ಕಾಡುಪ್ರಾಣಿ ಹಾವಳಿಗೆ ಎಲ್‌ಇಡಿ ಬೆಳಕು ತಡೆ


Team Udayavani, Feb 7, 2018, 10:05 AM IST

kaduprani.jpg

ಮುಳ್ಳೇರಿಯ: ಕಾಡಾನೆ, ಕಾಡುಹಂದಿ ಹಾಗೂ ಇನ್ನಿತರ ಕಾಡುಪ್ರಾಣಿಗಳು ಈಗ ನೆಟ್ಟಣಿಗೆ ಕೈಪಂಗಳ ರಾಜಗೋಪಾಲರ ಕೃಷಿಭೂಮಿಗೆ ದಾಳಿ ನಡೆಸುವುದನ್ನು ನಿಲ್ಲಿಸಿವೆ. ಅರಣ್ಯದಂಚಿನ ತಮ್ಮ ಕೃಷಿಭೂಮಿಯ ಗಡಿಯುದ್ದಕ್ಕೆ ಅಲ್ಲಲ್ಲಿ ಅವರು ಸ್ಥಾಪಿಸಿರುವ ಎಲ್‌ಇಡಿ ಬಲ್ಬುಗಳ ಪ್ರಖರ ಬೆಳಕನ್ನು ಕಂಡು ಕಾಡುಪ್ರಾಣಿಗಳು ಪರಾರಿಯಾಗುತ್ತಿವೆ. 

ಬೆಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ನೆಟ್ಟಣಿಗೆ ಸಮೀಪದ ಕೈಪಂಗಳ ರಾಜಗೋಪಾಲ ಭಟ್‌ ಜಮೀನಿಗೆ ನುಗ್ಗಿ ಬೆಳೆ ಹಾಳು ಮಾಡುವ ಕಾಡುಪ್ರಾಣಿಗಳಿಂದ ರಕ್ಷಣೆ ಪಡೆಯಲು ಎಲ್‌ಇಡಿ ಬಲುºಗಳ ಉಪಕರಣವನ್ನು ಆವಿಷ್ಕರಿಸಿ ಕೃಷಿ ಭೂಮಿಯ ಗಡಿಯುದ್ದಕ್ಕೂ ಅಳವಡಿಸಿ, ಕಾಡುಪ್ರಾಣಿಗಳ ಉಪಟಳ ತಡೆಯಲು ಯಶಸ್ವಿಯಾಗಿದ್ದಾರೆ. ಇವರ ಈ ಆವಿಷ್ಕಾರ ಕೇರಳ ರಾಜ್ಯ ಅರಣ್ಯ ಇಲಾಖೆಯ ಪ್ರಶಂಸೆಗೂ ಪಾತ್ರವಾಗಿದೆ. ಸ್ವತಃ ಇಲಾಖೆಯೇ ಇವರಿಂದ ಈ ಸಾಧನಗಳನ್ನು ಖರೀದಿಸಿ ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಅರಣ್ಯದಂಚಿನ ಪ್ರದೇಶಗಳಲ್ಲಿ ಅಳವಡಿಸಿದ್ದು, ಯಶಸ್ಸು ಕಂಡಿದೆ. ಇನ್ನಷ್ಟು ಉಪಕರಣಗಳನ್ನು ಒದಗಿಸಿ ಕೊಡಲು ಬೇಡಿಕೆ ಸಲ್ಲಿಸಿದೆ.

ಕಾಡಿನಲ್ಲಿ ನೀರು, ಆಹಾರ ಲಭಿಸದಿದ್ದಾಗ ನಾಡಿಗೆ ನುಗ್ಗುವ ಕಾಡುಪ್ರಾಣಿಗಳಿಂದ ಕೃಷಿಭೂಮಿಯನ್ನು ರಕ್ಷಿಸಲು ಆವಿಷ್ಕರಿಸಿ, ನಡೆಸಿದ ಯಶಸ್ವಿ ಪ್ರಯೋಗ ಯಶಸ್ವಿಯಾಗಿದೆ ಎನ್ನುತ್ತಾರೆ ಕೈಪಂಗಳ ರಾಜಗೋಪಾಲ ಭಟ್‌.

ಎಲ್‌ಇಡಿ ಬೆಳಕಿನ ಮಾಯಾಜಾಲ
ಅರಣ್ಯ ಪ್ರದೇಶಗಳು ಕಡಿಮೆಯಾದಾಗ ಸಹಜವಾಗಿ ಸಿಗುವ ಆಹಾರ, ನೀರು ಸಿಗದೆ ಕಾಡುಪ್ರಾಣಿಗಳು ಕೃಷಿಭೂಮಿಯತ್ತ ಮುಖ ಮಾಡುತ್ತವೆ. ಹೀಗೆ ಸಂಚರಿಸುವ ಹಂದಿ, ಮಂಗ, ಕಾಡಾನೆ ಮೊದಲಾದವುಗಳು ಪ್ರಖರ ಪ್ರಭೆಯ ಬೆಳಕಿಗೆ ಹೆದರಿ ಹಿಮ್ಮೆಟ್ಟುತ್ತವೆ. ಈ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ವರ್ಷ ಕಾಲ ವಿವಿಧ ಕ್ರಿಯಾಶೀಲ ತಂತ್ರಜ್ಞಾನಗಳ ಅಳವಡಿಕೆಗೆ ಪ್ರಯತ್ನಿಸಿದ ರಾಜಗೋಪಾಲ ಭಟ್‌ ಕೊನೆಗೆ ಈ ಹೊಸ ಮಾದರಿಯ ಉಪಕರಣವನ್ನು ರೂಪಿಸಿದ್ದಾರೆ. 

