ಸಂಪಾಜೆ: ಶಂಕಿತ ನಕ್ಸಲರಿಗೆ ಮುಂದುವರಿದ ಶೋಧ


Team Udayavani, Feb 5, 2018, 9:30 AM IST

coombing.jpg

ಸುಳ್ಯ: ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಕಡಮಕಲ್ಲು ಮೀಸಲು ಅರಣ್ಯ ಪ್ರದೇಶದ ಗುಡ್ಡೆಗದ್ದೆ ಯಲ್ಲಿ ಶುಕ್ರವಾರ ಸಂಜೆ ಮನೆಗಳಿಗೆ ಭೇಟಿ ನೀಡಿ ಆಹಾರ ಪದಾರ್ಥದೊಂದಿಗೆ ತೆರಳಿರುವ ಮೂವರು ಶಂಕಿತ ನಕ್ಸಲರ ಪತ್ತೆಗೆ ರವಿವಾರವೂ ಶೋಧ ಕಾರ್ಯ ಮುಂದುವರಿದಿದೆ.

ನಕ್ಸಲ್‌ ನಿಗ್ರಹ ದಳದ ಎರಡು ತಂಡಗಳು ಕೊಡಗು ಜಿಲ್ಲೆ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಿರತವಾಗಿವೆ. ರವಿವಾರ ಸಂಜೆ ತನಕವೂ ಶಂಕಿತ ನಕ್ಸಲರ ಸುಳಿವು ಲಭ್ಯವಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಶನಿವಾರ ರಾತ್ರಿ ಗುಡ್ಡೆಗದ್ದೆಯ 4 ಮನೆಗಳಿಗೆ ಬಂದಿದ್ದ ನಕ್ಸಲರು ಮನೆಯವರ ಬಳಿ ಹಂಚಿಕೊಂಡಿರುವ ಮಾಹಿತಿ ಆಧಾರದಲ್ಲಿ, ಶಿರಾಡಿಯ ಅಡ್ಡಹೊಳೆಯಲ್ಲಿ ಕಾಣಿಸಿಕೊಂಡವರೂ ಈ ಮೂವರೂ ಒಂದೇ ತಂಡದವರೇ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಅಡ್ಡಹೊಳೆ ಪರಿಸರದಲ್ಲಿ ಶೋಧ ನಡೆಯುತ್ತಿರುವುದರಿಂದ ತಾವು ಇತ್ತ ಬಂದಿರುವುದಾಗಿ ಈ ಮೂವರು ಮನೆ ಮಂದಿಯ ಬಳಿ ತಿಳಿಸಿದ್ದರು.

ಸುಬ್ರಹ್ಮಣ್ಯದತ್ತ ದೃಷ್ಟಿ
ಪ್ರಸ್ತುತ ಶಂಕಿತ ನಕ್ಸಲರು ಸಂಪಾಜೆ ಪರಿಸರದಿಂದ ಸುಬ್ರಹ್ಮಣ್ಯ ಅರಣ್ಯ ಭಾಗಕ್ಕೆ ನುಸುಳಿರುವ ಸಾಧ್ಯತೆ ಹೆಚ್ಚಿದೆ ಎಂದು ಪೊಲೀಸರು ಶಂಕಿಸಿದ್ದು, ಸಂಪಾಜೆ, ಸುಳ್ಯ, ಸುಬ್ರಹ್ಮಣ್ಯ ಅರಣ್ಯ ಭಾಗದಲ್ಲಿ ಕಟ್ಟೆಚ್ಚರ ಮುಂದು ವರಿಸಿದ್ದಾರೆ. ಸಂಪಾಜೆ ಗೇಟು ಸಹಿತ ಹಲವೆಡೆ ಅಪರಿಚಿತ ವಾಹನಗಳ ತಪಾಸಣೆ, ವ್ಯಕ್ತಿಗಳ ಓಡಾಟದ ಬಗ್ಗೆ ನಿಗಾ ಇಡಲಾಗಿದೆ. ಕಡಬ ತಾಲೂಕು ವ್ಯಾಪ್ತಿಗೆ ಸೇರಿರುವ ಸುಬ್ರಹ್ಮಣ್ಯ ಪ್ರದೇಶದ ಅರಣ್ಯಕ್ಕೆ ತೆರಳಿದ್ದಾರೆಯೇ ಅಥವಾ ಸಂಪಾಜೆ ಮೂಲಕ ಕರಿಕ್ಕೆಗೆ ಸಂಪರ್ಕ ಸಾಧಿಸಿ ಕೇರಳಕ್ಕೆ ತೆರಳಿರಬಹುದೇ ಎಂಬಿತ್ಯಾದಿಗಳ ಪ್ರಶ್ನೆಗಳೂ ಹುಟ್ಟಿಕೊಂಡಿವೆ.

