ಮೀರಾರೋಡ್‌ ಪಲಿಮಾರು ಮಠದ : ಪ್ರತಿಷ್ಠಾ ವರ್ಧಂತಿ ಉತ್ಸವ


Team Udayavani, Feb 5, 2018, 5:01 PM IST

2588.jpg

ಮುಂಬಯಿ: ಮೀರಾರೋಡ್‌ ಪೂರ್ವ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯ ಆರನೇ ಪ್ರತಿಷ್ಠಾ ವರ್ಧಂತಿ ಉತ್ಸವವು ಫೆ. 1ರಂದು ಮಠದ ಆವರಣದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೈಂಕರ್ಯಗಳೊಂದಿಗೆ ಜರಗಿತು. ಪಲಿಮಾರು ಮಠದ ಟ್ರಸ್ಟಿ ಹಾಗೂ ಪ್ರಬಂಧಕ ವಿದ್ವಾನ್‌ ರಾಧಾಕೃಷ್ಣ ಭಟ್‌ ಅವರು ರಥೋತ್ಸವ ಮತ್ತು ಬಲಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಊರ, ಪರವೂರ ಬಂಧು-ಮಿತ್ರರನ್ನು ಊರಿನ ಉತ್ಸವಗಳು ಒಂದುಗೂಡಿಸುತ್ತದೆ. ಸಮಾನ ಮನಸ್ಕರಾಗಿ ಎಳೆಯುವ ತೇರು ಭಕ್ತಿಯೊಂದಿಗೆ ಒಗ್ಗಟ್ಟಿನ ಶಕ್ತಿಯನ್ನು ಸೂಚಿಸುತ್ತವೆ. ತುಳುನಾಡಿನಾದ್ಯಂತ ಪ್ರತಿಯೊಂದು ಊರಿನ ಜಾತ್ರೆಗಳು ಸಾಮರಸ್ಯದ ಪ್ರತಿಬಿಂಬಿವಾಗಿದೆ ಎಂದು ಶುಭಹಾರೈಸಿದರು.

ಮೀರಾರೋಡ್‌ ಪಲಿಮಾರು ಮಠದ ಬಲಿ ಉತ್ಸವ ಮೂರ್ತಿಯೊಂದಿಗೆ ರಥವು ನಗರ ಪ್ರದಕ್ಷಿಣೆಗೈದು ಶ್ರೀ ಬಾಲಾಜಿ ಸನ್ನಿಧಿಯನ್ನು ತಲುಪಿತು. ಬಳಿ ಉತ್ಸವ ಮೂರ್ತಿಯೊಂದಿಗೆ ಸುರೇಶ್‌ ಭಟ್‌ ಕುಂಟಾಡಿ ಅವರು ಪ್ರದಕ್ಷಿಣೆಗೈದರು.

ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯ ಪ್ರಧಾನ ಅರ್ಚಕ ಜಯರಾಮ ಭಟ್‌, ಗೋಪಾಲ್‌ ಭಟ್‌, ಉದಯ ಶಂಕರ್‌ ಭಟ್‌, ದೇವಿಪ್ರಸಾದ್‌ ಭಟ್‌, ಶ್ರೀಶ ಭಟ್‌, ವಿಷ್ಣು ಭಟ್‌, ವೆಂಕಟರಮಣ ಭಟ್‌, ಪುಂಡರಿಕಾಕ್ಷ ಉಡುಪ ಅವರ ಪೌರೋಹಿತ್ಯದಲ್ಲಿ ಬೆಳಗ್ಗೆ ಶುದ್ಧ ಪುಣ್ಯಾಹ ಬ್ರಹ್ಮಕಲಶ, ಪ್ರತಿಷ್ಠಾ ಪ್ರಧಾನ ಹವನ, ಶ್ರೀ ಮಹಾನಾರಾಯಣ ಅಷ್ಟಾಕ್ಷರ ಮಂಗಳ ಹವನ, ಮಹಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ಅಪರಾಹ್ನ ಮತ್ತು ರಾತ್ರಿ ಮಹಾಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನೆರವೇರಿತು.

ಸಂಜೆ ಬಲಿ ಉತ್ಸವ ಪ್ರಾರಂಭಗೊಂಡು ಮಹಾತೋಭಾರ, ಶ್ರೀ ಬಾಲಾಜಿ ಸನ್ನಿಧಿಯ ಪರಿವಾರ ದೇವರಿಗೆ ವಿಶೇಷ ಪೂಜೆ, ರಂಗಪೂಜೆ ಜರಗಿತು. ಬಾಲಾಜಿ ಭಜನ ಮಂಡಳಿಯ ಸದಸ್ಯರು, ಬಂಟ್ಸ್‌ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ಉಪಕಾರ್ಯಾಧ್ಯಕ್ಷ ಮುನ್ನಲಾಯಿಗುತ್ತು ಸಚ್ಚಿದಾನಂದ ಶೆಟ್ಟಿ, ಮೀರಾರೋಡ್‌ ಶ್ರೀ ಶನೀಶ್ವರ ಚಾರಿಟೆಬಲ್‌ ಟ್ರಸ್ಟಿನ ಕಾರ್ಯದರ್ಶಿ ಗುಣಗಾಂತ್‌ ಶೆಟ್ಟಿ ಕರ್ಜೆ, ಸದ್ಗುರು ಭಜನ ಮಂಡಳಿಯ ರೂವಾರಿ ವಿಜಯ ಶೆಟ್ಟಿ, ರಾಜೇಶ್‌ ಶೆಟ್ಟಿ ಕಾಪು ಮೊದಲಾದವರು ಸಹಕರಿಸಿದರು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

 ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.