ಸಾರಾ, ವಿನಯಾಪ್ರಸಾದ್‌ಗೆ ಪ್ರಶಸ್ತಿ, ಪುರಸ್ಕಾರ ಪ್ರದಾನ


Team Udayavani, Feb 5, 2018, 9:35 AM IST

sara.jpg

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಬ್ಬಕ್ಕ ಉತ್ಸವ ಸಮಿತಿಯ ಆಶ್ರಯದಲ್ಲಿ ರವಿವಾರ ಸೋಮೇಶ್ವರ-ಕೊಲ್ಯದ ನಾಗಮಂಡಲ ಮೈದಾನದಲ್ಲಿ ನಡೆದ ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ 2017-18ರ ಅಬ್ಬಕ್ಕ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್‌ ಅವರಿಗೆ ಮತ್ತು ಅಬ್ಬಕ್ಕ ಪುರಸ್ಕಾರವನ್ನು ಹಿರಿಯ ಕಲಾವಿದೆ ವಿನಯಾ ಪ್ರಸಾದ್‌ ಅವರಿಗೆ ನೀಡಿ ಗೌರವಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಉಮಾಶ್ರೀ ಅವರು ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರವನ್ನು ಪ್ರದಾನ ಮಾಡಿದರು. ಉಳ್ಳಾಲದ ರಾಣಿ ಅಬ್ಬಕ್ಕ ನಾಡಿಗೆ ಸ್ವಾಭಿಮಾನವನ್ನು ಕಟ್ಟಿಕೊಟ್ಟ  ಧೀಮಂತ ಮಹಿಳೆಯಾಗಿದ್ದು, ಅವರ ಕಾಲದಲ್ಲಿ ಇದ್ದ ಧರ್ಮ ಸಮನ್ವಯ ಪ್ರಸ್ತುತ ದಿನಗಳಲ್ಲೂ ಮುಂದುವರಿಯಬೇಕಾಗಿದೆ; ಸೌಹಾರ್ದಯುತ, ಸ್ವಸ್ಥ ಸಮಾಜ ಪುನರುತ್ಥಾನವಾಗಬೇಕಾಗಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

ರಂಗಮಂದಿರಕ್ಕೆ  8 ಕೋ. ರೂ.
ವೀರರಾಣಿ ಅಬ್ಬಕ್ಕನ ಹೆಸರಿನಲ್ಲಿ ಜಿಲ್ಲಾಮಟ್ಟದ ರಂಗಮಂದಿರ ಮತ್ತು ಅಬ್ಬಕ್ಕ ಭವನ ನಿರ್ಮಾಣಕ್ಕೆ 8 ಕೋ.ರೂ.ಗಳನ್ನು ಸರಕಾರ ಬಿಡುಗಡೆ ಮಾಡಿದೆ. ಇಲ್ಲಿನ ಸಚಿವರ ಒತ್ತಾಸೆಯ ಮೂಲಕ ಈ ಅನುದಾನ ಬಿಡುಗಡೆಗೊಂಡಿದ್ದು, ಅವರ ಅಭಿವೃದ್ಧಿಪರ ದೂರದೃಷ್ಟಿಯ ಕಾರಣದಿಂದ ಬೇಡಿಕೆಗೆ ಇಲ್ಲವೆನ್ನದೆ ನೀಡಲಾಗಿದೆ ಎಂದು ಸಚಿವೆ ಉಮಾಶ್ರೀ ತಿಳಿಸಿದರು.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಲೋಕಾಯುಕ್ತ ನ್ಯಾ| ಸಂತೋಷ್‌ ಹೆಗ್ಡೆ ಮಾತನಾಡಿದರು.

