ನಾಗರಹೊಳೆ ಉದ್ಯಾನದಲ್ಲಿ ಕಾಡ್ಗಿಚ್ಚು
Team Udayavani, Feb 5, 2018, 6:15 AM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕಿಡಿಗೇಡಿಗಳು ಹಾಕಿದ್ದ ಬೆಂಕಿಗೆ ಸುಮಾರು 20 ಎಕರೆಗೂ ಹೆಚ್ಚು ಪ್ರದೇಶ ಬೆಂಕಿಗಾಹುತಿಯಾಗಿದ್ದು, ಸಕಾಲದಲ್ಲಿ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು- ವಿರಾಜಪೇಟೆ-ಕಣ್ಣಾನೂರು ಹೆದ್ದಾರಿ ಬದಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಗೇಟ್ ಬಳಿ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಕೊಟ್ಟಿದ್ದು, ಹುಣಸೂರು-ಆನೆಚೌಕೂರು ವಲಯ ಹಾಗೂ ಆನೆಚೌಕೂರು ಪ್ರಾದೇಶಿಕ ಅರಣ್ಯದ ಕೆಲ ಭಾಗಕ್ಕೂ ಸಹ ಬೆಂಕಿ ಹರಡಿತ್ತು. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣವೇ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಲಿಯೋಜನೆ ಕ್ಷೇತ್ರ ನಿರ್ದೇಶಕ ಮಣಿಕಂಠನ್, ಎ.ಸಿ.ಎಫ್.ಪ್ರಸನ್ನಕುಮಾರ್, ಆರ್.ಎಫ್.ಓ.ಗಳಾದ ಕಿರಣ್ಕುಮಾರ್, ಸುರೇಂದ್ರ ಅವರು ಸಿಬ್ಬಂದಿ ಜತೆ ಆಗಮಿಸಿ ಬೆಂಕಿ ನಂದಿಸಿದರು.
ಮೂರು ವರ್ಷದ ಹಿಂದೆಯೂ ಆನೆಚೌಕೂರು ವಲಯದ ಕಂಠಾಪುರ ಆನೆ ಶಿಬಿರದ ಅಕ್ಕಪಕ್ಕದಲ್ಲಿ ಕಿಡಿಗೇಡಿಗಳು ಬೆಂಕಿ
ಹಚ್ಚಿದ್ದರು. ಆಗ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿತ್ತು. ಕಳೆದ ವರ್ಷ ಬಂಡೀಪುರ ಉದ್ಯಾನದಲ್ಲಿ ಬೆಂಕಿ ನಂದಿಸುವ ವೇಳೆ ಅರಣ್ಯ ರಕ್ಷಕರೊಬ್ಬರು ಬೆಂಕಿಗೆ ಆಹುತಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ
Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ
MUST WATCH
ಹೊಸ ಸೇರ್ಪಡೆ
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.