಬಲಿಯಾದವರು.

ವಿವರ
ಸಹೋದರರಾಗಿದ್ದ ಪಳಂಗಿಯಂಡ ದೇವಯ್ಯ ಮತ್ತು ಉತ್ತಪ್ಪ ನಡುವೆ ಕುಟುಂಬದ ಆಸ್ತಿ ವಿಚಾರಕ್ಕೆ ಸಂಬಂಧಿಸಿ  ಎಂಟು ವರ್ಷಗಳಿಂದ  ವಿವಾದವಿತ್ತು. ಈ  ಕುರಿತು ಸಹೋದರರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿಂದೆಯೂ  ಹಲವು ಬಾರಿ ಇವರ ನಡುವೆ ಜಗಳ ನಡೆದಿತ್ತು. ಆಗ  ಕುಟುಂಬಸ್ಥರೇ  ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿದ್ದರು.

ಮೈಸೂರಿನಲ್ಲಿ ನೆಲೆಸಿದ್ದ ಉತ್ತಪ್ಪ ಕಾಫಿ, ಕರಿಮೆಣಸು ಕೊಯ್ಲು ಸಂದರ್ಭ ಮೂರ್ನಾಡಿಗೆ ಆಗಮಿಸಿ ಕೊಯ್ಲು  ಮುಗಿದ ಬಳಿಕ ಮೈಸೂರಿಗೆ ತೆರಳುತ್ತಿದ್ದರು.  

ಕೆಲವು ದಿನಗಳ ಹಿಂದೆ ಉತ್ತಪ್ಪ ಪತ್ನಿಯೊಂದಿಗೆ  ಮೂರ್ನಾಡಿಗೆ ಬಂದು ಕರಿಮೆಣಸು ಕೊಯ್ಲು ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ದೇವಯ್ಯ ಅವರ ಕಾಫಿ ತೋಟದ ಪಕ್ಕದಲ್ಲೇ ಸಹೋದರ ಉತ್ತಪ್ಪ ಅವರ ಕಾಫಿ ತೋಟವಿದ್ದು, ತೋಟಕ್ಕೆ  ಹೋಗುವ  ದಾರಿ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪವಿತ್ತು.  ಈ  ವಿವಾದದ ಕುರಿತು ದೇವಯ್ಯ ಅವರು ಜನವರಿ ಕೊನೆಯ ವಾರದಲ್ಲಿ  ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. 

ಶನಿವಾರ ಬೆಳಗ್ಗೆ ದೇವಯ್ಯ ಮತ್ತು ಅವರ ಪತ್ನಿ ಪ್ರೇಮಾ ದೇಚಮ್ಮ  ಕಾರ್ಮಿಕರೊಂದಿಗೆ  ಕಾಫಿ ಮತ್ತು ಕರಿಮೆಣಸು ಕೊಯ್ಲು ಮಾಡುತ್ತಿದ್ದುದ್ದನ್ನು ಗಮನಿಸಿದ ಉತ್ತಪ್ಪ  ಸುಮಾರು 9.15 ಗಂಟೆಗೆ ಏಕಾಏಕಿ  ಅವರ ಮೇಲೆ ಡಬ್ಬಲ್‌ ಬ್ಯಾರಲ್‌ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ದೇವಯ್ಯ ಅವರ ಹೊಟ್ಟೆಭಾಗಕ್ಕೆ ಮತ್ತು ಪ್ರೇಮಾ  ಅವರ ಬೆನ್ನಿಗೆ ಗುಂಡು ತಗುಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಅಲ್ಲಿಂದ  ಬಂದೂಕಿನೊಂದಿಗೆ ತೆರಳಿದ ಉತ್ತಪ್ಪ ತನ್ನ ಮನೆಯ ಮುಂದಿನ ಕಾಫಿ ತೋಟದಲ್ಲಿ ಸ್ವಯಂ  ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡರು.  ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ  ಬಿದ್ದಿದ್ದ ಆತನನ್ನು  ತತ್‌ಕ್ಷಣವೇ  ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತಾದರೂ   ಜೀವ ಉಳಿಸಲಾಗಲಿಲ್ಲ.

ಮಡಿಕೇರಿ ಗ್ರಾಮಾಂತರ ಪೊಲೀಸ್‌ ವೃತ್ತ ನಿರೀಕ್ಷಕ ಪ್ರದೀಪ್‌, ಉಪನಿರೀಕ್ಷಕ ಭೋಜಪ್ಪ, ಎಎಸ್‌ಐ ಅಲೆಕ್ಸ್‌ ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ಮಹಜರು ನಡೆಸಿದರು. ಕೃತ್ಯಕ್ಕೆ ಬಳಸಿದ ಡಬ್ಬಲ್‌ ಬ್ಯಾರಲ್‌ ಬಂದೂಕು, 3 ಸಿಡಿದ ಕಾಡತೂಸು ಮತ್ತು ಒಂದು ಜೀವಂತ ಕಾಡತೂಸನ್ನು  ವಶಕ್ಕೆ ಪಡೆದಿದ್ದಾರೆ. 

ಮೃತ ದೇವಯ್ಯ -ಪ್ರೇಮಾ ದಂಪತಿ ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.  ಉತ್ತಪ್ಪ ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. 

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ  ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.  

ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.