ಕಾಡುಹಂದಿಗಳು ಸಾಮಾನ್ಯವಾಗಿ ತಲೆಬಗ್ಗಿಸಿ ಲಕ್ಷ್ಯದತ್ತ ಮುನ್ನುಗುವ ಕಾರಣ ಕಾಡುಹಂದಿಗಳು ಬರುವ ದಾರಿ ಯಲ್ಲಿ ಇದನ್ನು ಸುಮಾರು 29 ಸೆಂ.ಮೀ. ಎತ್ತರದಲ್ಲಿ ಅಳವಡಿಸಲಾಗುತ್ತದೆ. ಕಾಡಾನೆಗೆ 8 ಅಡಿ ಎತ್ತರದಲ್ಲಿ, ಕಾಡುಕೋಣಕ್ಕೆ 7 ಅಡಿ ಎತ್ತರದಲ್ಲಿ ಅಳವಡಿಸಲಾಗುತ್ತದೆ. 

50 ಮೀಟರ್‌ಗಳಷ್ಟು ದೂರಕ್ಕೆ ಪ್ರಭೆ ನೀಡುವ ಈ ಲೈಟ್‌ಗಳನ್ನು ರಾಜಗೋಪಾಲ್‌ ತಮ್ಮ ಅಡಿಕೆ, ತೆಂಗು, ಬಾಳೆ ಸಹಿತ ಸಂಪೂರ್ಣ ಕೃಷಿಭೂಮಿಯ ಸುತ್ತ ಕಳೆದ ಒಂದೂವರೆ ವರ್ಷದಿಂದ ಅಳವಡಿಸಿ ಯಶಸ್ವಿಯಾಗಿದ್ದಾರೆ. ಆ ಬಳಿಕ ಯಾವುದೇ ಕಾಡು ಪ್ರಾಣಿ ತಮ್ಮ ಕೃಷಿ ಭೂಮಿಯತ್ತ ಕಣ್ಣೆತ್ತಿಯೂ ನೋಡಿಲ್ಲ ಎಂದು ಹೆಮ್ಮೆಯಿಂದ ಹೇಳುತ್ತಾರೆ. ರಾಜಗೋಪಾಲ ಭಟ್‌ ಈ ಲೈಟುಗಳಿಗೆ ತಮ್ಮ ಮನೆಯಿಂದಲೇ ವಿದ್ಯುತ್‌ ಸಂಪರ್ಕ ನೀಡಿದ್ದಾರೆ. ಬ್ಯಾಟರಿ ಮತ್ತು ಸೋಲಾರ್‌ ಮೂಲಕವೂ ಕಾರ್ಯನಿರ್ವಹಿಸುವಂತೆ ಮಾಡಿದ್ದಾರೆ.

ಅರಣ್ಯ ಇಲಾಖೆಯಿಂದ ಮೆಚ್ಚುಗೆ, ಬೇಡಿಕೆ
ರಾಜಗೋಪಾಲ ಭಟ್‌ ಅವರ ಈ ಆವಿಷ್ಕಾರ ಕೇರಳ ರಾಜ್ಯ ಅರಣ್ಯ ಇಲಾಖೆಯ ಗಮನ ಸೆಳೆದಿದೆ. ಕಾಸರಗೋಡು ಜಿಲ್ಲಾ ಅರಣ್ಯಾಧಿಕಾರಿ (ಡಿ.ಎಫ್‌.ಒ.) ರಾಜೀವನ್‌ ಅವರು ಮಾಹಿತಿ ಪಡೆದು, ಸ್ವತಃ ಕೈಪಂಗಳಕ್ಕೆ ಆಗಮಿಸಿ ವೀಕ್ಷಿಸಿ 
ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಲಾಖೆಯು ಅತ್ಯಂತ ಹೆಚ್ಚು ಸಂಕಷ್ಟ ಅನುಭವಿಸುತ್ತಿರುವ ಕಾಡಾನೆ ದಾಳಿ ನಿಯಂತ್ರಣಕ್ಕಾಗಿ ಈ ಆವಿಷ್ಕಾರವನ್ನು ಬಳಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಕೆಲವು ತಿಂಗಳುಗಳ ಹಿಂದೆ ರಾಜಗೋಪಾಲ ಭಟ್‌ ಅವರಿಂದ ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಎಲ್‌ಇಡಿ ಬೆಳಕಿನ ಈ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಿ ಅಳವಡಿಸುವಲ್ಲಿ ಸಹಕರಿಸುವಂತೆ ಮನವಿ ಮಾಡಿದ್ದಾರೆ. 