ಮೇಯರ್‌ ಕವಿತಾ ಸನಿಲ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಮೋಹನ್‌ ಶೆಟ್ಟಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್‌ ಮಹಮ್ಮದ್‌, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಹಿರಿಯ ಸಾಹಿತಿ ಬಿ.ಎನ್‌. ಸುಮಿತ್ರಾಬಾಯಿ, ಉಳ್ಳಾಲ ನಗರಸಭಾ ಅಧ್ಯಕ್ಷ ಕುಂಞಿಮೋನು, ಸಮಾಜ ಸೇವಕ ಹೈದರ್‌ ಪರ್ತಿಪ್ಪಾಡಿ, ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್‌, ಎಫ್‌ಕೆಸಿಸಿಐ ಹಿರಿಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಛೋಟಾ ಮಂಗಳೂರು ಲಯನ್ಸ್‌ ಕ್ಲಬ್‌ ಅಧ್ಯಕ್ಷ ಡಾ| ಶಿವಕುಮಾರ್‌ ಮಗದ, ಗ್ರಾ.ಪಂ. ಸದಸ್ಯ ದೀಪಕ್‌ ಪಿಲಾರ್‌, ನ್ಯಾಯವಾದಿ ಗಂಗಾಧರ್‌ ಉಳ್ಳಾಲ, ಸೂರಜ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮಂಜುನಾಥ್‌ ರೇವಣRರ್‌, ವಿದುಷಿ ರಾಜಶ್ರೀ ಉಳ್ಳಾಲ, ಕೌನ್ಸಿಲರ್‌ ರಝಿಯಾ ಇಬ್ರಾಹಿಂ ಉಪಸ್ಥಿತರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಹಾಗೂ ಶಾಂತಲಾ ನಾಟ್ಯ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮೋಹನ್‌ ಕುಮಾರ್‌ ಅವರನ್ನು ಸಮ್ಮಾನಿಸಲಾಯಿತು. 

ಉತ್ಸವ ಸಮಿತಿ ತಾರಾನಾಥ ರೈ, ಪಿ.ಡಿ. ಶೆಟ್ಟಿ, ತ್ಯಾಗಂ ಹರೇಕಳ, ನಿರ್ಮಲ್‌ ಕುಮಾರ್‌, ಪುಷ್ಕಳ್‌ ಕುಮಾರ್‌, ಲಕ್ಷ್ಮೀನಾರಾಯಣ ರೈ ಹರೇಕಳ, ಸುವಾಸಿನಿ ಬಬ್ಬುಕಟ್ಟೆ, ದೇವಕಿ ಆರ್‌. ಉಳ್ಳಾಲ್‌, ರತ್ನಾವತಿ ಬೈಕಾಡಿ, ಪ್ರಭಾಕರ ಜೋಗಿ ಉಪಸ್ಥಿತರಿದ್ದರು.

ದಿನಕರ ಉಳ್ಳಾಲ ಸ್ವಾಗತಿಸಿ ಪ್ರಸ್ತಾವನೆಗೈದರು. ಧನಲಕ್ಷ್ಮೀ ಗಟ್ಟಿ ಮತ್ತು ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ಆನಂದ ಅಸೈಗೋಳಿ ವಂದಿಸಿದರು.

ರಾಣಿ ಅಬ್ಬಕ್ಕ ಪ್ರಗತಿಪರ ಚಿಂತನೆ ಗಳನ್ನು ಮೈಗೂಡಿಸಿಕೊಂಡಿದ್ದರು. ಎಲ್ಲ ಧರ್ಮ ದವರನ್ನು ಸೇರಿಸಿಕೊಂಡು ವ್ಯಾಪಾರ ಒಪ್ಪಂದಗಳನ್ನು ಮಾಡಿದಾಕೆ. ಸಮಾಜದ ಅಭಿವೃದ್ಧಿಗಾಗಿ ತನ್ನ ಪತಿ ಮತ್ತು ಪೋರ್ಚುಗೀಸರ ವಿರುದ್ಧ  ಹೋರಾಡಿದ ದಿಟ್ಟ ಮಹಿಳೆ.
– ಸಾರಾ ಅಬೂಬಕ್ಕರ್‌

ಟಾಪ್ ನ್ಯೂಸ್

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.