ತಂಡದಲ್ಲಿ ವಿಕ್ರಂ ಗೌಡ
ಶಂಕಿತ ನಕ್ಸಲರು ಆಹಾರ ಪಡೆದು ತೆರಳಿರುವ ಗುಡ್ಡೆ ಗದ್ದೆಯ ಮನೆಗಳ ಮಂದಿಗೆ ಪೊಲೀಸರು ನಕ್ಸಲರ ಭಾವಚಿತ್ರಗಳನ್ನು ತೋರಿಸಿದಾಗ ಅದರಲ್ಲಿರುವ ಓರ್ವ ತಮ್ಮಲ್ಲಿಗೆ ಬಂದಿರುವ ವಿಕ್ರಂ ಗೌಡ ಎಂದು ಗುರುತು ಪತ್ತೆಹಚ್ಚಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಕೆಲವರ ಪ್ರಯತ್ನಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸೇರಿದಂತೆ ಹಲವು ಗಂಭೀರ ಆರೋಪಗಳು ವಿಕ್ರಮ್‌ ಗೌಡನ ಮೇಲಿರುವುದರಿಂದ ಆತನ ಪತ್ತೆಗೆ ಪೊಲೀಸರೂ ಹದ್ದಿನಗಣ್ಣಿಟ್ಟಿದ್ದಾರೆ. ಸುರಕ್ಷಿತ ಸ್ಥಳವನ್ನು ಅರಸಿ ಆತ ತನ್ನ ಸಹಚರರೊಂದಿಗೆ ದಕ್ಷಿಣ ಕನ್ನಡ, ಕೊಡಗು ವ್ಯಾಪ್ತಿಯ ಅರಣ್ಯಕ್ಕೆ ನುಸುಳಿರಬಹುದು ಎಂಬ ಸಂಶಯ ಮೂಡಿದೆ.

ಆಹಾರದ ಕೊರತೆ
ರಾಜ್ಯ ಹಾಗೂ ಹೊರ ರಾಜ್ಯದ ನಾನಾ ಭಾಗಗಳಲ್ಲಿ ನಕ್ಸಲ್‌ ನಿಗ್ರಹ ಚಟುವಟಿಕೆ ತೀವ್ರಗೊಂಡಿರುವ ಪರಿಣಾಮ ಭೀತರಾಗಿರುವ ನಕ್ಸಲರು ನಿಂತಲ್ಲಿ ನಿಲ್ಲದೇ ಕಾಡಲ್ಲೇ ಅಲೆದಾಡುವ ಸ್ಥಿತಿ ನಿರ್ಮಾಣ ಆಗಿದೆ. ಇದರಿಂದಾಗಿ ಅವರನ್ನು ಆಹಾರದ ಕೊರತೆ ಕಾಡುತ್ತಿದ್ದು, ಪೊಲೀಸರ ಸಂಚಾರ ಹಾಗೂ ಜನವಸತಿ ಕಡಿಮೆ ಇರುವ ಭಾಗದ ಮನೆಗಳಿಗೆ ತೆರಳಿ ಆಹಾರ ಸಾಮಗ್ರಿ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ತಿಂಗಳ ಅಂತರದಲ್ಲಿ ಎರಡನೇ ಬಾರಿ ನಕ್ಸಲರು ಕಾಣಿಸಿಕೊಂಡಿರುವುದರಿಂದ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಜನರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಗರಿಷ್ಠ  ಜಾಗೃತಿ
ಕಾಸರಗೋಡು: ಮಡಿಕೇರಿ ತಾಲೂಕಿನ ಕೊಯನಾಡು, ಸುಳ್ಯ ಮತ್ತು ಸುಬ್ರಹ್ಮಣ್ಯ ಅರಣ್ಯ ಪ್ರದೇಶಗಳಲ್ಲಿ ನಕ್ಸಲರನ್ನು ಕಂಡಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶವಾದ ಕಾಸರಗೋಡು ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಗರಿಷ್ಠ ಎಚ್ಚರ ವಹಿಸಿದ್ದಾರೆ.

ಟಾಪ್ ನ್ಯೂಸ್

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

19

Sullia: ವಾಹನಗಳಿಗೆ ಕಾರು ಢಿಕ್ಕಿ; ಹಾನಿ

17

Belthangady: ಅಪಘಾತದ ಗಾಯಾಳು ಯುವಕ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

43

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಸಿದ್ಧ: ರಾಜಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.