ಎಲೆಕ್ಟ್ರಾನಿಕ್ಸ್‌ ಪದವೀಧರ 
ರಾಜಗೋಪಾಲ ಕೈಪಂಗಳ ಎಲೆಕ್ಟ್ರಾನಿಕ್ಸ್‌ ಪದವೀಧರ ರಾಗಿದ್ದು, ಹಲವು ವರ್ಷಗಳ ಕಾಲ ದೇಶದ ವಿವಿಧೆಡೆ ಮತ್ತು ವಿದೇಶದಲ್ಲಿಯೂ ಕೆಲಸ ಮಾಡಿದ್ದಾರೆ. ಆದರೆ ಕೃಷಿಯ ಸೆಳೆತದಿಂದ ಉದ್ಯೋಗಕ್ಕೆ ತಿಲಾಂಜಲಿ ನೀಡಿ ಊರಿಗೆ ಮರಳಿ ಪರಂಪರಾಗತವಾಗಿ ಬಂದಿರುವ ಕೃಷಿ ಕಾಯಕ ಮುಂದುವರಿಸಿದ್ದಾರೆ. ಅಡಿಕೆ, ತೆಂಗು ಕೃಷಿಯ ಜತೆಗೆ ಬಾಳೆ, ವಿವಿಧ
ಹಣ್ಣುಗಳು, ಗಿಡಮೂಲಿಕೆಗಳು, ತರಕಾರಿ ಕೃಷಿಗೂ ವಿಸ್ತರಿಸಿ ದ್ದಾರೆ. ಆದರೆ ನಿರಂತರ ಹಾನಿ ಮಾಡುವ  ಮಂಗಗಳು ಮತ್ತು
ಕಾಡುಹಂದಿಗಳ ಉಪಟಳ ತಾಳಲಾರದೆ 16 ವಿಧದ ತಂತ್ರಜ್ಞಾನ ಗಳನ್ನು ಪ್ರಯತ್ನಿಸಿ ಕೊನೆಗೆ ಈ ಎಲ್‌ಇಡಿ ಬೆಳಕಿನ ಆವಿಷ್ಕಾರದ ಮೂಲಕ ಯಶಸ್ಸು ಸಾಧಿಸಿದ್ದಾರೆ. ಇದಕ್ಕೆ ಇತರೆಡೆಗಳಿಂದಲೂ ಬೇಡಿಕೆ ಒದಗುತ್ತಿದ್ದು, ಸಾಧಕ ಕೃಷಿಕರೊಬ್ಬರ ಆವಿಷ್ಕಾರಕ್ಕೆ ಸಂದ ಮನ್ನಣೆ ಎನ್ನಲು ಅಡ್ಡಿಯಿಲ್ಲ.

ಲಕ್ಷಾಂತರ ರೂ. ವ್ಯಯಿಸಿ ನಡೆಸುವ ಕೃಷಿಗೆ ನಿರೀಕ್ಷಿತ ಲಾಭ ಬರುವ ಹಂತದಲ್ಲಿ ಕಾಡುಪ್ರಾಣಿಗಳ ಉಪಟಳ ತೀವ್ರ ನೋವು ಉಂಟು ಮಾಡುತ್ತಿತ್ತು. ನನಗಿರುವ ತಾಂತ್ರಿಕ ಜ್ಞಾನವನ್ನು ಅನ್ವಯಿಸಿ ಈ ತಂತ್ರವನ್ನು ಆವಿಷ್ಕರಿಸಿ ಯಶಸ್ವಿಯಾಗಿದ್ದೇನೆ, ಖುಷಿನೀಡಿದೆ. ಅರಣ್ಯ ಇಲಾಖೆ ನನ್ನ ಆವಿಷ್ಕಾರವನ್ನು ಬೆಂಬಲಿಸಿ ಬೇಡಿಕೆ ನೀಡಿರುವುದು ಇನ್ನಷ್ಟು ಉತ್ಸಾಹಕ್ಕೆ ಕಾರಣವಾಗಿದೆ. ಸಾಮಾನ್ಯ ತೋಟಗಳಿಗೆ ಕೇವಲ 2 ಸಾವಿರ ರೂ. ವೆಚ್ಚದಲ್ಲಿ ಮತ್ತು ಕಾಡಾನೆಗಳ ನಿಯಂತ್ರಣದಂತಹ ಉನ್ನತ ಮಟ್ಟಕ್ಕೆ ಸುಮಾರು 6 ಸಾವಿರ ರೂ. ವೆಚ್ಚದಲ್ಲಿ ಇದನ್ನು ಅಳವಡಿಸಬಹುದಾಗಿದೆ.
– ರಾಜಗೋಪಾಲ ಭಟ್‌ ಕೈಪಂಗಳ

– ರಾಮಚಂದ್ರ ಬಲ್ಲಾಳ್‌ ನಾಟೆಕಲ್ಲು

ಟಾಪ್ ನ್ಯೂಸ್

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.